AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದಲ್ಲಿ ಹನುಮಾನ್​ ಚಾಲೀಸ; ಭಕ್ತಿ-ಭಾವದಿಂದ ಹಾಡಿದ ಖ್ಯಾತ ಗಾಯಕ ವಿಜಯ್​ ಪ್ರಕಾಶ್

‘ನಾನು ಕನ್ನಡದ ಹನುಮಾನ್​ ಚಾಲೀಸ ಹಾಡಿದ್ದೇನೆ. ಏನೇ ತಪ್ಪುಗಳು ಇದ್ದರೂ ದಯವಿಟ್ಟು ಕ್ಷಮಿಸಿ. ಇದೊಂದು ಬಹಳ ಭಕ್ತಿಯಿಂದ ಮಾಡಿದ ಪ್ರಯತ್ನ. ಆ ದೇವರ ಎಲ್ಲರಿಗೂ ಒಳ್ಳೆಯದು ಮಾಡಲಿ ಅಂತ ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ ವಿಜಯ್​ ಪ್ರಕಾಶ್​. ‘ಶ್ರೀಲಕ್ಷ್ಮಿ ವೆಂಕಟೇಶ್ವರ’ ಯೂಟ್ಯೂಬ್​ ಚಾನೆಲ್​ನಲ್ಲಿ ಇದು ಬಿಡುಗಡೆ ಆಗಿದೆ.

ಕನ್ನಡದಲ್ಲಿ ಹನುಮಾನ್​ ಚಾಲೀಸ; ಭಕ್ತಿ-ಭಾವದಿಂದ ಹಾಡಿದ ಖ್ಯಾತ ಗಾಯಕ ವಿಜಯ್​ ಪ್ರಕಾಶ್
ಕನ್ನಡದಲ್ಲಿ ಹನುಮಾನ್​ ಚಾಲೀಸ ಬಿಡುಗಡೆ
ಮದನ್​ ಕುಮಾರ್​
|

Updated on: Jan 09, 2024 | 12:35 PM

Share

ಆಂಜನೇಯನ ಕುರಿತು ಈಗಾಗಲೇ ಅನೇಕ ಕೃತಿಗಳು, ಹಾಡುಗಳು, ಭಕ್ತಿಗೀತೆಗಳು ರಚನೆ ಆಗಿವೆ. ಹನುಮ ಭಕ್ತರ ಮನದಲ್ಲಿ ಆ ಗೀತೆಗಳು ವಿಶೇಷ ಸ್ಥಾನ ಪಡೆದುಕೊಂಡಿವೆ. ಆದರೆ ಈಗ ಮೊಟ್ಟ ಮೊದಲ ಬಾರಿಗೆ ಹನುಮಾನ್ ಚಾಲೀಸವನ್ನು (Hanuman Chalisa) ಕನ್ನಡಕ್ಕೆ ಭಾಷಾಂತರ ಮಾಡಿ, ಸಂಗೀತ ನೀಡಿ ಬಿಡುಗಡೆ ಮಾಡಿರುವುದು ವಿಶೇಷ. ಹನುಮನ ಭಕ್ತರಾದ ವೆಂಕಟೇಶ್ ಉತ್ತರಹಳ್ಳಿ ಕುಟುಂಬದವರು ಇದರ ನಿರ್ಮಾಣ ಮಾಡಿದ್ದಾರೆ. ಕಾಂತರಾಜ್​ ಹೆಗಡೆ ಅವರು ಭಾಷಾಂತರ ಮಾಡಿದ್ದಾರೆ. ಭಾರಿ ಕಾಳಜಿ, ಶ್ರದ್ಧೆ ವಹಿಸಿ ಈ ಕಾರ್ಯ ಮಾಡಿರುವುದಾಗಿ ತಂಡದವರು ತಿಳಿಸಿದ್ದಾರೆ. ಇದಕ್ಕೆ ಖ್ಯಾತ ಗಾಯಕ ವಿಜಯ್​ ಪ್ರಕಾಶ್​ (Vijay Prakash) ಧ್ವನಿ ನೀಡಿದ್ದಾರೆ.

ದೇಶದಲ್ಲಿ ಈಗ ರಾಮಾಂಜನೇಯರ ಬಗ್ಗೆ ಮಾತುಗಳು ಹೆಚ್ಚಾಗಿವೆ. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಆರಂಭ ಆಗಿದೆ. ಈ ಸಮಯಲ್ಲಿ ಹನುಮಾನ್ ಚಾಲಿಸವನ್ನು ಕನ್ನಡಕ್ಕೆ ಭಾಷಾಂತರಿಸಿ, ವಿಶೇಷ ಪ್ರಯತ್ನ ಮಾಡಲಾಗಿದೆ. ಕನ್ನಡದಲ್ಲಿ ಹನುಮಾನ್​ ಚಾಲೀಸ ಹಾಡಿದಕ್ಕೆ ವಿಜಯ್​ ಪ್ರಕಾಶ್​ ಅವರಿಗೆ ಖುಷಿ ಆಗಿದೆ. ಬಹಳ ಭಕ್ತಿ-ಭಾವದಿಂದ ಅವರು ಇದನ್ನು ಹಾಡಿದ್ದಾರೆ.

Video: ಶಸ್ತ್ರಚಿಕಿತ್ಸೆ ವೇಳೆ ಪಿಯಾನೋ ಮೂಲಕ ಹನುಮಾನ್ ಚಾಲೀಸಾ ನುಡಿಸಿದ ಯುವಕ

‘ಶ್ರೀಲಕ್ಷ್ಮಿ ವೆಂಕಟೇಶ್ವರ’ ಯೂಟ್ಯೂಬ್​ ಚಾನೆಲ್​ನಲ್ಲಿ ಕನ್ನಡದ ಹನುಮಾನ್​ ಚಾಲೀಸ ಬಿಡುಗಡೆ ಆಗಿದೆ. ಕನ್ನಡದ ಹಲವು ಚಿತ್ರಗಳಿಗೆ ಸಂಗೀತ ನೀಡಿರುವ ಲೋಕಿ ತವಸ್ಯ ಅವರು ಇದಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ವೆಂಕಟೇಶ್​ ಉತ್ತರಹಳ್ಳಿ ಕುಟುಂಬದವರು ಹನುಮನ ಭಕ್ತರು. ಕನ್ನಡದಲ್ಲಿ ಹನುಮಾನ್​ ಚಾಲೀಸ ಮಾಡಬೇಕು ಎಂಬುದು ಅವರ ಮಹದಾಸೆ ಆಗಿತ್ತು. ಅದೀಗ ನೆರವೇರಿದೆ’ ಎಂದು ವಿಜಯ್​ ಪ್ರಕಾಶ್​ ಹೇಳಿದ್ದಾರೆ.

‘ನಾನು ಕನ್ನಡದ ಹನುಮಾನ್​ ಚಾಲೀಸ ಹಾಡಿದ್ದೇನೆ. ಏನೇ ತಪ್ಪುಗಳು ಇದ್ದರೂ ದಯವಿಟ್ಟು ಕ್ಷಮಿಸಿ. ಇದೊಂದು ಬಹಳ ಭಕ್ತಿಯಿಂದ ಮಾಡಿದ ಪ್ರಯತ್ನ. ಆ ದೇವರು ಎಲ್ಲರಿಗೂ ಒಳ್ಳೆಯದು ಮಾಡಲಿ ಅಂತ ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ ವಿಜಯ್​ ಪ್ರಕಾಶ್​. ಹನುಮನ ಭಕ್ತರಿಗೆ ಕನ್ನಡದ ಹನುಮಾನ್​ ಚಾಲೀಸ ಮೆಚ್ಚುಗೆ ಆಗಲಿದೆ ಎಂಬ ಭರವಸೆಯಲ್ಲಿ ಈ ಪ್ರಯತ್ನ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!