AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದಲ್ಲಿ ಹನುಮಾನ್​ ಚಾಲೀಸ; ಭಕ್ತಿ-ಭಾವದಿಂದ ಹಾಡಿದ ಖ್ಯಾತ ಗಾಯಕ ವಿಜಯ್​ ಪ್ರಕಾಶ್

‘ನಾನು ಕನ್ನಡದ ಹನುಮಾನ್​ ಚಾಲೀಸ ಹಾಡಿದ್ದೇನೆ. ಏನೇ ತಪ್ಪುಗಳು ಇದ್ದರೂ ದಯವಿಟ್ಟು ಕ್ಷಮಿಸಿ. ಇದೊಂದು ಬಹಳ ಭಕ್ತಿಯಿಂದ ಮಾಡಿದ ಪ್ರಯತ್ನ. ಆ ದೇವರ ಎಲ್ಲರಿಗೂ ಒಳ್ಳೆಯದು ಮಾಡಲಿ ಅಂತ ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ ವಿಜಯ್​ ಪ್ರಕಾಶ್​. ‘ಶ್ರೀಲಕ್ಷ್ಮಿ ವೆಂಕಟೇಶ್ವರ’ ಯೂಟ್ಯೂಬ್​ ಚಾನೆಲ್​ನಲ್ಲಿ ಇದು ಬಿಡುಗಡೆ ಆಗಿದೆ.

ಕನ್ನಡದಲ್ಲಿ ಹನುಮಾನ್​ ಚಾಲೀಸ; ಭಕ್ತಿ-ಭಾವದಿಂದ ಹಾಡಿದ ಖ್ಯಾತ ಗಾಯಕ ವಿಜಯ್​ ಪ್ರಕಾಶ್
ಕನ್ನಡದಲ್ಲಿ ಹನುಮಾನ್​ ಚಾಲೀಸ ಬಿಡುಗಡೆ
ಮದನ್​ ಕುಮಾರ್​
|

Updated on: Jan 09, 2024 | 12:35 PM

Share

ಆಂಜನೇಯನ ಕುರಿತು ಈಗಾಗಲೇ ಅನೇಕ ಕೃತಿಗಳು, ಹಾಡುಗಳು, ಭಕ್ತಿಗೀತೆಗಳು ರಚನೆ ಆಗಿವೆ. ಹನುಮ ಭಕ್ತರ ಮನದಲ್ಲಿ ಆ ಗೀತೆಗಳು ವಿಶೇಷ ಸ್ಥಾನ ಪಡೆದುಕೊಂಡಿವೆ. ಆದರೆ ಈಗ ಮೊಟ್ಟ ಮೊದಲ ಬಾರಿಗೆ ಹನುಮಾನ್ ಚಾಲೀಸವನ್ನು (Hanuman Chalisa) ಕನ್ನಡಕ್ಕೆ ಭಾಷಾಂತರ ಮಾಡಿ, ಸಂಗೀತ ನೀಡಿ ಬಿಡುಗಡೆ ಮಾಡಿರುವುದು ವಿಶೇಷ. ಹನುಮನ ಭಕ್ತರಾದ ವೆಂಕಟೇಶ್ ಉತ್ತರಹಳ್ಳಿ ಕುಟುಂಬದವರು ಇದರ ನಿರ್ಮಾಣ ಮಾಡಿದ್ದಾರೆ. ಕಾಂತರಾಜ್​ ಹೆಗಡೆ ಅವರು ಭಾಷಾಂತರ ಮಾಡಿದ್ದಾರೆ. ಭಾರಿ ಕಾಳಜಿ, ಶ್ರದ್ಧೆ ವಹಿಸಿ ಈ ಕಾರ್ಯ ಮಾಡಿರುವುದಾಗಿ ತಂಡದವರು ತಿಳಿಸಿದ್ದಾರೆ. ಇದಕ್ಕೆ ಖ್ಯಾತ ಗಾಯಕ ವಿಜಯ್​ ಪ್ರಕಾಶ್​ (Vijay Prakash) ಧ್ವನಿ ನೀಡಿದ್ದಾರೆ.

ದೇಶದಲ್ಲಿ ಈಗ ರಾಮಾಂಜನೇಯರ ಬಗ್ಗೆ ಮಾತುಗಳು ಹೆಚ್ಚಾಗಿವೆ. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಆರಂಭ ಆಗಿದೆ. ಈ ಸಮಯಲ್ಲಿ ಹನುಮಾನ್ ಚಾಲಿಸವನ್ನು ಕನ್ನಡಕ್ಕೆ ಭಾಷಾಂತರಿಸಿ, ವಿಶೇಷ ಪ್ರಯತ್ನ ಮಾಡಲಾಗಿದೆ. ಕನ್ನಡದಲ್ಲಿ ಹನುಮಾನ್​ ಚಾಲೀಸ ಹಾಡಿದಕ್ಕೆ ವಿಜಯ್​ ಪ್ರಕಾಶ್​ ಅವರಿಗೆ ಖುಷಿ ಆಗಿದೆ. ಬಹಳ ಭಕ್ತಿ-ಭಾವದಿಂದ ಅವರು ಇದನ್ನು ಹಾಡಿದ್ದಾರೆ.

Video: ಶಸ್ತ್ರಚಿಕಿತ್ಸೆ ವೇಳೆ ಪಿಯಾನೋ ಮೂಲಕ ಹನುಮಾನ್ ಚಾಲೀಸಾ ನುಡಿಸಿದ ಯುವಕ

‘ಶ್ರೀಲಕ್ಷ್ಮಿ ವೆಂಕಟೇಶ್ವರ’ ಯೂಟ್ಯೂಬ್​ ಚಾನೆಲ್​ನಲ್ಲಿ ಕನ್ನಡದ ಹನುಮಾನ್​ ಚಾಲೀಸ ಬಿಡುಗಡೆ ಆಗಿದೆ. ಕನ್ನಡದ ಹಲವು ಚಿತ್ರಗಳಿಗೆ ಸಂಗೀತ ನೀಡಿರುವ ಲೋಕಿ ತವಸ್ಯ ಅವರು ಇದಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ವೆಂಕಟೇಶ್​ ಉತ್ತರಹಳ್ಳಿ ಕುಟುಂಬದವರು ಹನುಮನ ಭಕ್ತರು. ಕನ್ನಡದಲ್ಲಿ ಹನುಮಾನ್​ ಚಾಲೀಸ ಮಾಡಬೇಕು ಎಂಬುದು ಅವರ ಮಹದಾಸೆ ಆಗಿತ್ತು. ಅದೀಗ ನೆರವೇರಿದೆ’ ಎಂದು ವಿಜಯ್​ ಪ್ರಕಾಶ್​ ಹೇಳಿದ್ದಾರೆ.

‘ನಾನು ಕನ್ನಡದ ಹನುಮಾನ್​ ಚಾಲೀಸ ಹಾಡಿದ್ದೇನೆ. ಏನೇ ತಪ್ಪುಗಳು ಇದ್ದರೂ ದಯವಿಟ್ಟು ಕ್ಷಮಿಸಿ. ಇದೊಂದು ಬಹಳ ಭಕ್ತಿಯಿಂದ ಮಾಡಿದ ಪ್ರಯತ್ನ. ಆ ದೇವರು ಎಲ್ಲರಿಗೂ ಒಳ್ಳೆಯದು ಮಾಡಲಿ ಅಂತ ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ ವಿಜಯ್​ ಪ್ರಕಾಶ್​. ಹನುಮನ ಭಕ್ತರಿಗೆ ಕನ್ನಡದ ಹನುಮಾನ್​ ಚಾಲೀಸ ಮೆಚ್ಚುಗೆ ಆಗಲಿದೆ ಎಂಬ ಭರವಸೆಯಲ್ಲಿ ಈ ಪ್ರಯತ್ನ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಸಿಎಂ, ಡಿಸಿಎಂ ಮತ್ತು ಹೆಚ್​ಎಂ ನಾಡಿನ ಬೇಷರತ್ ಕ್ಷಮೆ ಕೇಳಬೇಕು: ಸುರೇಶ್
ಸಿಎಂ, ಡಿಸಿಎಂ ಮತ್ತು ಹೆಚ್​ಎಂ ನಾಡಿನ ಬೇಷರತ್ ಕ್ಷಮೆ ಕೇಳಬೇಕು: ಸುರೇಶ್