AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದಲ್ಲಿ ಸಿದ್ಧವಾಗುತ್ತಿದೆ ‘ರಾವೆನ್’ ಸಿನಿಮಾ; ಕಾಗೆಯಿಂದ ಒಳ್ಳೆಯದಾಗೋ ಕಥೆ

‘ರಾವೆನ್’ ಎಂದರೆ ಕಾಗೆ ಎಂಬರ್ಥ ಇದೆ. ಈ ಚಿತ್ರದಲ್ಲಿ ಕಾಗೆಯೇ ಮುಖ್ಯಪಾತ್ರಧಾರಿ. ಕಾಗೆಯಿಂದ ಒಳ್ಳೆಯದಾಗುತ್ತಾ ಹೋಗುತ್ತದೆ. ಆ ರೀತಿಯಲ್ಲಿ ಕಥೆ ಸಾಗುತ್ತದೆ. ಸೆಪ್ಟೆಂಬರ್ 21ರಿಂದ ಶೂಟಿಂಗ್ ಆರಂಭವಾಗಲಿದೆ. ನಾಯಕನಾಗಿ ದಿಲೀಪ್ ಪೈ ನಟಿಸುತ್ತಿದ್ದಾರೆ.

ಕನ್ನಡದಲ್ಲಿ ಸಿದ್ಧವಾಗುತ್ತಿದೆ ‘ರಾವೆನ್’ ಸಿನಿಮಾ; ಕಾಗೆಯಿಂದ ಒಳ್ಳೆಯದಾಗೋ ಕಥೆ
ರಾವೆನ್ ತಂಡ
ರಾಜೇಶ್ ದುಗ್ಗುಮನೆ
|

Updated on: Sep 12, 2023 | 3:04 PM

Share

ಕಾಗೆಯನ್ನು ಎಲ್ಲರೂ ಅಪಶಕುನ ಎಂದು ಕರೆಯುತ್ತಾರೆ. ಒಳ್ಳೆಯ ಕೆಲಸಕ್ಕೆ ಹೊರಟಾಗ ಕಾಗೆ ಕಂಡರೆ ಕೆಲಸ ಆಗುವುದಿಲ್ಲ ಎನ್ನುವುದು ಅನೇಕರ ನಂಬಿಕೆ. ಇನ್ನು, ಕಾಗೆ (Crow) ಮುಟ್ಟಿದರೆ ಸ್ನಾನ ಮಾಡುವವರೂ ಅನೇಕರಿದ್ದಾರೆ. ಆದರೆ, ಕಾಗೆಯಿಂದ ಎಲ್ಲವೂ ಒಳ್ಳೆಯದೇ ಆದರೆ? ಹೀಗೊಂದು ಕಥೆಯ ಎಳೆ ಇಟ್ಟುಕೊಂಡು ‘ರಾವೆನ್’ (Raven Movie) ಹೆಸರಿನ ಸಿನಿಮಾ ಸಿದ್ಧಗೊಳ್ಳುತ್ತಿದೆ. ವಿಶ್ವ ಪ್ರೊಡಕ್ಷನ್ಸ್ ಹಾಗೂ ಆತ್ಮ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ಇತ್ತೀಚೆಗೆ ಮುಹೂರ್ತ ನೆರವೇರಿದೆ.

ಪ್ರಬಿಕ್ ಮೊಗವೀರ್ ಹಾಗೂ ವಿಶ್ವನಾಥ್ ಜಿ.ಪಿ ‘ರಾವೆನ್’ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ವೇದ್ ನಿರ್ದೇಶನ ಮಾಡುತ್ತಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಚಿತ್ರದ ಮುಹೂರ್ತ ಇತ್ತೀಚೆಗೆ ನೆರವೇರಿದೆ. ಚಿತ್ರದ ಮೊದಲ ದೃಶ್ಯಕ್ಕೆ ಶಾಸಕ ಗೋಪಾಲಯ್ಯ ಆರಂಭ ಫಲಕ ತೋರಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ. ಮ. ಹರೀಶ್, ನಿರ್ದೇಶಕ ಎಂ.ಡಿ. ಶ್ರೀಧರ್ ಮೊದಲಾದವರು ಆಗಮಿಸಿ ಚಿತ್ರತಂಡಕ್ಕೆ ಶುಭಕೋರಿದರು.

‘ರಾವೆನ್’ ಎಂದರೆ ಕಾಗೆ ಎಂಬರ್ಥ ಇದೆ. ಈ ಚಿತ್ರದಲ್ಲಿ ಕಾಗೆಯೇ ಮುಖ್ಯಪಾತ್ರಧಾರಿ. ಕಾಗೆಯಿಂದ ಒಳ್ಳೆಯದಾಗುತ್ತಾ ಹೋಗುತ್ತದೆ. ಆ ರೀತಿಯಲ್ಲಿ ಕಥೆ ಸಾಗುತ್ತದೆ. ಸೆಪ್ಟೆಂಬರ್ 21ರಿಂದ ಶೂಟಿಂಗ್ ಆರಂಭವಾಗಲಿದೆ. ನಾಯಕನಾಗಿ ದಿಲೀಪ್ ಪೈ ನಟಿಸುತ್ತಿದ್ದಾರೆ. ಕುಂಕುಮ, ಸ್ವಪ್ನ ಶೆಟ್ಟಿಗಾರ್ ಚಿತ್ರದಲ್ಲಿ ನಾಯಕಿಯರಾಗಿ ನಟಿಸುತ್ತಿದ್ದಾರೆ. ಸುಚೇಂದ್ರ ಪ್ರಸಾದ್, ಶ್ರೇಯಾ ಆರಾಧ್ಯ, ಲೀಲಾ ಮೋಹನ್ ಮೊದಲಾದವರು ಪಾತ್ರವರ್ಗದಲ್ಲಿದ್ದಾರೆ. ಕ್ರಿಸ್ಟಫರ್ ಸಂಗೀತ ಸಂಯೋಜನೆ, ಆರ್​ಸಿಟಿ ಛಾಯಾಗ್ರಹಣ ಇದೆ. ವೇದ್ ಅವರು ಈ ಮೊದಲು ಎಂ.ಡಿ.ಶ್ರೀಧರ್ ಮೊದಲಾದವರ ಬಳಿ ಸಹಾಯಕ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದರು. ಇದು ಅವರ ನಿರ್ದೇಶನದ ಎರಡನೇ ಸಿನಿಮಾ.

ಇದನ್ನೂ ಓದಿ: ‘ಶಿವಾಜಿ’ ಸ್ಟೈಲ್​ನಲ್ಲಿ ರಜನಿಕಾಂತ್​ನ ಸ್ವಾಗತಿಸಿದ ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ

ವಿಶ್ವನಾಥ್ ಅವರಿಗೆ ವೇದ್ ಹೇಳಿದ ಕಥೆ ಇಷ್ಟವಾಯಿತು. ಹೀಗಾಗಿ ನಿರ್ಮಾಣಕ್ಕೆ ಮುಂದೆ ಬಂದರು. ಪ್ರಬಿಕ್ ಮೊಗವೀರ್ ಕೂಡ ನಿರ್ಮಾಣದಲ್ಲಿ ಸಾಥ್ ನೀಡಿದ್ದಾರೆ. ಪ್ರಬಿಕ್ ಅವರು ಕಳೆದ 10 ವರ್ಷಗಳಿಂದ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​