AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದಲ್ಲಿ ಸಿದ್ಧವಾಗುತ್ತಿದೆ ‘ರಾವೆನ್’ ಸಿನಿಮಾ; ಕಾಗೆಯಿಂದ ಒಳ್ಳೆಯದಾಗೋ ಕಥೆ

‘ರಾವೆನ್’ ಎಂದರೆ ಕಾಗೆ ಎಂಬರ್ಥ ಇದೆ. ಈ ಚಿತ್ರದಲ್ಲಿ ಕಾಗೆಯೇ ಮುಖ್ಯಪಾತ್ರಧಾರಿ. ಕಾಗೆಯಿಂದ ಒಳ್ಳೆಯದಾಗುತ್ತಾ ಹೋಗುತ್ತದೆ. ಆ ರೀತಿಯಲ್ಲಿ ಕಥೆ ಸಾಗುತ್ತದೆ. ಸೆಪ್ಟೆಂಬರ್ 21ರಿಂದ ಶೂಟಿಂಗ್ ಆರಂಭವಾಗಲಿದೆ. ನಾಯಕನಾಗಿ ದಿಲೀಪ್ ಪೈ ನಟಿಸುತ್ತಿದ್ದಾರೆ.

ಕನ್ನಡದಲ್ಲಿ ಸಿದ್ಧವಾಗುತ್ತಿದೆ ‘ರಾವೆನ್’ ಸಿನಿಮಾ; ಕಾಗೆಯಿಂದ ಒಳ್ಳೆಯದಾಗೋ ಕಥೆ
ರಾವೆನ್ ತಂಡ
ರಾಜೇಶ್ ದುಗ್ಗುಮನೆ
|

Updated on: Sep 12, 2023 | 3:04 PM

Share

ಕಾಗೆಯನ್ನು ಎಲ್ಲರೂ ಅಪಶಕುನ ಎಂದು ಕರೆಯುತ್ತಾರೆ. ಒಳ್ಳೆಯ ಕೆಲಸಕ್ಕೆ ಹೊರಟಾಗ ಕಾಗೆ ಕಂಡರೆ ಕೆಲಸ ಆಗುವುದಿಲ್ಲ ಎನ್ನುವುದು ಅನೇಕರ ನಂಬಿಕೆ. ಇನ್ನು, ಕಾಗೆ (Crow) ಮುಟ್ಟಿದರೆ ಸ್ನಾನ ಮಾಡುವವರೂ ಅನೇಕರಿದ್ದಾರೆ. ಆದರೆ, ಕಾಗೆಯಿಂದ ಎಲ್ಲವೂ ಒಳ್ಳೆಯದೇ ಆದರೆ? ಹೀಗೊಂದು ಕಥೆಯ ಎಳೆ ಇಟ್ಟುಕೊಂಡು ‘ರಾವೆನ್’ (Raven Movie) ಹೆಸರಿನ ಸಿನಿಮಾ ಸಿದ್ಧಗೊಳ್ಳುತ್ತಿದೆ. ವಿಶ್ವ ಪ್ರೊಡಕ್ಷನ್ಸ್ ಹಾಗೂ ಆತ್ಮ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ಇತ್ತೀಚೆಗೆ ಮುಹೂರ್ತ ನೆರವೇರಿದೆ.

ಪ್ರಬಿಕ್ ಮೊಗವೀರ್ ಹಾಗೂ ವಿಶ್ವನಾಥ್ ಜಿ.ಪಿ ‘ರಾವೆನ್’ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ವೇದ್ ನಿರ್ದೇಶನ ಮಾಡುತ್ತಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಚಿತ್ರದ ಮುಹೂರ್ತ ಇತ್ತೀಚೆಗೆ ನೆರವೇರಿದೆ. ಚಿತ್ರದ ಮೊದಲ ದೃಶ್ಯಕ್ಕೆ ಶಾಸಕ ಗೋಪಾಲಯ್ಯ ಆರಂಭ ಫಲಕ ತೋರಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ. ಮ. ಹರೀಶ್, ನಿರ್ದೇಶಕ ಎಂ.ಡಿ. ಶ್ರೀಧರ್ ಮೊದಲಾದವರು ಆಗಮಿಸಿ ಚಿತ್ರತಂಡಕ್ಕೆ ಶುಭಕೋರಿದರು.

‘ರಾವೆನ್’ ಎಂದರೆ ಕಾಗೆ ಎಂಬರ್ಥ ಇದೆ. ಈ ಚಿತ್ರದಲ್ಲಿ ಕಾಗೆಯೇ ಮುಖ್ಯಪಾತ್ರಧಾರಿ. ಕಾಗೆಯಿಂದ ಒಳ್ಳೆಯದಾಗುತ್ತಾ ಹೋಗುತ್ತದೆ. ಆ ರೀತಿಯಲ್ಲಿ ಕಥೆ ಸಾಗುತ್ತದೆ. ಸೆಪ್ಟೆಂಬರ್ 21ರಿಂದ ಶೂಟಿಂಗ್ ಆರಂಭವಾಗಲಿದೆ. ನಾಯಕನಾಗಿ ದಿಲೀಪ್ ಪೈ ನಟಿಸುತ್ತಿದ್ದಾರೆ. ಕುಂಕುಮ, ಸ್ವಪ್ನ ಶೆಟ್ಟಿಗಾರ್ ಚಿತ್ರದಲ್ಲಿ ನಾಯಕಿಯರಾಗಿ ನಟಿಸುತ್ತಿದ್ದಾರೆ. ಸುಚೇಂದ್ರ ಪ್ರಸಾದ್, ಶ್ರೇಯಾ ಆರಾಧ್ಯ, ಲೀಲಾ ಮೋಹನ್ ಮೊದಲಾದವರು ಪಾತ್ರವರ್ಗದಲ್ಲಿದ್ದಾರೆ. ಕ್ರಿಸ್ಟಫರ್ ಸಂಗೀತ ಸಂಯೋಜನೆ, ಆರ್​ಸಿಟಿ ಛಾಯಾಗ್ರಹಣ ಇದೆ. ವೇದ್ ಅವರು ಈ ಮೊದಲು ಎಂ.ಡಿ.ಶ್ರೀಧರ್ ಮೊದಲಾದವರ ಬಳಿ ಸಹಾಯಕ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದರು. ಇದು ಅವರ ನಿರ್ದೇಶನದ ಎರಡನೇ ಸಿನಿಮಾ.

ಇದನ್ನೂ ಓದಿ: ‘ಶಿವಾಜಿ’ ಸ್ಟೈಲ್​ನಲ್ಲಿ ರಜನಿಕಾಂತ್​ನ ಸ್ವಾಗತಿಸಿದ ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ

ವಿಶ್ವನಾಥ್ ಅವರಿಗೆ ವೇದ್ ಹೇಳಿದ ಕಥೆ ಇಷ್ಟವಾಯಿತು. ಹೀಗಾಗಿ ನಿರ್ಮಾಣಕ್ಕೆ ಮುಂದೆ ಬಂದರು. ಪ್ರಬಿಕ್ ಮೊಗವೀರ್ ಕೂಡ ನಿರ್ಮಾಣದಲ್ಲಿ ಸಾಥ್ ನೀಡಿದ್ದಾರೆ. ಪ್ರಬಿಕ್ ಅವರು ಕಳೆದ 10 ವರ್ಷಗಳಿಂದ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ