AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್ ಹಾಸನ್ ಹೇಳಿಕೆ ವಿರುದ್ಧ ಧ್ವನಿ ಎತ್ತಿದ ಅಹಿಂಸಾ ಚೇತನ್; ಉಳಿದ ಸೆಲೆಬ್ರಿಟಿಗಳ ಮೌನವೇಕೆ?

ಕಮಲ್ ಹಾಸನ್ ಅವರ ‘ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂಬ ಹೇಳಿಕೆ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಅಹಿಂಸಾ ಚೇತನ್ ಅವರು ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಆದರೆ, ಅನೇಕ ಕನ್ನಡ ಸೆಲೆಬ್ರಿಟಿಗಳು ಮೌನವಾಗಿರುವುದು ನಿರಾಶಾದಾಯಕ. ಕನ್ನಡದ ಗೌರವಕ್ಕಾಗಿ ಒಗ್ಗಟ್ಟಿನ ಅಗತ್ಯವಿದೆ ಎಂಬುದು ಈ ಘಟನೆಯಿಂದ ಸ್ಪಷ್ಟವಾಗಿದೆ.

ಕಮಲ್ ಹಾಸನ್ ಹೇಳಿಕೆ ವಿರುದ್ಧ ಧ್ವನಿ ಎತ್ತಿದ ಅಹಿಂಸಾ ಚೇತನ್; ಉಳಿದ ಸೆಲೆಬ್ರಿಟಿಗಳ ಮೌನವೇಕೆ?
ಅಹಿಂಸಾ ಚೇತನ್-ಕಮಲ್ ಹಾಸನ್
ರಾಜೇಶ್ ದುಗ್ಗುಮನೆ
|

Updated on: May 28, 2025 | 12:06 PM

Share

ಕಮಲ್ ಹಾಸನ್ (Kamal Haasan) ಅವರು ತಮ್ಮ ನಟನೆಯ ‘ಥಗ್ ಲೈಫ್’ ಸಿನಿಮಾ ಪ್ರಚಾರ ಮಾಡುವ ವೇಳೆ ಅಚಾತುರ್ಯ ಮಾಡಿದ್ದಾರೆ. ‘ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂಬರ್ಥದಲ್ಲಿ ಅವರು ಮಾತನಾಡಿರೋದು ಚರ್ಚೆಯನ್ನು ಹುಟ್ಟುಹಾಕಿದೆ. ಈಗ ಈ ವಿಚಾರದಲ್ಲಿ ಅಹಿಂಸಾ ಚೇತನ್ ಅವರು ಟ್ವೀಟ್ ಮಾಡಿದ್ದು, ಕಮಲ್ ಹಾಸನ್ ಹೇಳಿಕೆ ತಪ್ಪು ಎಂದಿದ್ದಾರೆ. ಆದರೆ, ಉಳಿದ ಸೆಲೆಬ್ರಿಟಿಗಳು ಈ ಬಗ್ಗೆ ಮೌನ ವಹಿಸಿದ್ದಾರೆ. ಈ ಬಗ್ಗೆ ಎಲ್ಲರೂ ಒಂದಾಗುವ ಅಗತ್ಯವಿದೆ ಎಂಬ ಅಭಿಪ್ರಾಯ ಕೇಳಿ ಬಂದಿದೆ.

ಮಣಿರತ್ನಂ ನಿರ್ದೇಶನದ ‘ಥಗ್ ಲೈಫ್’ ಸಿನಿಮಾ ಜೂನ್ 5ರಂದು ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಕಮಲ್ ಹಾಸನ್ ನಾಯಕ. ಇತ್ತೀಚೆಗೆ ತಮಿಳುನಾಡಿನಲ್ಲಿ ಈ ಸಿನಿಮಾದ ಈವೆಂಟ್ ನಡೆದಿದೆ. ಈ ವೇಳೆ ಕಮಲ್ ಹಾಸನ್ ಅವರು ‘ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂದು ನೇರವಾಗಿ ಹೇಳಿಕೆ ನೀಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಅವರ ಚಿತ್ರವನ್ನು ಕರ್ನಾಟಕದಲ್ಲಿ ರಿಲೀಸ್ ಮಾಡಲು ಬಿಡಬಾರದು ಎನ್ನುವ ಆಗ್ರಹ ಕೇಳಿ ಬಂದಿದೆ. ಇದರ ಜೊತೆಗೆ ಕೆಲವೇ ಕೆಲವು ಸೆಲೆಬ್ರಿಟಿಗಳು ಕಮಲ್ ಹಾಸನ್ ಬಗ್ಗೆ ಅಪಸ್ವರ ತೆಗೆದಿದ್ದಾರೆ.

ಇದನ್ನೂ ಓದಿ
Image
ನಟಿ ದೀಪಿಕಾಗೆ ಕ್ಯಾನ್ಸರ್; ಹೊಟ್ಟೆಯಲ್ಲಿದೆ ಟೆನಿಸ್ ಬಾಲ್ ಆಕಾರದ ಗಡ್ಡೆ
Image
RCB ಗೆಲುವಿನ ಖುಷಿಯಲ್ಲಿ ವಿರಾಟ್​ಗೆ ಮುತ್ತಿನ ಸುರಿಮಳೆ ಸುರಿಸಿದ ಅನುಷ್ಕಾ
Image
ಕಮಲ್ ಹಾಸನ್ ವಿವಾದ: ಕನ್ನಡಿಗರ ಕೆರಳಿಸಿದ ನಟನ​ ಚಿತ್ರಕ್ಕೆ ಸಂಕಷ್ಟ
Image
‘ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇನೆ’; ಅನುಶ್ರೀಗೆ ನೇರವಾಗಿ ಹೇಳಿದ ಮನೋಜ್

ಇದನ್ನೂ ಓದಿ: ಕನ್ನಡಿಗರ ಕೆರಳಿಸಿದ ಕಮಲ್ ಹಾಸನ್​ ಚಿತ್ರಕ್ಕೆ ಸಂಕಷ್ಟ; ‘ಥಗ್ ಲೈಫ್’ಗೆ ಸವಾಲಾದ ವಿವಾದ

ಅಹಿಂಸಾ ಚೇತನ್ ಟ್ವೀಟ್

ಕಮಲ್ ಹಾಸನ್ ಹೇಳಿಕೆಗೆ ಸಂಬಂಧಿಸಿದಂತೆ ನಟ ಅಹಿಂಸಾ ಚೇತನ್ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ. ‘ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಕಮಲ್ ಹಾಸನ್‌ ಅವರು ಹೇಳಿದ್ದಾರೆ. ಆದರೆ, ಇದು ನಿಜವಲ್ಲ. ತಮಿಳು ಕನ್ನಡಕ್ಕಿಂತ ಹಳೆಯದು ಇರಬಹುದು. ಆದರೆ, ಕನ್ನಡ ಅದರ ಉತ್ಪನ್ನವಲ್ಲ. ಎರಡೂ ಭಾಷೆಗಳು ಒಂದೇ ಮೂಲವನ್ನು ಹೊಂದಿವೆ. ಅಕ್ಕ-ತಂಗಿಯರಂತೆ ಪ್ರತ್ಯೇಕ ಮಾರ್ಗಗಳಲ್ಲಿ ಬೆಳದುಕೊಂಡು ಬಂದಿವೆ. ನಟ ಕಮಲ್ ಹಾಸನ್ ಹೇಳಿಕೆ ದೋಷಪೂರಿತ’ ಎಂದು ಬರೆದುಕೊಂಡಿದ್ದಾರೆ.

ಉಳಿದ ಸೆಲೆಬ್ರಿಟಿಗಳ ಮೌನ

ಕಮಲ್ ಹಾಸನ್ ಟ್ವೀಟ್​ಗೆ ಕನ್ನಡದ ಕೆಲವೇ ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಆದರೆ, ಬಹುತೇಕ ಸೆಲೆಬ್ರಿಟಿಗಳು ಈ ವಿಚಾರದಲ್ಲಿ ಮೌನ ತಾಳಿದ್ದಾರೆ. ಕನ್ನಡದ ಭಾಷಾ ವಿಚಾರ, ನೀರಿನ ವಿಚಾರ ಬಂದಾಗ ರಾಜ್​ಕುಮಾರ್ ಕಾಲದಲ್ಲಿ ಸೆಲೆಬ್ರಿಟಿಗಳು ಒಗ್ಗಟ್ಟಾಗಿ ಬೀದಿಗೆ ಇಳಿದು ಪ್ರತಿಭಟನೆ ಮಾಡಿದ ಉದಾಹರಣೆ ಸಾಕಷ್ಟಿದೆ. ಆದರೆ, ಇತ್ತೀಚೆಗೆ ಈ ಒಗ್ಗಟ್ಟು ಕಡಿಮೆ ಆಗುತ್ತಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿವೆ. ಕನ್ನಡ ವಿರೋಧಿ ಹೇಳಿಕೆಗಳನ್ನು ನೀಡಿದಾಗ ಪ್ರತಿಭಟನೆ ಮಾಡೋದು ಹಾಗಿರಲಿ, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ವಿರೋಧಿಸುವುದನ್ನು ಕೂಡ ಅನೇಕ ಸೆಲೆಬ್ರಿಟಿಗಳು ಮರೆತಿದ್ದಾರೆ.

ಕರವೇ ಅಧ್ಯಕ್ಷ ನಾರಾಯಣಗೌಡ ಖಂಡನೆ

‘ನಟ, ರಾಜಕಾರಣಿ ಕಮಲ್ ಹಾಸನ್ ನೀಡಿರುವ ಹೇಳಿಕೆ ಸಂಪೂರ್ಣ ಸುಳ್ಳು. ದುರುದ್ದೇಶಪೂರಿತ ಮತ್ತು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಹದ್ದಾಗಿದೆ. ಈ ಹೇಳಿಕೆ ಕಮಲ್ ಹಾಸನ್ ಅವರ ಅಜ್ಞಾನವನ್ನು ಬಯಲುಗೊಳಿಸುತ್ತದೆ. ಕನ್ನಡ ಮತ್ತು ತಮಿಳು ಭಾಷೆಗಳು ದ್ರಾವಿಡ ಭಾಷಾ ಕುಟುಂಬಕ್ಕೆ ಸೇರಿದ್ದರೂ, ಇವು ತಮ್ಮದೇ ಆದ ಸ್ವತಂತ್ರ ಇತಿಹಾಸ, ಸಾಹಿತ್ಯ, ಸಂಸ್ಕೃತಿಯನ್ನು ಹೊಂದಿವೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ