Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ನ ಖ್ಯಾತ ನಿರ್ಮಾಪಕರ ಕಾರು ಅಪಘಾತ..!

Soorappa Babu: ಪವರ್​ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಪೃಥ್ವಿ, ರವಿಚಂದ್ರನ್ ಅಭಿನಯದ ದಶಮುಖ ಹಾಗೂ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-2, ಕೋಟಿಗೊಬ್ಬ-3 ಚಿತ್ರಗಳನ್ನು ಸೂರಪ್ಪ ಬಾಬು ನಿರ್ಮಿಸಿದ್ದರು.

ಸ್ಯಾಂಡಲ್​ವುಡ್​ನ ಖ್ಯಾತ ನಿರ್ಮಾಪಕರ ಕಾರು ಅಪಘಾತ..!
soorappa babu
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 26, 2022 | 6:03 PM

ಸ್ಯಾಂಡಲ್​ವುಡ್​ನ ಖ್ಯಾತ ನಿರ್ಮಾಪಕ ಸೂರಪ್ಪ ಬಾಬು (Soorappa Babu) ಸಂಚರಿಸುತ್ತಿದ್ದ ಕಾರು ಅಪಘಾತವಾಗಿದೆ. ಕುಟುಂಬದೊಂದಿಗೆ ತಮಿಳುನಾಡಿಗೆ ಪ್ರಯಾಣಿಸುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಪವಾಡ ಸದೃಶ ರೀತಿಯಲ್ಲೂ ಎಲ್ಲರೂ ಪಾರಾಗಿದ್ದಾರೆ. ಬೆಂಗಳೂರಿನಿಂದ ಬೆಳಗಿನ ಜಾವ ಕುಟುಂಬಸ್ಥರೊಂದಿಗೆ ತೆರಳಿದ್ದರು. ಈ ವೇಳೆ ಹೊಸೂರಿನಲ್ಲಿ ಅಪಘಾತ ಸಂಭವಿಸಿದೆ. ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದರೂ, ಯಾರಿಗೂ ತೀವ್ರ ಗಾಯವಾಗಿಲ್ಲ ಎಂದು ಸೂರಪ್ಪ ಬಾಬು ತಿಳಿಸಿದ್ದಾರೆ.

ಭಾನುವಾರ ಬೆಳಗ್ಗೆ ಸೂರಪ್ಪ ಬಾಬು ಕುಟುಂಬಸ್ಥರು ತಮಿಳುನಾಡಿನಲ್ಲಿರುವ ಬ್ರಹ್ಮ ದೇವಸ್ಥಾನಕ್ಕೆ ಹೊರಟಿದ್ದರು. ಈ ವೇಳೆ ಹೊಸೂರು ಕ್ರಾಸ್ ಬಳಿ ಕಾರು ಆ್ಯಕ್ಸಿಡೆಂಟ್ ಆಗಿದೆ. ಈ ವೇಳೆ ಮುಂಭಾಗದಲ್ಲಿ ಕೂತಿದ್ದ ಸೂರಪ್ಪ ಬಾಬು ಅವರ ಕಾಲಿಗೆ ಪೆಟ್ಟಾಗಿದ್ದು, ಇತರರಿಗೆ ಯಾವುದೇ ತೊಂದರೆಯಾಗಿಲ್ಲ. ಕಾಲಿಗೆ ಕೊಂಚ ಪೆಟ್ಟು ಬಿದ್ದ ಕಾರಣ ವೈದ್ಯರಿಗೆ ತೋರಿಸಲು ಸೂರಪ್ಪ ಬಾಬು ಅಲ್ಲಿಂದ ಬೆಂಗಳೂರಿಗೆ ಹಿಂದಿರುಗಿದ್ದಾರೆ.

ನಾವು ಏಳು ಮಂದಿ ಇನ್ನೋವಾ ಕಾರಿನಲ್ಲಿ ದೇವಸ್ಥಾನಕ್ಕೆಂದು ಹೊರಟ್ಟಿದ್ದೆವು. ಆದರೆ ರಸ್ತೆ ಮಧ್ಯೆ ಅಪಘಾತ ಸಂಭವಿಸಿದೆ. ನನಗೆ ಈ ರೀತಿಯ ಅವಘಡ ಸಂಭವಿಸಿದ್ದು ಇದೇ ಮೊದಲು. ಆ ಸಮಯದಲ್ಲೂ ಅನೇಕರು ಅಲ್ಲಿಗೆ ಬಂದು ನನ್ನನ್ನು ಗುರುತಿಸಿದರು. ಅವರು ನಮಗೆ ಬೆಂಗಳೂರು ತಲುಪಲು ವ್ಯವಸ್ಥೆ ಮಾಡಿದರು. ನಾನು ಮುಂದಿನ ಸೀಟಿನಲ್ಲಿ ಕುಳಿತಿದ್ದೆ ಮತ್ತು ನನಗೆ ತೀವ್ರ ಕಾಲು ನೋವು ಕಾಣಿಸಿಕೊಂಡಿತು. ಹೀಗಾಗಿ ವೈದ್ಯರನ್ನು ಭೇಟಿಯಾಗಿ ಪರೀಕ್ಷಿಸಿದೆ. ಸದ್ಯ ಕಾಲಿಗೆ ಬ್ಯಾಂಡೇಜ್ ಹಾಕಲಾಗಿದ್ದು, ಈಗ ಆರಾಮಾಗಿದ್ದೇನೆ. ಅಲ್ಲದೆ ಸ್ವಲ್ಪ ದಿನ ರೆಸ್ಟ್ ತೆಗೆದುಕೊಳ್ಳಬೇಕೆಂದು ವೈದ್ಯರು ಸೂಚಿಸಿದ್ದಾರೆ ಎಂದು ಸೂರಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ
Image
KGF: ಕಬಾಲಿ ನಿರ್ದೇಶಕನ ಮಾಸ್ಟರ್​ ಪ್ಲ್ಯಾನ್​: ಬರಲಿದೆ ಮತ್ತೊಂದು ಕೆಜಿಎಫ್..!
Image
Yash Next Movie: ಯಶ್ ಮುಂದಿನ ಚಿತ್ರಕ್ಕೆ ಸೌತ್ ಸುಂದರಿ ನಾಯಕಿ..?
Image
Kabza: ಒಂದಲ್ಲ, ಎರಡಲ್ಲ, ಮೂರಲ್ಲ…ವಿದೇಶಿ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ ಕಬ್ಜ
Image
Rashmika Mandanna: ಮಿಂಚಿಂಗೊ ಮಿಂಚಿಂಗ್…ಸದ್ಯಕ್ಕಂತು ಕನ್ನಡಕ್ಕಿಲ್ಲ ರಶ್ಮಿಕಾ ಮಂದಣ್ಣ..!

ಕನ್ನಡ ಚಿತ್ರರಂಗದಲ್ಲಿ ವಿತಕರಾಗಿ ಹಾಗೂ ನಿರ್ಮಾಪಕರಾಗಿ ತೊಡಗಿಸಿಕೊಂಡಿರುವ ಸೂರಪ್ಪ ಬಾಬು ಅನೇಕ ಹಿಟ್​ ಚಿತ್ರಗಳನ್ನು ನೀಡಿದ್ದಾರೆ. ಪವರ್​ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಪೃಥ್ವಿ, ರವಿಚಂದ್ರನ್ ಅಭಿನಯದ ದಶಮುಖ ಹಾಗೂ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-2, ಕೋಟಿಗೊಬ್ಬ-3 ಚಿತ್ರಗಳನ್ನು ಸೂರಪ್ಪ ಬಾಬು ನಿರ್ಮಿಸಿದ್ದರು.

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ