AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shridhar Nayak Death: ‘ಪಾರು’ ಖ್ಯಾತಿಯ ನಟ ಶ್ರೀಧರ್ ನಾಯಕ್ ನಿಧನ; ಫಲಿಸಲಿಲ್ಲ ಪ್ರಾರ್ಥನೆ

Shridhar Nayak Passes Away: ಕನ್ನಡ ಕಿರುತೆರೆ ಮತ್ತು ಚಲನಚಿತ್ರ ನಟ ಶ್ರೀಧರ್ ನಾಯಕ್ ಅವರು ಮೇ 26ರಂದು ನಿಧನರಾಗಿದ್ದಾರೆ. 47 ವರ್ಷದ ಶ್ರೀಧರ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ‘ಪಾರು’ ಮತ್ತು ‘ವಧು’ ಧಾರಾವಾಹಿಗಳಲ್ಲಿ ಅವರ ಪಾತ್ರಗಳು ಜನಪ್ರಿಯವಾಗಿದ್ದವು. ‘ಮ್ಯಾಕ್ಸ್’ ಚಿತ್ರದಲ್ಲೂ ಅವರು ನಟಿಸಿದ್ದರು. ಅವರ ಅಕಾಲಿಕ ನಿಧನವು ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ.

Shridhar Nayak Death: ‘ಪಾರು’ ಖ್ಯಾತಿಯ ನಟ ಶ್ರೀಧರ್ ನಾಯಕ್ ನಿಧನ; ಫಲಿಸಲಿಲ್ಲ ಪ್ರಾರ್ಥನೆ
ಶ್ರೀಧರ್ ನಾಯಕ್
ರಾಜೇಶ್ ದುಗ್ಗುಮನೆ
| Updated By: Digi Tech Desk|

Updated on:May 27, 2025 | 8:39 AM

Share

ಕನ್ನಡ ಕಿರುತೆರೆಯಲ್ಲಿ ನಟಿಸಿ ಫೇಸಮ್ ಆಗಿದ್ದ ನಟ ಶ್ರೀಧರ್ ನಾಯಕ್ (Shridhar Nayak) ಅವರು ಮೇ 26ರ ರಾತ್ರಿ ನಿಧನ ಹೊಂದಿದ್ದಾರೆ. ಇತ್ತೀಚೆಗೆ ಅವರಿಗೆ ತೀವ್ರ ಅನಾರೋಗ್ಯ ಕಾಡಿತ್ತು. ಅವರಿಗೆ ಸಹಾಯ ಮಾಡುವಂತೆ ಅನೇಕರು ಕೋರಿಕೊಂಡಿದ್ದರು. ಅವರು ಗುರುತೇ ಸಿಗದಷ್ಟು ಬದಲಾಗಿ ಬೆಡ್ ಮೇಲೆ ಮಲಗಿದ್ದು ನೋಡಿ ಹಲವರಿಗೆ ಶಾಕ್ ಆಗಿತ್ತು. ಈಗ ಶ್ರೀಧರ್ ಅವರು ಚಿಕಿತ್ಸೆ ಫಲಕಾರಿ ಆಗದೆ ಕೊನೆಯುಸಿರು ಎಳೆದಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರ ಕಳೆಬರವನ್ನು ಇಡಲಾಗಿದೆ. ಅವರಿಗೆ 47 ವರ್ಷ ವಯಸ್ಸಾಗಿತ್ತು.

ಶ್ರೀಧರ್ ಅವರಿಗೆ ಅನಾರೋಗ್ಯ ಉಂಟಾದ ವಿಚಾರದ ಬಗ್ಗೆ ಏಪ್ರಿಲ್​ನಲ್ಲಿ ಸುದ್ದಿ ಬಿತ್ತರ ಆಯಿತು. ವಿಚಿತ್ರ ಸೋಂಕಿನಿಂದ ಅವರು ಈ ರೀತಿ ಆಗಿದ್ದರು. ಗುರುತು ಸಿಗದಷ್ಟು ಬದಲಾಗಿ ಅವರು ಆಸ್ಪತ್ರೆಯ ಬೆಡ್​ ಮೇಲೆ ಮಲಗಿರೋದು ಕಂಡು ಬಂದಿತ್ತು. ಇದನ್ನು ನೋಡಿ ಅಭಿಮಾನಿಗಳಿಗೆ ನಿಜಕ್ಕೂ ಶಾಕ್ ಆಗಿತ್ತು. ಅವರು ಚೇತರಿಕೆ ಕಾಣಲಿ ಎಂದು ಪ್ರಾರ್ಥಿಸಿದ್ದರು.

ಇತ್ತೀಚೆಗೆ ಶ್ರೀಧರ್ ಆರ್ಥಿಕ ಪರಿಸ್ಥಿತಿ ಹದಗೆಟ್ಟಿತ್ತು. ಹೀಗಾಗಿ, ಅವರು ಸಹಾಯ ಕೋರಿದ್ದರು. ಅನೇಕರು ಹಣದ ಸಹಾಯ ಕೂಡ ಮಾಡಿದ್ದರು. ಆದರೆ, ಚಿಕಿತ್ಸೆ ಫಲಕಾರಿ ಆಗಲಿಲ್ಲ. ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ
Image
‘ದೃಶ್ಯಂ’ ರೀತಿಯ ಈ ಸಿನಿಮಾ ಒಟಿಟಿಯಲ್ಲಿ; ಕನ್ನಡದಲ್ಲೂ ವೀಕ್ಷಣೆ ಲಭ್ಯ
Image
‘ಸರಿಗಮಪ’ ಫಿನಾಲೆಯಲ್ಲಿ ಇಲ್ಲ ಲಹರಿ ಮಹೇಶ್; ಅಭಿಮಾನಿಗಳ ಆಕ್ರೋಶ
Image
‘ಸೀತಾ ರಾಮ’ ಧಾರಾವಾಹಿಗೆ ವಿದಾಯದ ಸಂಚಿಕೆ; ಸೀತಾಗೆ ಗನ್​ ಹಿಡಿದ ಭಾರ್ಗವಿ
Image
‘ಕುಬೇರ’ ಟೀಸರ್: ಪಕ್ಕಾ ಮಿಡಲ್ ಕ್ಲಾಸ್ ಹುಡುಗಿಯಾದ ರಶ್ಮಿಕಾ; ಗ್ಲಾಮರ್ ಮಾಯ

‘ನಮ್ಮ ನಡುವಿದ್ದ ಕಲಾವಿದ ಶ್ರೀಧರ ನಾಯಕ್ ಬಹಳ ದಿನಗಳ ಅನಾರೋಗ್ಯದಿಂದ ಮುಕ್ತರಾಗಿ ರಾತ್ರಿ 10 ಗಂಟೆಗೆ ದೇವಸನ್ನಿಧಿ ಸೇರಿದ್ದಾರೆ.ಅವರ ಪಾರ್ಥೀವ ಶರೀರವು ಹೆಬ್ಬಾಳದಲ್ಲಿರುವ ಬ್ಯಾಪಿಸ್ಟ್ ಆಸ್ಪತ್ರೆಯಲ್ಲಿ ಬೆಳಿಗ್ಗೆ 11 ಘಂಟೆಯವರೆಗೆ (ಮೇ 27) ಅಂತಿಮ ದರ್ಶನದ ವ್ಯವಸ್ಥೆ ಮಾಡಿರುತ್ತಾರೆ’ ಎಂದು ನಾಗೇಂದ್ರ ಶಾನ್ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಹೋಳಿಗೆ ಮಾಡೋದು ಕಲಿತ ಬಿಗ್ ಬಾಸ್ ಸುಂದರಿ ಮೋಕ್ಷಿತಾ ಪೈ

1978ರಲ್ಲಿ ಶ್ರೀಧರ್ ಅವರು ಜನಿಸಿದರು. ಮೋಕ್ಷಿತಾ ಪೈ ನಟನೆಯ ‘ಪಾರು’ ಧಾರಾವಾಹಿಯಲ್ಲಿ ಆದಿಯ ಚಿಕ್ಕಪ್ಪನ ಪಾತ್ರವನ್ನು ಶ್ರೀಧರ್ ಮಾಡಿದ್ದರು. ಇತ್ತಿಚೆಗಷ್ಟೇ ಪ್ರಸಾರ ಆರಂಭಿಸಿರೋ ‘ವಧು’ ಧಾರಾವಾಹಿಯಲ್ಲಿ ಕಥಾ ನಾಯಕಿ ವಧುವಿನ ಚಿಕ್ಕಪ್ಪನ ಪಾತ್ರ ಮಾಡಿದ್ದರು. ಅವರು ‘ಮಂಗಳ ಗೌರಿ’ ಸೇರಿ 40ಕ್ಕೂ ಅಧಿಕ ಸೀರಿಯಲ್​ನಲ್ಲಿ ಅಭಿನಯಿಸಿದ್ದರು.  ಸುದೀಪ್ ನಟನೆಯ ‘ಮ್ಯಾಕ್ಸ್’ ಚಿತ್ರದಲ್ಲಿ ಅವರು ನಟಿಸಿದ್ದರು. ಈಗ ಅವರ ಸಾವು ಅಭಿಮಾನಿಗಳಿಗೆ ಅಪಾರ ನೋವು ತಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:26 am, Tue, 27 May 25

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ