AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಚಂದು ಗೌಡ ಮತ್ತು ಕಿರಣ್​ ರಾಜ್ ಮನೆಗೆ ಬಂತು ಐಷಾರಾಮಿ ಕಾರು!

ಸಾಕಷ್ಟು ಕಿರುತೆರೆ ನಟರು ಐಷಾರಾಮಿ ಕಾರು ಖರೀದಿಸಿ, ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ಸಾಲಿಗೆ ಈಗ ಕನ್ನಡದ ಖ್ಯಾತ ನಟರಾದ ಕಿರಣ್​ ರಾಜ್​ ಹಾಗೂ ಚಂದು ಬಿ. ಗೌಡ ಸೇರ್ಪಡೆ ಆಗಿದ್ದಾರೆ.

ನಟ ಚಂದು ಗೌಡ ಮತ್ತು ಕಿರಣ್​ ರಾಜ್ ಮನೆಗೆ ಬಂತು ಐಷಾರಾಮಿ ಕಾರು!
ಚಂದು ಗೌಡ ಮತ್ತು ಕಿರಣ್​ ರಾಜ್​
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Mar 29, 2021 | 3:40 PM

Share

ಕಿರುತೆರೆ ರಂಗ ಈಗ ಬದಲಾಗಿದೆ. ಧಾರಾವಾಹಿಗೆ ಬೇಡಿಕೆ ಹೆಚ್ಚಿದಂತೆ ಅಲ್ಲಿ ನಟಿಸುವ ಕಲಾವಿದರ ಸಂಭಾವನೆ ಕೂಡ ಜಾಸ್ತಿ ಆಗಿದೆ. ಕಿರುತೆರೆಯಲ್ಲಿ ನಟಿಸುವ ಸಾಕಷ್ಟು ಕಲಾವಿದರು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿದ್ದಾರೆ. ಹೀಗಾಗಿ, ಸಾಕಷ್ಟು ಕಿರುತೆರೆ ನಟರು ಐಷಾರಾಮಿ ಕಾರು ಖರೀದಿಸಿ, ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ಸಾಲಿಗೆ ಈಗ ಕನ್ನಡದ ಖ್ಯಾತ ನಟರಾದ ಕಿರಣ್​ ರಾಜ್​ ಹಾಗೂ ಚಂದು ಬಿ. ಗೌಡ ಸೇರ್ಪಡೆ ಆಗಿದ್ದಾರೆ. ಕನ್ನಡತಿ ಧಾರಾವಾಹಿ ಮೂಲಕ ಹರ್ಷ ಎಂದೇ ಖ್ಯಾತಿ ಪಡೆದವರು ಕಿರಣ್​ ರಾಜ್​. ಈ ಮೊದಲು ಇವರು ಹಿಂದಿ ಧಾರಾವಾಹಿಯಲ್ಲೂ ಕೂಡ ನಟಿಸಿದ್ದಾರೆ. ಕನ್ನಡತಿಯಲ್ಲಿ ಹರ್ಷನಾಗಿ ಕಾಣಿಸಿಕೊಳ್ಳುವ ಮೂಲಕ ಮನೆ ಮಾತಾಗಿದ್ದಾರೆ. ಧಾರಾವಾಹಿಯ ನಟಿ ಭುವಿ ಜತೆಗಿನ ಪ್ರೇಮಕತೆ ಎಲ್ಲರಿಗೂ ಇಷ್ಟವಾಗುತ್ತಿದೆ. ಹೀಗಾಗಿ, ಕಿರಣ್​ ರಾಜ್​ ಬೇಡಿಕೆ ಹೆಚ್ಚುತ್ತಿದೆ.

ಈಗ ಕಿರಣ್​ ರಾಜ್​ ಐಷಾರಾಮಿ ಮರ್ಸಿಡಿಸ್​ ಬೆಂಜ್​ ಕಾರನ್ನು ಖರೀದಿಸಿದ್ದಾರೆ. ಚಾಮರಾಜ ನಗರದ ದೇವಸ್ಥಾನಕ್ಕೆ ತೆರಳಿ ಅವರು ಪೂಜೆ ಕೂಡ ಮಾಡಿಸಿದ್ದಾರೆ. ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಅಭಿನಂದನೆ ತಿಳಿಸಿದ್ದಾರೆ.

View this post on Instagram

A post shared by Kiran Raj (@itskiranraj)

ಇನ್ನು, ಚಂದು ಬಿ. ಗೌಡ ಕಿರುತೆರೆ ಹಾಗೂ ಹಿರಿತೆರೆ ಎರಡಲ್ಲೂ ಮಿಂಚಿದವರು. ಗೃಹ ಲಕ್ಷ್ಮಿ ಧಾರಾವಾಹಿ ಮೂಲಕ ನಟನೆ ಆರಂಭಿಸಿದ ಚಂದು ನಂತರ ಲಕ್ಷ್ಮೀ ಬಾರಮ್ಮದಲ್ಲೂ ನಟಿಸಿದ್ದರು. 2018ರಲ್ಲಿ ತೆರೆಕಂಡ ಅಟೆಮ್ಟ್​ ಟು ಮರ್ಡರ್​ ಚಿತ್ರದ ಮೂಲಕ ಹಿರಿತೆರೆಗೂ ಕಾಲಿಟ್ಟರು. ಇತ್ತೀಚೆಗೆ ತೆರಕಂಡ ರಾಬರ್ಟ್​ ಸಿನಿಮಾದಲ್ಲೂ ಒಂದು ಪ್ರಮುಖ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು.

ಈಗ ಚಂದು ಆಡಿ ಕ್ಯೂ7 ಕಾರನ್ನು ಖರೀದಿ ಮಾಡಿದ್ದಾರೆ. ಈ ಫೋಟೋಗನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಕಾರಿನ ಆರಂಭಿಕ ಬೆಲೆ 69.27 ಲಕ್ಷ ರೂಪಾಯಿ (ಎಕ್ಸ್​ ಶೋ ರೂಂ) ಇದೆ. ಇವರಿಗೂ ಕೂಡ ಅಭಿನಂದನೆಯ ಸುರಿಮಳೆ ಹರಿದು ಬಂದಿದೆ.

ಇದನ್ನೂ ಓದಿ: ಗೀತಾ ಧಾರಾವಾಹಿ ನಟಿ ಭವ್ಯಾ ಗೌಡಗೆ ಬೆಳ್ಳಿತೆರೆ ಆಫರ್​; ಸಿನಿಮಾ ಯಾವುದು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ