AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಚಂದು ಗೌಡ ಮತ್ತು ಕಿರಣ್​ ರಾಜ್ ಮನೆಗೆ ಬಂತು ಐಷಾರಾಮಿ ಕಾರು!

ಸಾಕಷ್ಟು ಕಿರುತೆರೆ ನಟರು ಐಷಾರಾಮಿ ಕಾರು ಖರೀದಿಸಿ, ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ಸಾಲಿಗೆ ಈಗ ಕನ್ನಡದ ಖ್ಯಾತ ನಟರಾದ ಕಿರಣ್​ ರಾಜ್​ ಹಾಗೂ ಚಂದು ಬಿ. ಗೌಡ ಸೇರ್ಪಡೆ ಆಗಿದ್ದಾರೆ.

ನಟ ಚಂದು ಗೌಡ ಮತ್ತು ಕಿರಣ್​ ರಾಜ್ ಮನೆಗೆ ಬಂತು ಐಷಾರಾಮಿ ಕಾರು!
ಚಂದು ಗೌಡ ಮತ್ತು ಕಿರಣ್​ ರಾಜ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 29, 2021 | 3:40 PM

Share

ಕಿರುತೆರೆ ರಂಗ ಈಗ ಬದಲಾಗಿದೆ. ಧಾರಾವಾಹಿಗೆ ಬೇಡಿಕೆ ಹೆಚ್ಚಿದಂತೆ ಅಲ್ಲಿ ನಟಿಸುವ ಕಲಾವಿದರ ಸಂಭಾವನೆ ಕೂಡ ಜಾಸ್ತಿ ಆಗಿದೆ. ಕಿರುತೆರೆಯಲ್ಲಿ ನಟಿಸುವ ಸಾಕಷ್ಟು ಕಲಾವಿದರು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿದ್ದಾರೆ. ಹೀಗಾಗಿ, ಸಾಕಷ್ಟು ಕಿರುತೆರೆ ನಟರು ಐಷಾರಾಮಿ ಕಾರು ಖರೀದಿಸಿ, ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ಸಾಲಿಗೆ ಈಗ ಕನ್ನಡದ ಖ್ಯಾತ ನಟರಾದ ಕಿರಣ್​ ರಾಜ್​ ಹಾಗೂ ಚಂದು ಬಿ. ಗೌಡ ಸೇರ್ಪಡೆ ಆಗಿದ್ದಾರೆ. ಕನ್ನಡತಿ ಧಾರಾವಾಹಿ ಮೂಲಕ ಹರ್ಷ ಎಂದೇ ಖ್ಯಾತಿ ಪಡೆದವರು ಕಿರಣ್​ ರಾಜ್​. ಈ ಮೊದಲು ಇವರು ಹಿಂದಿ ಧಾರಾವಾಹಿಯಲ್ಲೂ ಕೂಡ ನಟಿಸಿದ್ದಾರೆ. ಕನ್ನಡತಿಯಲ್ಲಿ ಹರ್ಷನಾಗಿ ಕಾಣಿಸಿಕೊಳ್ಳುವ ಮೂಲಕ ಮನೆ ಮಾತಾಗಿದ್ದಾರೆ. ಧಾರಾವಾಹಿಯ ನಟಿ ಭುವಿ ಜತೆಗಿನ ಪ್ರೇಮಕತೆ ಎಲ್ಲರಿಗೂ ಇಷ್ಟವಾಗುತ್ತಿದೆ. ಹೀಗಾಗಿ, ಕಿರಣ್​ ರಾಜ್​ ಬೇಡಿಕೆ ಹೆಚ್ಚುತ್ತಿದೆ.

ಈಗ ಕಿರಣ್​ ರಾಜ್​ ಐಷಾರಾಮಿ ಮರ್ಸಿಡಿಸ್​ ಬೆಂಜ್​ ಕಾರನ್ನು ಖರೀದಿಸಿದ್ದಾರೆ. ಚಾಮರಾಜ ನಗರದ ದೇವಸ್ಥಾನಕ್ಕೆ ತೆರಳಿ ಅವರು ಪೂಜೆ ಕೂಡ ಮಾಡಿಸಿದ್ದಾರೆ. ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಅಭಿನಂದನೆ ತಿಳಿಸಿದ್ದಾರೆ.

View this post on Instagram

A post shared by Kiran Raj (@itskiranraj)

ಇನ್ನು, ಚಂದು ಬಿ. ಗೌಡ ಕಿರುತೆರೆ ಹಾಗೂ ಹಿರಿತೆರೆ ಎರಡಲ್ಲೂ ಮಿಂಚಿದವರು. ಗೃಹ ಲಕ್ಷ್ಮಿ ಧಾರಾವಾಹಿ ಮೂಲಕ ನಟನೆ ಆರಂಭಿಸಿದ ಚಂದು ನಂತರ ಲಕ್ಷ್ಮೀ ಬಾರಮ್ಮದಲ್ಲೂ ನಟಿಸಿದ್ದರು. 2018ರಲ್ಲಿ ತೆರೆಕಂಡ ಅಟೆಮ್ಟ್​ ಟು ಮರ್ಡರ್​ ಚಿತ್ರದ ಮೂಲಕ ಹಿರಿತೆರೆಗೂ ಕಾಲಿಟ್ಟರು. ಇತ್ತೀಚೆಗೆ ತೆರಕಂಡ ರಾಬರ್ಟ್​ ಸಿನಿಮಾದಲ್ಲೂ ಒಂದು ಪ್ರಮುಖ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು.

ಈಗ ಚಂದು ಆಡಿ ಕ್ಯೂ7 ಕಾರನ್ನು ಖರೀದಿ ಮಾಡಿದ್ದಾರೆ. ಈ ಫೋಟೋಗನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಕಾರಿನ ಆರಂಭಿಕ ಬೆಲೆ 69.27 ಲಕ್ಷ ರೂಪಾಯಿ (ಎಕ್ಸ್​ ಶೋ ರೂಂ) ಇದೆ. ಇವರಿಗೂ ಕೂಡ ಅಭಿನಂದನೆಯ ಸುರಿಮಳೆ ಹರಿದು ಬಂದಿದೆ.

ಇದನ್ನೂ ಓದಿ: ಗೀತಾ ಧಾರಾವಾಹಿ ನಟಿ ಭವ್ಯಾ ಗೌಡಗೆ ಬೆಳ್ಳಿತೆರೆ ಆಫರ್​; ಸಿನಿಮಾ ಯಾವುದು?

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್