AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಚಂದು ಗೌಡ ಮತ್ತು ಕಿರಣ್​ ರಾಜ್ ಮನೆಗೆ ಬಂತು ಐಷಾರಾಮಿ ಕಾರು!

ಸಾಕಷ್ಟು ಕಿರುತೆರೆ ನಟರು ಐಷಾರಾಮಿ ಕಾರು ಖರೀದಿಸಿ, ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ಸಾಲಿಗೆ ಈಗ ಕನ್ನಡದ ಖ್ಯಾತ ನಟರಾದ ಕಿರಣ್​ ರಾಜ್​ ಹಾಗೂ ಚಂದು ಬಿ. ಗೌಡ ಸೇರ್ಪಡೆ ಆಗಿದ್ದಾರೆ.

ನಟ ಚಂದು ಗೌಡ ಮತ್ತು ಕಿರಣ್​ ರಾಜ್ ಮನೆಗೆ ಬಂತು ಐಷಾರಾಮಿ ಕಾರು!
ಚಂದು ಗೌಡ ಮತ್ತು ಕಿರಣ್​ ರಾಜ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 29, 2021 | 3:40 PM

Share

ಕಿರುತೆರೆ ರಂಗ ಈಗ ಬದಲಾಗಿದೆ. ಧಾರಾವಾಹಿಗೆ ಬೇಡಿಕೆ ಹೆಚ್ಚಿದಂತೆ ಅಲ್ಲಿ ನಟಿಸುವ ಕಲಾವಿದರ ಸಂಭಾವನೆ ಕೂಡ ಜಾಸ್ತಿ ಆಗಿದೆ. ಕಿರುತೆರೆಯಲ್ಲಿ ನಟಿಸುವ ಸಾಕಷ್ಟು ಕಲಾವಿದರು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿದ್ದಾರೆ. ಹೀಗಾಗಿ, ಸಾಕಷ್ಟು ಕಿರುತೆರೆ ನಟರು ಐಷಾರಾಮಿ ಕಾರು ಖರೀದಿಸಿ, ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ಸಾಲಿಗೆ ಈಗ ಕನ್ನಡದ ಖ್ಯಾತ ನಟರಾದ ಕಿರಣ್​ ರಾಜ್​ ಹಾಗೂ ಚಂದು ಬಿ. ಗೌಡ ಸೇರ್ಪಡೆ ಆಗಿದ್ದಾರೆ. ಕನ್ನಡತಿ ಧಾರಾವಾಹಿ ಮೂಲಕ ಹರ್ಷ ಎಂದೇ ಖ್ಯಾತಿ ಪಡೆದವರು ಕಿರಣ್​ ರಾಜ್​. ಈ ಮೊದಲು ಇವರು ಹಿಂದಿ ಧಾರಾವಾಹಿಯಲ್ಲೂ ಕೂಡ ನಟಿಸಿದ್ದಾರೆ. ಕನ್ನಡತಿಯಲ್ಲಿ ಹರ್ಷನಾಗಿ ಕಾಣಿಸಿಕೊಳ್ಳುವ ಮೂಲಕ ಮನೆ ಮಾತಾಗಿದ್ದಾರೆ. ಧಾರಾವಾಹಿಯ ನಟಿ ಭುವಿ ಜತೆಗಿನ ಪ್ರೇಮಕತೆ ಎಲ್ಲರಿಗೂ ಇಷ್ಟವಾಗುತ್ತಿದೆ. ಹೀಗಾಗಿ, ಕಿರಣ್​ ರಾಜ್​ ಬೇಡಿಕೆ ಹೆಚ್ಚುತ್ತಿದೆ.

ಈಗ ಕಿರಣ್​ ರಾಜ್​ ಐಷಾರಾಮಿ ಮರ್ಸಿಡಿಸ್​ ಬೆಂಜ್​ ಕಾರನ್ನು ಖರೀದಿಸಿದ್ದಾರೆ. ಚಾಮರಾಜ ನಗರದ ದೇವಸ್ಥಾನಕ್ಕೆ ತೆರಳಿ ಅವರು ಪೂಜೆ ಕೂಡ ಮಾಡಿಸಿದ್ದಾರೆ. ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಅಭಿನಂದನೆ ತಿಳಿಸಿದ್ದಾರೆ.

View this post on Instagram

A post shared by Kiran Raj (@itskiranraj)

ಇನ್ನು, ಚಂದು ಬಿ. ಗೌಡ ಕಿರುತೆರೆ ಹಾಗೂ ಹಿರಿತೆರೆ ಎರಡಲ್ಲೂ ಮಿಂಚಿದವರು. ಗೃಹ ಲಕ್ಷ್ಮಿ ಧಾರಾವಾಹಿ ಮೂಲಕ ನಟನೆ ಆರಂಭಿಸಿದ ಚಂದು ನಂತರ ಲಕ್ಷ್ಮೀ ಬಾರಮ್ಮದಲ್ಲೂ ನಟಿಸಿದ್ದರು. 2018ರಲ್ಲಿ ತೆರೆಕಂಡ ಅಟೆಮ್ಟ್​ ಟು ಮರ್ಡರ್​ ಚಿತ್ರದ ಮೂಲಕ ಹಿರಿತೆರೆಗೂ ಕಾಲಿಟ್ಟರು. ಇತ್ತೀಚೆಗೆ ತೆರಕಂಡ ರಾಬರ್ಟ್​ ಸಿನಿಮಾದಲ್ಲೂ ಒಂದು ಪ್ರಮುಖ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು.

ಈಗ ಚಂದು ಆಡಿ ಕ್ಯೂ7 ಕಾರನ್ನು ಖರೀದಿ ಮಾಡಿದ್ದಾರೆ. ಈ ಫೋಟೋಗನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಕಾರಿನ ಆರಂಭಿಕ ಬೆಲೆ 69.27 ಲಕ್ಷ ರೂಪಾಯಿ (ಎಕ್ಸ್​ ಶೋ ರೂಂ) ಇದೆ. ಇವರಿಗೂ ಕೂಡ ಅಭಿನಂದನೆಯ ಸುರಿಮಳೆ ಹರಿದು ಬಂದಿದೆ.

ಇದನ್ನೂ ಓದಿ: ಗೀತಾ ಧಾರಾವಾಹಿ ನಟಿ ಭವ್ಯಾ ಗೌಡಗೆ ಬೆಳ್ಳಿತೆರೆ ಆಫರ್​; ಸಿನಿಮಾ ಯಾವುದು?

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?