AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಗ್ಗಿತು ‘ಲಕ್ಷ್ಮೀ ಬಾರಮ್ಮ’ ಟಿಆರ್​ಪಿ; ಹೆಚ್ಚಿತು ‘ಅಮೃತಧಾರೆ’ ವೀಕ್ಷಣೆ, ಪುಟ್ಟಕ್ಕನಿಗೆ ಮೊದಲ ಸ್ಥಾನ

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಇತ್ತೀಚೆಗೆ ಪ್ರಸಾರ ಆರಂಭಿಸಿದ ‘ಅಮೃತಧಾರೆ’ ಧಾರಾವಾಹಿಗೆ ದಿನ ಕಳೆದಂತೆ ವೀಕ್ಷಕರ ಸಂಖ್ಯೆ ಹೆಚ್ಚುತ್ತಿದೆ.

ತಗ್ಗಿತು ‘ಲಕ್ಷ್ಮೀ ಬಾರಮ್ಮ’ ಟಿಆರ್​ಪಿ; ಹೆಚ್ಚಿತು ‘ಅಮೃತಧಾರೆ’ ವೀಕ್ಷಣೆ, ಪುಟ್ಟಕ್ಕನಿಗೆ ಮೊದಲ ಸ್ಥಾನ
ಕನ್ನಡ ಧಾರಾವಾಹಿ ಟಿಆರ್​ಪಿ
ರಾಜೇಶ್ ದುಗ್ಗುಮನೆ
|

Updated on: Jun 22, 2023 | 12:38 PM

Share

ಕನ್ನಡದ ವಾಹಿನಿಗಳ ಮಧ್ಯೆ ಕಾಂಪಿಟೇಷನ್ ಜೋರಾಗಿದೆ. ಹಲವು ವಿಶೇಷ ಕಥೆಗಳೊಂದಿಗೆ ಧಾರಾವಾಹಿಗಳು ಬರುತ್ತಿವೆ. ಈ ಎಲ್ಲಾ ಧಾರಾವಾಹಿಗಳ ಮಧ್ಯೆ ಯಾವುದು ಚೆನ್ನಾಗಿ ಮೂಡಿಬರುತ್ತಿದೆ ಎಂಬುದನ್ನು ತಿಳಿಯೋಕೆ ಇರೋ ಮಾನದಂಡ ಟಿಆರ್​ಪಿ. ಈಗ ಜೂನ್ 9ರಿಂದ ಜೂನ್ 15ರವರೆಗಿನ ಧಾರಾವಾಹಿಗಳ ಟಿಆರ್​ಪಿ ಮಾಹಿತಿ ರಿವೀಲ್ ಆಗಿದೆ. ಈ ಪೈಕಿ ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಅಷ್ಟೇ ಅಲ್ಲ ಈ ಧಾರಾವಾಹಿ ಟಿಆರ್​ಪಿಯಲ್ಲಿ ಭಾರೀ ಏರಿಕೆ ಕಂಡಿದೆ. ಇತ್ತೀಚೆಗೆ ಪ್ರಸಾರ ಆರಂಭಿಸಿದ ಅಮೃತಧಾರೆ’ (Amruthadhare Serial) ಧಾರಾವಾಹಿಗೆ ದಿನ ಕಳೆದಂತೆ ವೀಕ್ಷಕರ ಸಂಖ್ಯೆ ಹೆಚ್ಚುತ್ತಿದೆ.

ಪುಟ್ಟಕ್ಕನ ಮಕ್ಕಳು

ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯ ಟಿಆರ್​ಪಿ ಕಳೆದ ವಾರಕ್ಕಿಂತ ಹೆಚ್ಚಿದೆ. ಉಮಾಶ್ರೀ ಅಭಿನಯದ ಈ ಧಾರಾವಾಹಿ ಮೊದಲ ಸ್ಥಾನ ಕಾಯ್ದುಕೊಂಡಿದೆ. ಈಗಾಗಲೇ ಈ ಧಾರಾವಾಹಿ 400+ ಎಪಿಸೋಡ್ ಪ್ರಸಾರ ಕಂಡಿದೆ.

‘ಗಟ್ಟಿಮೇಳ’

ಕಳೆದ ಕೆಲ ವಾರಗಳಿಂದ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿ ಮೊದಲಿದ್ದರೆ ಎರಡನೇ ಸ್ಥಾನದಲ್ಲಿ ‘ಗಟ್ಟಿ ಮೇಳ’ ಇರುತ್ತಿದೆ. ಈ ವಾರವೂ ಅದು ಮುಂದುವರಿದಿದೆ. ಈ ಧಾರಾವಾಹಿ ಈ ವಾರ ಎರಡನೇ ಸ್ಥಾನದಲ್ಲಿದೆ.

‘ಶ್ರೀರಸ್ತು ಶುಭಮಸ್ತು’

‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಗೆ ಬೇಡಿಕೆ ಹೆಚ್ಚುತ್ತಿದೆ. ಸುಧಾರಾಣಿ ಮೊದಲಾದವರು ನಟಿಸಿರುವ ಈ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ಈ ಮೂಲಕ ದಿನ ಕಳೆದಂತೆ ಈ ಧಾರಾವಾಹಿಯ ಬೇಡಿಕೆ ಹೆಚ್ಚುತ್ತಲೇ ಇದೆ.

‘ಸತ್ಯ’

ನಾಲ್ಕನೇ ಸ್ಥಾನದಲ್ಲಿ ‘ಸತ್ಯ ಧಾರಾವಾಹಿ ಇದೆ. ಮೊದಲ ಟಾಪ್ ನಾಲ್ಕೂ ಧಾರಾವಾಹಿಗಳು ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿವೆ ಅನ್ನೋದು ಇಲ್ಲಿ ಗಮನಿಸಬೇಕಾದ ಅಂಶ. ಈ ಧಾರಾವಾಹಿಗೆ ಕೆಲ ದಿನಗಳ ಕಾಲ ಟಿಆರ್​ಪಿ ಕುಗ್ಗಿತ್ತು. ಈಗ ಧಾರಾವಾಹಿ ಮತ್ತೆ ಟ್ರ್ಯಾಕ್​ಗೆ ಮರಳಿದೆ.

‘ಭಾಗ್ಯಲಕ್ಷ್ಮೀ’-ಲಕ್ಷ್ಮೀ ಬಾರಮ್ಮ

ಈ ಮೊದಲು ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಮೂರು ಅಥವಾ ನಾಲ್ಕನೇ ಸ್ಥಾನದಲ್ಲಿ ಇರುತ್ತಿತ್ತು. ಈಗ ಈ ಧಾರಾವಾಹಿ ಐದನೇ ಸ್ಥಾನಕ್ಕೆ ಇಳಿದಿದೆ. ಟಾಪ್ ಐದರಲ್ಲಿ ಇರುತ್ತಿದ್ದ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಆರನೇ ಸ್ಥಾನಕ್ಕೆ ಇಳಿದಿದೆ. ಈ ಎರಡೂ ಧಾರಾವಾಹಿಗಳ ಟಿಆರ್​ಪಿ ಮೊದಲಿಗಿಂತ ಕೊಂಚ ತಗ್ಗಿದೆ. ಈ ಧಾರಾವಾಹಿ ಮತ್ತೆ ಕಂಬ್ಯಾಕ್ ಮಾಡಲಿದೆ ಅನ್ನೋದು ವೀಕ್ಷಕರ ಅಭಿಪ್ರಾಯ.

ಅಮೃತಧಾರೆ

ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ ನಟನೆಯ ‘ಅಮೃತಧಾರೆ’ ಧಾರಾವಾಹಿಗೆ ವೀಕ್ಷಕರ ಸಂಖ್ಯೆ ಹೆಚ್ಚುತ್ತಿದೆ. ವಾರ ಕಳೆದಂತೆ ಧಾರಾವಾಹಿಯ ಟಿಆರ್​ಪಿ ಹೆಚ್ಚುತ್ತಿದೆ. ಈ ವಾರ ಈ ಧಾರಾವಾಹಿಗೆ ಏಳನೇ ಸ್ಥಾನ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ