AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಗ್ಗಿತು ‘ಲಕ್ಷ್ಮೀ ಬಾರಮ್ಮ’ ಟಿಆರ್​ಪಿ; ಹೆಚ್ಚಿತು ‘ಅಮೃತಧಾರೆ’ ವೀಕ್ಷಣೆ, ಪುಟ್ಟಕ್ಕನಿಗೆ ಮೊದಲ ಸ್ಥಾನ

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಇತ್ತೀಚೆಗೆ ಪ್ರಸಾರ ಆರಂಭಿಸಿದ ‘ಅಮೃತಧಾರೆ’ ಧಾರಾವಾಹಿಗೆ ದಿನ ಕಳೆದಂತೆ ವೀಕ್ಷಕರ ಸಂಖ್ಯೆ ಹೆಚ್ಚುತ್ತಿದೆ.

ತಗ್ಗಿತು ‘ಲಕ್ಷ್ಮೀ ಬಾರಮ್ಮ’ ಟಿಆರ್​ಪಿ; ಹೆಚ್ಚಿತು ‘ಅಮೃತಧಾರೆ’ ವೀಕ್ಷಣೆ, ಪುಟ್ಟಕ್ಕನಿಗೆ ಮೊದಲ ಸ್ಥಾನ
ಕನ್ನಡ ಧಾರಾವಾಹಿ ಟಿಆರ್​ಪಿ
ರಾಜೇಶ್ ದುಗ್ಗುಮನೆ
|

Updated on: Jun 22, 2023 | 12:38 PM

Share

ಕನ್ನಡದ ವಾಹಿನಿಗಳ ಮಧ್ಯೆ ಕಾಂಪಿಟೇಷನ್ ಜೋರಾಗಿದೆ. ಹಲವು ವಿಶೇಷ ಕಥೆಗಳೊಂದಿಗೆ ಧಾರಾವಾಹಿಗಳು ಬರುತ್ತಿವೆ. ಈ ಎಲ್ಲಾ ಧಾರಾವಾಹಿಗಳ ಮಧ್ಯೆ ಯಾವುದು ಚೆನ್ನಾಗಿ ಮೂಡಿಬರುತ್ತಿದೆ ಎಂಬುದನ್ನು ತಿಳಿಯೋಕೆ ಇರೋ ಮಾನದಂಡ ಟಿಆರ್​ಪಿ. ಈಗ ಜೂನ್ 9ರಿಂದ ಜೂನ್ 15ರವರೆಗಿನ ಧಾರಾವಾಹಿಗಳ ಟಿಆರ್​ಪಿ ಮಾಹಿತಿ ರಿವೀಲ್ ಆಗಿದೆ. ಈ ಪೈಕಿ ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಅಷ್ಟೇ ಅಲ್ಲ ಈ ಧಾರಾವಾಹಿ ಟಿಆರ್​ಪಿಯಲ್ಲಿ ಭಾರೀ ಏರಿಕೆ ಕಂಡಿದೆ. ಇತ್ತೀಚೆಗೆ ಪ್ರಸಾರ ಆರಂಭಿಸಿದ ಅಮೃತಧಾರೆ’ (Amruthadhare Serial) ಧಾರಾವಾಹಿಗೆ ದಿನ ಕಳೆದಂತೆ ವೀಕ್ಷಕರ ಸಂಖ್ಯೆ ಹೆಚ್ಚುತ್ತಿದೆ.

ಪುಟ್ಟಕ್ಕನ ಮಕ್ಕಳು

ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯ ಟಿಆರ್​ಪಿ ಕಳೆದ ವಾರಕ್ಕಿಂತ ಹೆಚ್ಚಿದೆ. ಉಮಾಶ್ರೀ ಅಭಿನಯದ ಈ ಧಾರಾವಾಹಿ ಮೊದಲ ಸ್ಥಾನ ಕಾಯ್ದುಕೊಂಡಿದೆ. ಈಗಾಗಲೇ ಈ ಧಾರಾವಾಹಿ 400+ ಎಪಿಸೋಡ್ ಪ್ರಸಾರ ಕಂಡಿದೆ.

‘ಗಟ್ಟಿಮೇಳ’

ಕಳೆದ ಕೆಲ ವಾರಗಳಿಂದ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿ ಮೊದಲಿದ್ದರೆ ಎರಡನೇ ಸ್ಥಾನದಲ್ಲಿ ‘ಗಟ್ಟಿ ಮೇಳ’ ಇರುತ್ತಿದೆ. ಈ ವಾರವೂ ಅದು ಮುಂದುವರಿದಿದೆ. ಈ ಧಾರಾವಾಹಿ ಈ ವಾರ ಎರಡನೇ ಸ್ಥಾನದಲ್ಲಿದೆ.

‘ಶ್ರೀರಸ್ತು ಶುಭಮಸ್ತು’

‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಗೆ ಬೇಡಿಕೆ ಹೆಚ್ಚುತ್ತಿದೆ. ಸುಧಾರಾಣಿ ಮೊದಲಾದವರು ನಟಿಸಿರುವ ಈ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ಈ ಮೂಲಕ ದಿನ ಕಳೆದಂತೆ ಈ ಧಾರಾವಾಹಿಯ ಬೇಡಿಕೆ ಹೆಚ್ಚುತ್ತಲೇ ಇದೆ.

‘ಸತ್ಯ’

ನಾಲ್ಕನೇ ಸ್ಥಾನದಲ್ಲಿ ‘ಸತ್ಯ ಧಾರಾವಾಹಿ ಇದೆ. ಮೊದಲ ಟಾಪ್ ನಾಲ್ಕೂ ಧಾರಾವಾಹಿಗಳು ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿವೆ ಅನ್ನೋದು ಇಲ್ಲಿ ಗಮನಿಸಬೇಕಾದ ಅಂಶ. ಈ ಧಾರಾವಾಹಿಗೆ ಕೆಲ ದಿನಗಳ ಕಾಲ ಟಿಆರ್​ಪಿ ಕುಗ್ಗಿತ್ತು. ಈಗ ಧಾರಾವಾಹಿ ಮತ್ತೆ ಟ್ರ್ಯಾಕ್​ಗೆ ಮರಳಿದೆ.

‘ಭಾಗ್ಯಲಕ್ಷ್ಮೀ’-ಲಕ್ಷ್ಮೀ ಬಾರಮ್ಮ

ಈ ಮೊದಲು ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಮೂರು ಅಥವಾ ನಾಲ್ಕನೇ ಸ್ಥಾನದಲ್ಲಿ ಇರುತ್ತಿತ್ತು. ಈಗ ಈ ಧಾರಾವಾಹಿ ಐದನೇ ಸ್ಥಾನಕ್ಕೆ ಇಳಿದಿದೆ. ಟಾಪ್ ಐದರಲ್ಲಿ ಇರುತ್ತಿದ್ದ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಆರನೇ ಸ್ಥಾನಕ್ಕೆ ಇಳಿದಿದೆ. ಈ ಎರಡೂ ಧಾರಾವಾಹಿಗಳ ಟಿಆರ್​ಪಿ ಮೊದಲಿಗಿಂತ ಕೊಂಚ ತಗ್ಗಿದೆ. ಈ ಧಾರಾವಾಹಿ ಮತ್ತೆ ಕಂಬ್ಯಾಕ್ ಮಾಡಲಿದೆ ಅನ್ನೋದು ವೀಕ್ಷಕರ ಅಭಿಪ್ರಾಯ.

ಅಮೃತಧಾರೆ

ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ ನಟನೆಯ ‘ಅಮೃತಧಾರೆ’ ಧಾರಾವಾಹಿಗೆ ವೀಕ್ಷಕರ ಸಂಖ್ಯೆ ಹೆಚ್ಚುತ್ತಿದೆ. ವಾರ ಕಳೆದಂತೆ ಧಾರಾವಾಹಿಯ ಟಿಆರ್​ಪಿ ಹೆಚ್ಚುತ್ತಿದೆ. ಈ ವಾರ ಈ ಧಾರಾವಾಹಿಗೆ ಏಳನೇ ಸ್ಥಾನ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ