AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganesh Chaturthi: ‘ಕನ್ನಡದ ಕೋಟ್ಯಧಿಪತಿ’ ಗೆಟಪ್​ನಲ್ಲಿ ಅಪ್ಪು ಪ್ರತಿಮೆ; ಹಾಟ್​ ಸೀಟ್​ನಲ್ಲಿ ಕುಳಿತ ಗಣಪ

Ganesh Chaturthi 2022 | Puneeth Rajkumar: ಆವರ್ಸಾದ ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ಈ ರೀತಿ ಗಣಪತಿ ಪ್ರತಿಷ್ಠಾಪನೆ ಮಾಡಲಾಗಿದೆ. ಕಲಾವಿದ ದಿನೇಶ್ ಮೇತ್ರಿ ಅವರು ಜೇಡಿ ಮಣ್ಣಿನಿಂದ ಅಪ್ಪು ಪ್ರತಿಮೆ ನಿರ್ಮಾಣ ಮಾಡಿದ್ದಾರೆ.

Ganesh Chaturthi: ‘ಕನ್ನಡದ ಕೋಟ್ಯಧಿಪತಿ’ ಗೆಟಪ್​ನಲ್ಲಿ ಅಪ್ಪು ಪ್ರತಿಮೆ; ಹಾಟ್​ ಸೀಟ್​ನಲ್ಲಿ ಕುಳಿತ ಗಣಪ
ಪುನೀತ್​ ರಾಜ್​ಕುಮಾರ್ ಹಾಗೂ ಗಣೇಶನ ಪ್ರತಿಮೆ
TV9 Web
| Edited By: |

Updated on: Aug 31, 2022 | 1:33 PM

Share

ನಟ ಪುನೀತ್​ ರಾಜ್​ಕುಮಾರ್ (Puneeth Rajkumar)​ ಅವರನ್ನು ಎಲ್ಲ ಸಂದರ್ಭದಲ್ಲಿಯೂ ನೆನಪಿಸಿಕೊಳ್ಳಲಾಗುತ್ತಿದೆ. ಗಣೇಶ ಚತುರ್ಥಿಯ (Ganesh Chaturthi 2022) ಈ ಶುಭ ದಿನದಂದು ಕೂಡ ಅಪ್ಪು ಗುಣಗಾನ ಮಾಡಲಾಗುತ್ತಿದೆ. ಅಭಿಮಾನಿಗಳು ಪುನೀತ್​ ರಾಜ್​ಕುಮಾರ್​ಗೆ ದೇವರ ಸ್ಥಾನ ನೀಡಿದ್ದಾರೆ. ದೇವರ ಪಕ್ಕದಲ್ಲಿ ಅಪ್ಪು ಫೋಟೋ ಇಟ್ಟು ಪೂಜೆ ಮಾಡಿದ ಎಷ್ಟೋ ಉದಾಹರಣೆ ಇದೆ. ಈಗ ವಿನಾಯಕನ ಮೂರ್ತಿ ಪಕ್ಕದಲ್ಲಿ ಪುನೀತ್​ ಪ್ರತಿಮೆ ಇರಿಸಿ ಹಬ್ಬವನ್ನು ಆಚರಿಸಲಾಗುತ್ತಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಆವರ್ಸ ಗ್ರಾಮದಲ್ಲಿ ವಿಶೇಷವಾಗಿ ಪುನೀತ್​ ಪ್ರತಿಮೆ ನಿರ್ಮಾಣ ಆಗಿದೆ. ಕನ್ನಡದ ಕೋಟ್ಯಧಿಪತಿ (Kannadada Kotyadhipathi) ಕಾರ್ಯಕ್ರಮವನ್ನು ನಡೆಸಿಕೊಡುತ್ತಿರುವ ರೀತಿಯಲ್ಲಿ ಅಪ್ಪು ಮೂಡಿಬಂದಿದ್ದಾರೆ. ಅವರ ಪಕ್ಕದಲ್ಲಿ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ಧವಾಗಿ ಕುಳಿತಿರುವಂತೆ ಗಣೇಶನ ಮೂರ್ತಿ ಇದೆ. ಹಾಟ್​ ಸೀಟ್​ನಲ್ಲಿ ಕುಳಿತ ಗಣಪತಿಗೆ ಅಪ್ಪು ಪ್ರಶ್ನೆಗಳನ್ನು ಕೇಳುತ್ತಾರೇನೋ ಎಂಬಂತಿದೆ ಈ ದೃಶ್ಯ.

ಆವರ್ಸಾದ ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ಈ ಗಣಪತಿ ಪ್ರತಿಷ್ಠಾಪನೆ ಮಾಡಲಾಗಿದೆ. ಕಲಾವಿದ ದಿನೇಶ್ ಮೇತ್ರಿ ಅವರು ಜೇಡಿ ಮಣ್ಣಿನಿಂದ ಅಪ್ಪು ಪ್ರತಿಮೆ ನಿರ್ಮಾಣ ಮಾಡಿದ್ದಾರೆ. ಇದನ್ನು ನೋಡಲು ಸಾವಿರಾರು ಜನರು ಬರುತ್ತಿದ್ದಾರೆ. ಪುನೀತ್ ರಾಜ್​ಕುಮಾರ್​ ಮಾಡಿದ ಸಮಾಜಸೇವೆಯಿಂದ ಪ್ರೇರಣೆಗೊಂಡ ಸಾರ್ವಜನಿಕ ಗಣೇಶೋತ್ಸವ ಸಮಿತಿಯವರು ಹಾಗೂ ಕಲಾವಿದ ದಿನೇಶ್ ಮೇತ್ರಿ ಅವರು ಅಪ್ಪು ಅವರಿಗೆ ಈ ರೀತಿ ವಿಶೇಷವಾಗಿ ಗೌರವ ಅರ್ಪಿಸಿದ್ದಾರೆ. ದಿನೇಶ್ ಮೇತ್ರಿ ಕೂಡ ಅಪ್ಪು ಅಭಿಮಾನಿ ಆಗಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ಅವರು ಗಣಪತಿ ಮತ್ತು ಪುನೀತ್ ಪ್ರತಿಮೆಯನ್ನು ನಿರ್ಮಿಸಿದ್ದಾರೆ.

ಎಲ್ಲೆಲ್ಲೂ ಗಣೇಶ ಚತುರ್ಥಿಯ ಸಂಭ್ರಮ ಮನೆ ಮಾಡಿದೆ. ಆದರೆ ಪುನೀತ್​ ರಾಜ್​ಕುಮಾರ್​ ಅವರು ನಮ್ಮ ನಡುವೆ ಇಲ್ಲ ಎಂಬ ನೋವು ಅಭಿಮಾನಿಗಳನ್ನು ಕಾಡುತ್ತಿದೆ. ಹಾಗಾಗಿ ದೇವರ ಜೊತೆಗೆ ಪುನೀತ್​ ಅವರಿಗೂ ಫ್ಯಾನ್ಸ್​ ಪೂಜೆ ಸಲ್ಲಿಸುತ್ತಿದ್ದಾರೆ. ಆ ಮೂಲಕ ಅಪ್ಪು ಮಾಡಿದ ಸಾಮಾಜಿಕ ಕೆಲಸಗಳನ್ನು ಸ್ಮರಿಸಲಾಗುತ್ತಿದೆ.

ಇದನ್ನೂ ಓದಿ
Image
ಅಲ್ಲು ಅರ್ಜುನ್​ ರೀತಿ ‘ತಗ್ಗೆದೆಲೇ’ ಎನ್ನುತ್ತಿರುವ ‘ಪುಷ್ಪ’ ಗಣಪ: ಕೆಲವರಿಂದ ಕೇಳಿಬಂತು ಟೀಕೆ
Image
Puneeth Rajkumar: ಪುನೀತ್ ರಾಜ್​ಕುಮಾರ್ ಹೆಗಲಮೇಲೆ ಕೈ ಹಾಕಿ ನಿಂತ ಗಣಪ; ಮಣ್ಣಿನಲ್ಲಿ ಅರಳಿದ ಅಪ್ಪುಗೆ ಭಾರೀ ಬೇಡಿಕೆ
Image
Lucky Man Teaser: ‘ನಿನಗೆ 2ನೇ ಚಾನ್ಸ್​ ಕೊಡ್ತೀನಿ’; ಲಕ್ಕಿ ಮ್ಯಾನ್​ಗೆ ದೇವರ ರೂಪದಲ್ಲಿ ವರ ನೀಡಿದ ಪುನೀತ್​ ರಾಜ್​ಕುಮಾರ್​
Image
Puneeth Rajkumar: ಕಲಾವಿದನ ಕಲ್ಪನೆಯಲ್ಲಿ ಪುನೀತ್​-ಗಣಪ; ‘ನಮ್ಮ ಪಾಲಿಗೆ ದೇವರು ಇಲ್ಲ’ ಎಂದ ಫ್ಯಾನ್ಸ್​

ಹಲವು ಕಡೆಗಳಲ್ಲಿ ಈ ರೀತಿಯ ಪ್ರಯತ್ನ ಮಾಡಲಾಗಿದೆ. ದೇವರ ರೂಪದಲ್ಲಿ ಅಪ್ಪು ಅವರನ್ನು ಕಾಣಲಾಗುತ್ತಿದೆ. ಒಂದಷ್ಟು ದಿನಗಳ ಹಿಂದೆ ನಟ ರಾಘವೇಂದ್ರ ರಾಜ್​ಕುಮಾರ್​ ಅವರು ಕೂಡ ಒಂದು ಫೋಟೋ ಶೇರ್​ ಮಾಡಿಕೊಂಡಿದ್ದರು. ‘ಪ್ರಕೃತಿ ಆರ್ಟ್​ ಸೆಂಟರ್​’ ಕಲಾವಿದರ ಕಲ್ಪನೆಯಲ್ಲಿ ಆ ವಿಶೇಷವಾದ ಮೂರ್ತಿ ಮೂಡಿಬಂದಿತ್ತು. ರಾಘವೇಂದ್ರ ರಾಜ್​ಕುಮಾರ್​ ಅವರಿಗೆ ಅದು ತುಂಬ ಇಷ್ಟವಾಗಿತ್ತು. ಫೇಸ್​ಬುಕ್​ನಲ್ಲಿ ಫೋಟೋ ಹಂಚಿಕೊಂಡಿದ್ದ ಅವರು, ‘ಎಂಥಾ ಅದ್ಭುತ ಯೋಚನೆ’ ಎಂದು ಕ್ಯಾಪ್ಷನ್​ ನೀಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್