Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ಸ್ಫುರದ್ರೂಪಿ ನಟ ಸುಮನ್ ಮಗಳು ಮಣಿಪಾಲ್​ ವಿವಿಯಲ್ಲಿ ಹ್ಯೂಮನ್ ಜೆನೆಟಿಕ್ಸ್ ನಲ್ಲಿ ಚಿನ್ನದ ಪದಕ ವಿಜೇತೆ

ಕನ್ನಡದ ಸ್ಫುರದ್ರೂಪಿ ನಟ, ಟಾಲಿವುಡ್ಡ್​ ಹಿರಿಯ ನಟ ಸುಮನ್ ಮಗಳನ್ನು ನೋಡಿದ್ದೀರಾ? ಸೌಂದರ್ಯದ ಖನಿಗೆ ಶೀಘ್ರವೇ ಮದುವೆಯಂತೆ!

ಕನ್ನಡದ ಸ್ಫುರದ್ರೂಪಿ ನಟ ಸುಮನ್ ಮಗಳು ಮಣಿಪಾಲ್​ ವಿವಿಯಲ್ಲಿ ಹ್ಯೂಮನ್ ಜೆನೆಟಿಕ್ಸ್ ನಲ್ಲಿ ಚಿನ್ನದ ಪದಕ ವಿಜೇತೆ
ಕನ್ನಡದ ಸ್ಫುರದ್ರೂಪಿ ನಟ ಸುಮನ್ ಮಗಳು
Follow us
ಸಾಧು ಶ್ರೀನಾಥ್​
|

Updated on: May 27, 2023 | 2:47 PM

ಟಾಲಿವುಡ್ಡ್​ ಹಿರಿಯ ನಟ, ಕನ್ನಡದ ಚೆಲುವ (Kannadiga Actor Suman) ಸುಮನ್ ತೆಲುಗು ಪ್ರೇಕ್ಷಕರಿಗೆ ಚಿರಪರಿಚಿತ. 1977 ರಲ್ಲಿ, ಅವರು ತಮಿಳು ಚಲನಚಿತ್ರ ನೀಚಲ್ ಕುಲಂ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದವರು. ನಾಯಕನಾಗಿ ಮೊದಲ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಮಿಂಚಿದವರು. ತೆಲುಗು ಜೊತೆಗೆ ತಮಿಳು ಮತ್ತು ಕನ್ನಡದಲ್ಲಿ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ನಾಯಕನಲ್ಲದೆ ಹಲವು ಚಿತ್ರಗಳಲ್ಲಿ ಪೋಷಕ ನಟನಾಗಿಯೂ ಕಾಣಿಸಿಕೊಂಡಿದ್ದರು. ಅಕ್ಕಿನೇನಿ ನಾಗಾರ್ಜುನ ಮತ್ತು ನಿರ್ದೇಶಕ ರಾಘವೇಂದ್ರ ರಾವ್ ಜೋಡಿಯ ಅನ್ನಮಯ್ಯ ಚಿತ್ರದಲ್ಲಿ ವೆಂಕಟೇಶ್ವರ ಸ್ವಾಮಿಯ ಪಾತ್ರದಲ್ಲಿ ಸುಮನ್ ಮನೋಜ್ಞವಾಗಿ ಕಾಣಿಸಿಕೊಂಡಿದ್ದರು. ಸುಮಾರು 45 ವರ್ಷಗಳಿಂದ ಇಂಡಸ್ಟ್ರಿಯಲ್ಲಿದ್ದು, ನಟನಾಗಿ ತಮ್ಮದೇ ಆದ ವಿಶೇಷ ಮನ್ನಣೆ ಗಳಿಸಿದ್ದಾರೆ. ಪ್ರಸ್ತುತ ಚಿತ್ರರಂಗದಲ್ಲಿ ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ಚಾಲ್ತಿಯಲ್ಲಿದ್ದಾರೆ.

ಮಣಿಪಾಲ್​ ವಿವಿಯಲ್ಲಿ ಹ್ಯೂಮನ್ ಜೆನೆಟಿಕ್ಸ್ ನಲ್ಲಿ ಚಿನ್ನದ ಪದಕ ವಿಜೇತೆ: ಈ ಹಿನ್ನೆಲೆಯಲ್ಲಿ ಸುಮನ್ ಸಂದರ್ಶನವೊಂದರಲ್ಲಿ ಮಗಳ ಬಗ್ಗೆ ಪ್ರಸ್ತಾಪಿಸಿದಾಗ ಆಕೆಯ ಮದುವೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮಗಳು ಅಖಿಲಜಾ ಪ್ರತ್ಯೂಷಾ ( Suman Daughter Akhilaja Pratyusha) ಚಿನ್ನದ ಪದಕ ವಿಜೇತೆ ಎಂದ ಅವರು.. ಸದ್ಯ ನಟನೆಯಲ್ಲಿ ಆಸಕ್ತಿ ಇಲ್ಲ. ಎರಡು ವರ್ಷಗಳ ಹಿಂದೆ ಮಣಿಪಾಲ್​ ವಿಶ್ವವಿದ್ಯಾನಿಲಯದಲ್ಲಿ ಹ್ಯೂಮನ್ ಜೆನೆಟಿಕ್ಸ್ ನಲ್ಲಿ ಚಿನ್ನದ ಪದಕ ಪಡೆದರು ಎಂದಿದ್ದಾರೆ. ಕೆಲ ದಿನಗಳಿಂದ ಮಗಳ ಮದುವೆ ಸುದ್ದಿಗೆ ಸುಮನ್ ಪ್ರತಿಕ್ರಿಯಿಸಿದ್ದಾರೆ.

ದಕ್ಷಿಣ ಭಾರತದ ತಾರೆಯರ ಮನೆಗೆ ತಮ್ಮ ಮಗಳು ಸೊಸೆಯಾಗಿ ಹೋಗುತ್ತಿದ್ದಾರೆ ಎಂಬ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ. ಆಕೆಗೆ ಮದುವೆಯ ಯೋಚನೆ ಇದೆ. ಆದರೆ ಅದರ ಬಗ್ಗೆ ಇನ್ನೂ ಯಾವುದೇ ನಿರ್ಧಾರವಾಗಿಲ್ಲ ಎಂದಿದ್ದಾರೆ. ಮದುವೆ. ಓದು ಮುಗಿಸಿದ ನಂತರವೇ ಮದುವೆಯ ಬಗ್ಗೆ ಯೋಚಿಸುತ್ತೇನೆ ಎಂದಿದ್ದಾರೆ. ಈ ಹಿಂದೆ ನನಗೆ ಕೆಟ್ಟ ದಿನಗಳು ಕಾಡಿದವು. ನಾನು ಜೈಲಿಗೆ ಹೋಗಿದ್ದೇಕೆ ಎಂಬುದು ಎಲ್ಲರಿಗೂ ಗೊತ್ತಿದೆ. ಪ್ರಕರಣದಲ್ಲಿ ನನ್ನದು ಯಾವುದೇ ಪಾತ್ರವಿಲ್ಲದಿದ್ದರೂ/ ನಾನು ಭಾಗಿಯಾಗದಿದ್ದರೂ ನನ್ನನ್ನು ಬಂಧಿಸಲಾಗಿತ್ತು ಎಂದು ಹೇಳಿದರು. ಆ ವೇಳೆ ಸುಹಾಸಿನಿ ಹಾಗೂ ಸುಮಲತಾ ಬೆಂಬಲ ನೀಡಿದ್ದರು ಎಂದೂ ಸುಮನ್ ಸ್ಮರಿಸಿದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ