AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ಸ್ಫುರದ್ರೂಪಿ ನಟ ಸುಮನ್ ಮಗಳು ಮಣಿಪಾಲ್​ ವಿವಿಯಲ್ಲಿ ಹ್ಯೂಮನ್ ಜೆನೆಟಿಕ್ಸ್ ನಲ್ಲಿ ಚಿನ್ನದ ಪದಕ ವಿಜೇತೆ

ಕನ್ನಡದ ಸ್ಫುರದ್ರೂಪಿ ನಟ, ಟಾಲಿವುಡ್ಡ್​ ಹಿರಿಯ ನಟ ಸುಮನ್ ಮಗಳನ್ನು ನೋಡಿದ್ದೀರಾ? ಸೌಂದರ್ಯದ ಖನಿಗೆ ಶೀಘ್ರವೇ ಮದುವೆಯಂತೆ!

ಕನ್ನಡದ ಸ್ಫುರದ್ರೂಪಿ ನಟ ಸುಮನ್ ಮಗಳು ಮಣಿಪಾಲ್​ ವಿವಿಯಲ್ಲಿ ಹ್ಯೂಮನ್ ಜೆನೆಟಿಕ್ಸ್ ನಲ್ಲಿ ಚಿನ್ನದ ಪದಕ ವಿಜೇತೆ
ಕನ್ನಡದ ಸ್ಫುರದ್ರೂಪಿ ನಟ ಸುಮನ್ ಮಗಳು
Follow us
ಸಾಧು ಶ್ರೀನಾಥ್​
|

Updated on: May 27, 2023 | 2:47 PM

ಟಾಲಿವುಡ್ಡ್​ ಹಿರಿಯ ನಟ, ಕನ್ನಡದ ಚೆಲುವ (Kannadiga Actor Suman) ಸುಮನ್ ತೆಲುಗು ಪ್ರೇಕ್ಷಕರಿಗೆ ಚಿರಪರಿಚಿತ. 1977 ರಲ್ಲಿ, ಅವರು ತಮಿಳು ಚಲನಚಿತ್ರ ನೀಚಲ್ ಕುಲಂ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದವರು. ನಾಯಕನಾಗಿ ಮೊದಲ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಮಿಂಚಿದವರು. ತೆಲುಗು ಜೊತೆಗೆ ತಮಿಳು ಮತ್ತು ಕನ್ನಡದಲ್ಲಿ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ನಾಯಕನಲ್ಲದೆ ಹಲವು ಚಿತ್ರಗಳಲ್ಲಿ ಪೋಷಕ ನಟನಾಗಿಯೂ ಕಾಣಿಸಿಕೊಂಡಿದ್ದರು. ಅಕ್ಕಿನೇನಿ ನಾಗಾರ್ಜುನ ಮತ್ತು ನಿರ್ದೇಶಕ ರಾಘವೇಂದ್ರ ರಾವ್ ಜೋಡಿಯ ಅನ್ನಮಯ್ಯ ಚಿತ್ರದಲ್ಲಿ ವೆಂಕಟೇಶ್ವರ ಸ್ವಾಮಿಯ ಪಾತ್ರದಲ್ಲಿ ಸುಮನ್ ಮನೋಜ್ಞವಾಗಿ ಕಾಣಿಸಿಕೊಂಡಿದ್ದರು. ಸುಮಾರು 45 ವರ್ಷಗಳಿಂದ ಇಂಡಸ್ಟ್ರಿಯಲ್ಲಿದ್ದು, ನಟನಾಗಿ ತಮ್ಮದೇ ಆದ ವಿಶೇಷ ಮನ್ನಣೆ ಗಳಿಸಿದ್ದಾರೆ. ಪ್ರಸ್ತುತ ಚಿತ್ರರಂಗದಲ್ಲಿ ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ಚಾಲ್ತಿಯಲ್ಲಿದ್ದಾರೆ.

ಮಣಿಪಾಲ್​ ವಿವಿಯಲ್ಲಿ ಹ್ಯೂಮನ್ ಜೆನೆಟಿಕ್ಸ್ ನಲ್ಲಿ ಚಿನ್ನದ ಪದಕ ವಿಜೇತೆ: ಈ ಹಿನ್ನೆಲೆಯಲ್ಲಿ ಸುಮನ್ ಸಂದರ್ಶನವೊಂದರಲ್ಲಿ ಮಗಳ ಬಗ್ಗೆ ಪ್ರಸ್ತಾಪಿಸಿದಾಗ ಆಕೆಯ ಮದುವೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮಗಳು ಅಖಿಲಜಾ ಪ್ರತ್ಯೂಷಾ ( Suman Daughter Akhilaja Pratyusha) ಚಿನ್ನದ ಪದಕ ವಿಜೇತೆ ಎಂದ ಅವರು.. ಸದ್ಯ ನಟನೆಯಲ್ಲಿ ಆಸಕ್ತಿ ಇಲ್ಲ. ಎರಡು ವರ್ಷಗಳ ಹಿಂದೆ ಮಣಿಪಾಲ್​ ವಿಶ್ವವಿದ್ಯಾನಿಲಯದಲ್ಲಿ ಹ್ಯೂಮನ್ ಜೆನೆಟಿಕ್ಸ್ ನಲ್ಲಿ ಚಿನ್ನದ ಪದಕ ಪಡೆದರು ಎಂದಿದ್ದಾರೆ. ಕೆಲ ದಿನಗಳಿಂದ ಮಗಳ ಮದುವೆ ಸುದ್ದಿಗೆ ಸುಮನ್ ಪ್ರತಿಕ್ರಿಯಿಸಿದ್ದಾರೆ.

ದಕ್ಷಿಣ ಭಾರತದ ತಾರೆಯರ ಮನೆಗೆ ತಮ್ಮ ಮಗಳು ಸೊಸೆಯಾಗಿ ಹೋಗುತ್ತಿದ್ದಾರೆ ಎಂಬ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ. ಆಕೆಗೆ ಮದುವೆಯ ಯೋಚನೆ ಇದೆ. ಆದರೆ ಅದರ ಬಗ್ಗೆ ಇನ್ನೂ ಯಾವುದೇ ನಿರ್ಧಾರವಾಗಿಲ್ಲ ಎಂದಿದ್ದಾರೆ. ಮದುವೆ. ಓದು ಮುಗಿಸಿದ ನಂತರವೇ ಮದುವೆಯ ಬಗ್ಗೆ ಯೋಚಿಸುತ್ತೇನೆ ಎಂದಿದ್ದಾರೆ. ಈ ಹಿಂದೆ ನನಗೆ ಕೆಟ್ಟ ದಿನಗಳು ಕಾಡಿದವು. ನಾನು ಜೈಲಿಗೆ ಹೋಗಿದ್ದೇಕೆ ಎಂಬುದು ಎಲ್ಲರಿಗೂ ಗೊತ್ತಿದೆ. ಪ್ರಕರಣದಲ್ಲಿ ನನ್ನದು ಯಾವುದೇ ಪಾತ್ರವಿಲ್ಲದಿದ್ದರೂ/ ನಾನು ಭಾಗಿಯಾಗದಿದ್ದರೂ ನನ್ನನ್ನು ಬಂಧಿಸಲಾಗಿತ್ತು ಎಂದು ಹೇಳಿದರು. ಆ ವೇಳೆ ಸುಹಾಸಿನಿ ಹಾಗೂ ಸುಮಲತಾ ಬೆಂಬಲ ನೀಡಿದ್ದರು ಎಂದೂ ಸುಮನ್ ಸ್ಮರಿಸಿದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ