AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾನುವಾರವೂ ಹೆಚ್ಚಿಲ್ಲ ‘ಕಣ್ಣಪ್ಪ’ ಕಲೆಕ್ಷನ್; ನೂರಾರು ಕೋಟಿ ರೂ. ನೀರಲ್ಲಿ ಹೋಮ

‘ಕಣ್ಣಪ್ಪ’ ಚಿತ್ರ ಬಹು ನಿರೀಕ್ಷೆಯೊಂದಿಗೆ ಬಿಡುಗಡೆಯಾಗಿದ್ದರೂ, ಅದರ ಬಾಕ್ಸ್ ಆಫೀಸ್ ಗಳಿಕೆ ನಿರಾಶಾದಾಯಕವಾಗಿದೆ. ಮೊದಲ ಮೂರು ದಿನಗಳಲ್ಲಿ ಕೇವಲ 23.75 ಕೋಟಿ ರೂಪಾಯಿ ಮಾತ್ರ ಗಳಿಸಿದೆ. ದೊಡ್ಡ ಬಜೆಟ್ ಈ ಚಿತ್ರಕ್ಕೆ ನಕಾರಾತ್ಮಕ ವಿಮರ್ಶೆಗಳು ಕೂಡ ಒಂದು ಕಾರಣ. ಚಿತ್ರದಲ್ಲಿ ಭಕ್ತಿ ಕಥೆಗಿಂತ ರೊಮ್ಯಾಂಟಿಕ್ ಅಂಶಗಳಿಗೆ ಹೆಚ್ಚು ಆದ್ಯತೆ ನೀಡಲಾಗಿದೆ ಎಂದು ಟೀಕಿಸಲಾಗಿದೆ.

ಭಾನುವಾರವೂ ಹೆಚ್ಚಿಲ್ಲ ‘ಕಣ್ಣಪ್ಪ’ ಕಲೆಕ್ಷನ್; ನೂರಾರು ಕೋಟಿ ರೂ. ನೀರಲ್ಲಿ ಹೋಮ
ಕಣ್ಣಪ್ಪಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Jun 30, 2025 | 7:29 AM

Share

ಸಾಕಷ್ಟು ಹೈಪ್​ಗಳೊಂದಿಗೆ ‘ಕಣ್ಣಪ್ಪ’ ಸಿನಿಮಾ (Kannappa Movie) ಜೂನ್ 27ರಂದು ರಿಲೀಸ್ ಆಯಿತು. ಈ ಸಿನಿಮಾ ಬಗ್ಗೆ ನೆಗೆಟಿವ್ ವಿಮರ್ಶೆ ಕೊಟ್ಟರೆ ಸೂಕ್ತ ಕ್ರಮ ಕೈಗೊಳ್ಳೋದಾಗಿ ಈ ಚಿತ್ರದ ನಟ ಹಾಗೂ ನಿರ್ಮಾಪಕ ವಿಷ್ಣು ಮಂಚು ಅವರು ಎಚ್ಚರಿಕೆ ನೀಡಿದ್ದರು. ಆದರೆ, ಕಣ್ಣಪ್ಪಬಗ್ಗೆ ಹಬ್ಬುತ್ತಿರೋ ನೆಗೆಟಿವ್ ವಿಮರ್ಶೆಗಳನ್ನು ತಡೆಯಲು ಅಸಾಧ್ಯ ಎಂಬಂತಾಗಿದೆ. ಇದರಿಂದ ಸಿನಿಮಾದ ಗಳಿಕೆಯೂ ತಗ್ಗಿದೆ. ದೊಡ್ಡ ಬಜೆಟ್ ಸಿನಿಮಾ ಆಗಿರುವುದರಿಂದ ಗಳಿಕೆ ಕೂಡ ತಗ್ಗಿದೆ.

‘ಕಣ್ಣಪ್ಪ’ ಸಿನಿಮಾದಲ್ಲಿ ಹೆಚ್ಚು ಗಮನ ಹರಿಸಬೇಕಿದ್ದಿದ್ದು ಭಕ್ತಿ ಕಥೆಯ ಮೇಲೆ. ಆದರೆ, ಇಲ್ಲಿ ರೊಮ್ಯಾಂಟಿಕ್ ಟ್ರ್ಯಾಕ್ ಮೇಲೆ ಕಥೆ ಹೆಚ್ಚು ಸಾಗಿದೆ. ಈ ಕಾರಣದಿಂದಲೇ ಸಿನಿಮಾನ ಎಲ್ಲರೂ ಟೀಕಿಸುತ್ತಿದ್ದಾರೆ. ಈ ಚಿತ್ರ ಸೂಪರ್ ಹಿಟ್ ಆಗಲಿದೆ ಎಂದು ತಂಡ ಭಾವಿಸಿದ್ದಿರಬಹುದು. ಆದರೆ, ಅದು ಸುಳ್ಳಾಗಿದೆ. ಸಿನಿಮಾ ಹೀನಾಯವಾಗಿ ಸೋಲುವ ಲಕ್ಷಣ ಕಾಣುತ್ತಿದೆ.

‘ಕಣ್ಣಪ್ಪ’ ಸಿನಿಮಾ ಪ್ಯಾನ್ ಇಂಡಿಯಾ ಚಿತ್ರ. ಆದಾಗ್ಯೂ ಮೊದಲ ದಿನ 9.35 ಕೋಟಿ ರೂಪಾಯಿ, ಎರಡನೇ ದಿನ 7.15 ಕೋಟಿ ರೂಪಾಯಿ ಹಾಗೂ ಭಾನುವಾರ 7.25 ಕೋಟಿ ರೂಪಾಯಿ ಮಾತ್ರ ಗಳಿಕೆ ಮಾಡಿದೆ. ಈ ಮೂಲಕ ಸಿನಿಮಾದ ಕಲೆಕ್ಷನ್ 23.75 ಕೋಟಿ ರೂಪಾಯಿ ಆಗಿದೆ. ವಾರಾಂತ್ಯದಲ್ಲೇ ಇಷ್ಟು ಹೀನಾಯ ಕಲೆಕ್ಷನ್ ಮಾಡಿದರೆ ಎಂದರೆ ಚಿತ್ರ ವಾರದ ದಿನಗಳಲ್ಲಿ ಇನ್ನೆಷ್ಟು ಕಲೆಕ್ಷನ್ ಮಾಡಬಹುದು ಎಂಬ ಸ್ಪಷ್ಟ ಚಿತ್ರಣ ಸಿಕ್ಕಿದೆ.

ಇದನ್ನೂ ಓದಿ
Image
ಹೃದಯಾಘಾತ, ಇಂಜಂಕ್ಷನ್ ಅಲ್ಲ; ಶೆಫಾಲಿ ಸಾವಿನ ಹಿಂದಿನ ರಹಸ್ಯ ತಿಳಿಸಿದ
Image
‘ಸಿತಾರೆ ಜಮೀನ್ ಪರ್​​’: ಆಮಿರ್ ಖಾನ್ ರಿಮೇಕ್ ಮಾಡಿದ್ದೇಕೆ? ಉತ್ತರಿಸಿದ ನಟ
Image
ಪಿಯುಸಿಯಲ್ಲಿ ಟಾಪರ್, ಐಎಎಸ್ ಓದಬೇಕಿದ್ದ ಯುವತಿ ನಟಿಯಾದ ಕಥೆ
Image
ವಿಚ್ಛೇದನ ಹಂತದಲ್ಲಿದ್ದ ನಟಿ ಈಗ ಪ್ರೆಗ್ನೆಂಟ್; ಆದರೆ, ಪತಿಗೇ ಗೊತ್ತೇ ಇಲ್ಲ

ಇದನ್ನೂ ಓದಿ: ‘ಕಣ್ಣಪ್ಪ’ ಚಿತ್ರದಲ್ಲಿ ಸಂಭಾವನೆ ಪಡೆಯದೆ ನಟಿಸಿದ ಕಲಾವಿದರು ಇವರು..

‘ಕಣ್ಣಪ್ಪ’ ಸಿನಿಮಾದ ಬಜೆಟ್ ವಿಚಾರ ಗೊತ್ತೇ ಇದೆ. ಈ ಸಿನಿಮಾ 300 ಕೋಟಿ ರೂಪಾಯಿ ಹಣದಲ್ಲಿ ನಿರ್ಮಾಣಗೊಂಡಿದೆ. ವಿಎಫ್​ಎಕ್ಸ್​​ಗೆ ಹೆಚ್ಚಿನ ಹಣ ಸುರಿಯಲಾಗಿದೆ. ಹೀಗಾಗಿ, ಇಷ್ಟು ಸಣ್ಣ ಗಳಿಕೆಯಿಂದ ಚಿತ್ರಕ್ಕೆ ಹೆಚ್ಚಿನ ಲಾಭವೇನು ಆಗೋದಿಲ್ಲ. ಒಟಿಟಿ ಹಾಗೂ ಸೆಟಲೈಟ್ಸ್ ಹಕ್ಕುಗಳ ಮಾರಾಟದಿಂದ ಚಿತ್ರಕ್ಕೆ ಒಳ್ಳೆಯ ಮೊತ್ತ ಸಿಕ್ಕಿರಬಹುದು. ಆದರೆ, ಥಿಯೇಟರ್​​ನಲ್ಲಿ ಕಲೆಕ್ಷನ್ ಆಗದೆ ಚಿತ್ರಕ್ಕೆ ಗೆಲುವು ಸಿಗೋದು ಅನುಮಾನ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ