AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರದ ದಿನ ಪಾತಾಳ ಕಂಡ ‘ಕಣ್ಣಪ್ಪ’ ಬಾಕ್ಸ್ ಆಫೀಸ್ ಕಲೆಕ್ಷನ್

ವಿಷ್ಣು ಮಂಚು ನಟನೆಯ ‘ಕಣ್ಣಪ್ಪ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷೆಯಂತೆ ಗಳಿಕೆ ಮಾಡಲು ವಿಫಲವಾಗಿದೆ. ಸೋಮವಾರದ ಕಡಿಮೆ ಗಳಿಕೆಯು ಚಿತ್ರದ ಭವಿಷ್ಯಕ್ಕೆ ಕಪ್ಪು ನೆರಳನ್ನು ಬೀರಿದೆ. ಪೌರಾಣಿಕ ಕಥೆಗೆ ಆಧುನಿಕ ಅಂಶಗಳನ್ನು ಸೇರಿಸಿದ್ದು ಚಿತ್ರಕ್ಕೆ ಹಿನ್ನಡೆಯಾಗಿದೆ ಎನ್ನಲಾಗಿದೆ. 300 ಕೋಟಿ ಬಜೆಟ್‌ನ ಚಿತ್ರ ಕೇವಲ 25 ಕೋಟಿ ಗಳಿಕೆ ಮಾಡಿದ್ದು ನಿರ್ಮಾಪಕರಿಗೆ ದೊಡ್ಡ ನಷ್ಟವನ್ನುಂಟು ಮಾಡಿದೆ.

ವಾರದ ದಿನ ಪಾತಾಳ ಕಂಡ ‘ಕಣ್ಣಪ್ಪ’ ಬಾಕ್ಸ್ ಆಫೀಸ್ ಕಲೆಕ್ಷನ್
ವಿಷ್ಣು ಮಂಚು
 ಶ್ರೀಲಕ್ಷ್ಮೀ ಎಚ್
| Edited By: |

Updated on:Jul 11, 2025 | 11:05 AM

Share

ವಿಷ್ಣು ಮಂಚು ನಟನೆಯ ‘ಕಣ್ಣಪ್ಪ’ ಸಿನಿಮಾ (Kannappa Movie) ಈಗ ಸೋಮವಾರದ ಪರೀಕ್ಷೆಯಲ್ಲಿ ಫೇಲ್ ಆಗಿದೆ. ಸಾಮಾನ್ಯವಾಗಿ ಹಲವು ಸಿನಿಮಾಗಳು ವಾರಾಂತ್ಯದಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತವೆ. ಆದರೆ, ವಾರದ ದಿನಗಳಲ್ಲಿ ಸಿನಿಮಾಗಳ ಕಲೆಕ್ಷನ್ ಹೀನಾಯ ಮಟ್ಟ ತಲುಪುತ್ತದೆ. ವಾರದ ಮೊದಲ ದಿನವಾದ ಸೋಮವಾರ ಚಿತ್ರದ ಗಳಿಕೆ  ಒಂದು ಹಂತಕ್ಕೆ ಆದರೆ ಸಿನಿಮಾ ಗೆದ್ದಂತೆ. ಆದರೆ, ‘ಕಣ್ಣಪ್ಪ’ ಸಿನಿಮಾ ಈ ಅಡೆ-ತಡೆಯನ್ನು ದಾಟಲು ವಿಫಲವಾಗಿದೆ. ಸಿನಿಮಾ ಹೀನಾಯವಾಗಿ ಸೋಲುವ ಸೂಚನೆ ಸಿಕ್ಕಿದೆ.

ಶಿವನ ಭಕ್ತ ಕಣ್ಣಪ್ಪನ ಕಥೆಯನ್ನು ಸಿನಿಮಾದಲ್ಲಿ ಹೇಳಲಾಗಿದೆ. ಪೌರಾಣಿಕ ಕಥೆಯ ಜೊತೆ ಸಿನಿಮಾಗೆ ಮಾಡರ್ನ್ ಟಚ್ ಕೊಟ್ಟಿದ್ದು ಸಿನಿಮಾಗೆ ಹಿನ್ನಡೆ ಆಗಿದೆ. ಈ ಮೊದಲು ‘ಆದಿಪುರುಷ್’ ಚಿತ್ರದಲ್ಲೂ ಹಾಗೆಯೇ ಆಗಿತ್ತು. ಈ ಕಾರಣದಿಂದಲೇ ಚಿತ್ರದ ಗಳಿಕೆ ದಿನ ಕಳೆದಂತೆ ತಳಮಟ್ಟ ತಲುಪುತ್ತಿದೆ. ಈ ಚಿತ್ರ ಸೋಮವಾರವೂ ಅಂಥ ದೊಡ್ಡ ಗಳಿಕೆ ಏನೂ ಮಾಡಿಲ್ಲ. ಇದು ಚಿತ್ರತಂಡಕ್ಕೆ ಸಾಕಷ್ಟು ಚಿಂತೆಯನ್ನು ಉಂಟು ಮಾಡಿದೆ.

ಸೋಮವಾರ (ಜೂನ್ 30) ಈ ಸಿನಿಮಾ ಕೇವಲ 1.5 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ ಸುಮಾರು 25 ಕೋಟಿ ರೂಪಾಯಿ ಆಗಿದೆ. ಈ ಚಿತ್ರದ ಬಜೆಟ್ 300 ಕೋಟಿ ರೂಪಾಯಿ. ಹೀಗಿರುವಾಗ ಚಿತ್ರ ಇಷ್ಟು ಕಡಿಮೆ ಮೊತ್ತ ಕಲೆಕ್ಷನ್ ಮಾಡುತ್ತದೆ ಎಂದರೆ ನಿರ್ಮಾಪಕರಿಗೆ ಅದೆಷ್ಟು ದೊಡ್ಡ ನಷ್ಟ ಉಂಟಾಗಿರಬಹುದು ಎಂದು ನೀವೇ ಊಹಿಸಿ.

ಇದನ್ನೂ ಓದಿ
Image
‘ತನ್ನದೇ ಮೂತ್ರ ಕುಡಿಯುವ ವ್ಯಕ್ತಿ, ಪ್ರಚಾರಕ್ಕಾಗಿ ಇಷ್ಟು ಮಾಡಲ್ವಾ?’
Image
‘ಮನೆ ಬಾಡಿಗೆ ಏರಿದಂತೆ..’; ಬಿಗ್ ಬಾಸ್ ಸಂಭಾವನೆ ಬಗ್ಗೆ ಕಿಚ್ಚನ ನೇರ ಮಾತು
Image
‘ಒಳ ಉಡುಪು ಹಾಕಿದ್ದೀನಾ, ಇಲ್ಲವಾ ಎಂಬುದನ್ನು ನೀವು ನೋಡಿದ್ದೀರಾ?’;ಖುಷಿ
Image
‘ಸಿತಾರೆ ಜಮೀನ್ ಪರ್​​’: ಆಮಿರ್ ಖಾನ್ ರಿಮೇಕ್ ಮಾಡಿದ್ದೇಕೆ? ಉತ್ತರಿಸಿದ ನಟ

ಇದನ್ನೂ ಓದಿ: ಭಾನುವಾರವೂ ಹೆಚ್ಚಿಲ್ಲ ‘ಕಣ್ಣಪ್ಪ’ ಕಲೆಕ್ಷನ್; ನೂರಾರು ಕೋಟಿ ರೂ. ನೀರಲ್ಲಿ ಹೋಮ

‘ಕಣ್ಣಪ್ಪ’ ಸಿನಿಮಾದಲ್ಲಿ ವಿಷ್ಣು ಮಂಚು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಕಣ್ಣಪ್ಪನ ಪಾತ್ರ ಮಾಡಿದ್ದಾರೆ. ಪ್ರಭಾಸ್ ರುದ್ರನಾಗಿ ಕಾಣಿಸಿಕೊಂಡಿದ್ದಾರೆ. ಅಕ್ಷಯ್ ಕುಮಾರ್ ಅವರು ಶಿವನ ಪಾತ್ರ ಮಾಡಿದ್ದಾರೆ. ಪ್ರಭಾಸ್, ಮೋಹನ್​ಲಾಲ್ ಅವರು ಈ ಚಿತ್ರಕ್ಕಾಗಿ ಯಾವುದೇ ಸಂಭಾವನೆ ಪಡೆದಿಲ್ಲ ಎನ್ನಲಾಗಿದೆ.

ವಿಷ್ಣು ಮಂಚು ಅವರು ಸಿನಿಮಾ ರಿಲೀಸ್​ಗೂ ಮೊದಲೇ ಎಲ್ಲರಿಗೂ ಎಚ್ಚರಿಕೆ ನೀಡಿದ್ದರು. ಸಿನಿಮಾ ಬಗ್ಗೆ ಟ್ರೋಲ್ ಮಾಡಿದರೆ ಕ್ರಮ ಕೈಗೊಳ್ಳೋದಾಗಿ ಹೇಳಿದ್ದರು. ಆದರೆ, ಯಾರೊಬ್ಬರೂ ಟ್ರೋಲ್ ಮಾಡೋದನ್ನು ನಿಲ್ಲಿಸಿಲ್ಲ. ಈ ಚಿತ್ರದಿಂ ವಿಷ್ಣುಗೆ ನಷ್ಟ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:33 am, Tue, 1 July 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು