AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಣ್ಣಪ್ಪ’ ಜೊತೆ ಈ ವಾರ ಪೈಪೋಟಿಗೆ ಇಳಿದ ಸಿನಿಮಾಗಳು ಯಾವವು? ಇಲ್ಲಿದೆ ವಿವರ..

ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಕಣ್ಣಪ್ಪ’ ಸಿನಿಮಾ ಬಿಡುಗಡೆ ಆಗುತ್ತಿವೆ. ಕನ್ನಡದಲ್ಲಿ ‘ಎಕ್ಸ್ ಆ್ಯಂಡ್ ವೈ’, ‘ಅವನಿರಬೇಕಿತ್ತು’ ಮುಂತಾದ ಸಿನಿಮಾಗಳು ರಿಲೀಸ್ ಆಗುತ್ತಿವೆ. ಹಿಂದಿಯಲ್ಲಿ ಹಾರರ್ ಕಥಾಹಂದರದ ‘ಮಾ’ ಚಿತ್ರ ತೆರೆಕಾಣುತ್ತಿದೆ. ಕಳೆದ ವಾರ ಬಿಡುಗಡೆ ಆಗಿ ಗಮನ ಸೆಳೆದ ಸಿನಿಮಾಗಳು ಕೂಡ ಪೈಪೋಟಿ ನೀಡುತ್ತಿವೆ.

‘ಕಣ್ಣಪ್ಪ’ ಜೊತೆ ಈ ವಾರ ಪೈಪೋಟಿಗೆ ಇಳಿದ ಸಿನಿಮಾಗಳು ಯಾವವು? ಇಲ್ಲಿದೆ ವಿವರ..
This Week Release
ಮದನ್​ ಕುಮಾರ್​
|

Updated on: Jun 26, 2025 | 6:28 PM

Share

ಶುಕ್ರವಾರ ಬಂದರೆ ಸಿನಿಪ್ರಿಯರಿಗೆ ಹಬ್ಬ. ಹೊಸ ಸಿನಿಮಾ (New  Film) ನೋಡಿ ಕಣ್ತುಂಬಿಕೊಳ್ಳುವ ಉತ್ಸಾಹ. ಸಿಕ್ಕಾಪಟ್ಟೆ ಪೈಪೋಟಿ ಇರುವ ಈ ಕಾಲದಲ್ಲಿ ಒಂದೇ ದಿನ ಹಲವು ಸಿನಿಮಾಗಳು ಬಿಡುಗಡೆ ಆಗುತ್ತವೆ. ಆ ಪೈಕಿ ಯಾವುದನ್ನು ನೋಡಬೇಕು ಎಂಬ ಗೊಂದಲ ಸಹಜ. ಈ ವಾರ (ಜೂನ್ 27) ಕೂಡ ಹಲವು ಸಿನಿಮಾಗಳು ತೆರೆ ಕಾಣುತ್ತಿವೆ. ಆ ಪೈಕಿ ‘ಕಣ್ಣಪ್ಪ’ ಸಿನಿಮಾ (Kannappa) ಪ್ರಮುಖವಾಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಬಿಡುಗಡೆ ಆಗುತ್ತಿದೆ. ಸ್ಟಾರ್ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ‘ಕಣ್ಣಪ್ಪ’ ಸಿನಿಮಾಗೆ ಪೈಪೋಟಿ ನೀಡಲು ಇನ್ನೂ ಹಲವು ಸಿನಿಮಾಗಳು ತೆರೆಗೆ ಬರುತ್ತಿವೆ.

‘ಕಣ್ಣಪ್ಪ’ ಸಿನಿಮಾದಲ್ಲಿ ವಿಷ್ಣು ಮಂಚು ಹಾಗೂ ಮೋಹನ್ ಬಾಬು ಅವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಅಕ್ಷಯ್ ಕುಮಾರ್, ಪ್ರಭಾಸ್, ಮೋಹನ್​ಲಾಲ್ ಮುಂತಾದವರು ಈ ಚಿತ್ರದಲ್ಲಿ ಅತಿಥಿ ಪಾತ್ರಗಳನ್ನು ಮಾಡಿದ್ದಾರೆ. ಆ ಕಾರಣದಿಂದ ಹೈಪ್ ಜಾಸ್ತಿ ಆಗಿದೆ. ಶರತ್ ಕುಮಾರ್, ಕಾಜಲ್ ಅಗರ್​ವಾಲ್ ಮುಂತಾದ ಕಲಾವಿದರು ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ತೆಲುಗು, ಕನ್ನಡ, ಹಿಂದಿ ಮುಂತಾದ ಭಾಷೆಗಳಲ್ಲಿ ಈ ಚಿತ್ರ ರಿಲೀಸ್ ಆಗುತ್ತಿದೆ.

ಹಿಂದಿಯಲ್ಲಿ ‘ಮಾ’ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಸಿನಿಮಾದಲ್ಲಿ ಕಾಜೋಲ್ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಇದು ಹಾರರ್ ಸಿನಿಮಾ ಎಂಬುದು ವಿಶೇಷ. ಹಾಗಿದ್ದರೂ ಕೂಡ ಸೆನ್ಸಾರ್ ಮಂಡಳಿಯಿಂದ ‘ಯು/ಎ’ ಪ್ರಮಾಣ ಪತ್ರ ಪಡೆದಿದೆ. ಅಜಯ್ ದೇವಗನ್ ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಟ್ರೇಲರ್ ಮೂಲಕ ‘ಮಾ’ ಸಿನಿಮಾ ಗಮನ ಸೆಳೆದಿದೆ.

ಇದನ್ನೂ ಓದಿ
Image
ಸಿನಿಮಾಗಳನ್ನು ಬಿಟ್ಟು ವಾಚ್‌ಮ್ಯಾನ್ ಆದ ನಟ; ಈ ಪರಿಸ್ಥಿತಿ ಯಾರಿಗೂ ಬರಬಾರದು
Image
ದಕ್ಷಿಣದ ನಿರ್ಮಾಪಕರ ನೋಡಿ ಕಲಿಯಿರಿ: ಸ್ಟಾರ್ ನಟ ಟಾಂಗ್
Image
ಬಾಲಿವುಡ್ ಹೀರೋಗಳ ಬಣ್ಣ ಬಯಲು ಮಾಡಿದ ಸೋನು ಸೂದ್
Image
‘ಬಾಲಿವುಡ್ ಸಿನಿಮಾಗಳು ಭಾರತವನ್ನು ಕೆಟ್ಟದಾಗಿ ತೋರಿಸಿವೆ’; ರಿಷಬ್ ಶೆಟ್ಟಿ

ಕನ್ನಡದಲ್ಲಿ ‘ಅಥಣಿ’, ‘ಅವನಿರಬೇಕಿತ್ತು’, ‘ಬ್ಲಡಿ ಬಾಬು’, ‘ರಾಜರತ್ನಾಕರ’, ‘ತಿಮ್ಮನ ಮೊಟ್ಟೆಗಳು’, ‘ಎಕ್ಸ್ ಆ್ಯಂಡ್ ವೈ’ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಈಗಾಗಲೇ ಬಿಡುಗಡೆ ಆಗಿರುವ ‘ಮಾದೇವ’, ‘ಎಡಗೈಯೇ ಅಪಘಾತಕ್ಕೆ ಕಾರಣ’, ‘ಸಂಜು ವೆಡ್ಸ್ ಗೀತಾ 2’ ಸಿನಿಮಾಗಳು ಕೂಡ ಪ್ರದರ್ಶನ ಆಗುತ್ತಿವೆ. ಬಾಕ್ಸ್ ಆಫೀಸ್​ನಲ್ಲಿ ಈ ಎಲ್ಲ ಸಿನಿಮಾಗಳ ನಡುವೆ ಪೈಪೋಟಿ ಇದೆ.

ಇದನ್ನೂ ಓದಿ: ‘ಕಣ್ಣಪ್ಪ’ ಸಿನಿಮಾಕ್ಕೆ ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್​ಲಾಲ್ ಪಡೆದ ಸಂಭಾವನೆ ಎಷ್ಟು?

ಹಾಲಿವುಡ್​ನಲ್ಲಿ ಬ್ರಾಡ್​ ಪಿಟ್ ನಟನೆಯ ‘ಎಫ್​ 1: ದಿ ಮೂವೀ’ ಕೂಡ ಇದೇ ವಾರ ತೆರೆಕಾಣುತ್ತಿದೆ. ಕಳೆದ ವಾರ ಬಿಡುಗಡೆ ಆಗಿ ಗಮನ ಸೆಳೆದಿರುವ ಹಿಂದಿಯ ‘ಸಿತಾರೆ ಜಮೀನ್ ಪರ್’, ತಮಿಳಿನ ‘ಕುಬೇರ’ ಸಿನಿಮಾಗಳು ಕೂಡ ಈ ವೀಕೆಂಡ್​​ನಲ್ಲಿ ಉತ್ತಮ ಪ್ರದರ್ಶನ ಕಾಣಲಿವೆ. ಹೊಸ ಸಿನಿಮಾಗಳಿಗೆ ಈ ಚಿತ್ರಗಳು ಪೈಪೋಟಿ ನೀಡುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್