AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೊಡ್ಡ ಚಿತ್ರಗಳಿಗೆ ಕಾಂತಾರದಿಂದ ಹಾರ್ಟ್​ ಅಟ್ಯಾಕ್ ಆಗಿದೆ’; ರಿಷಬ್​ ಶೆಟ್ಟಿಗೆ ಡೆವಿಲ್ ಎಂದ ಆರ್​ಜಿವಿ

ಈ ಚಿತ್ರದ ಎದುರು ಅನೇಕ ದೊಡ್ಡ ಬಜೆಟ್ ಚಿತ್ರಗಳು ಮಂಡಿ ಊರಿವೆ. 15-20 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ನೂರಾರು ಕೋಟಿ ಬಾಚಿಕೊಂಡಿದೆ. ಈ ಚಿತ್ರದ ಬಗ್ಗೆ ಆರ್​ಜಿವಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

‘ದೊಡ್ಡ ಚಿತ್ರಗಳಿಗೆ ಕಾಂತಾರದಿಂದ ಹಾರ್ಟ್​ ಅಟ್ಯಾಕ್ ಆಗಿದೆ’; ರಿಷಬ್​ ಶೆಟ್ಟಿಗೆ ಡೆವಿಲ್ ಎಂದ ಆರ್​ಜಿವಿ
ಆರ್​ಜಿವಿ-ರಿಷಬ್
TV9 Web
| Edited By: |

Updated on:Oct 18, 2022 | 7:03 PM

Share

ರಿಷಬ್ ಶೆಟ್ಟಿ (Rishab Shetty) ಅವರ ನಟನೆಯ ‘ಕಾಂತಾರ’ ಸಿನಿಮಾ (Kantara Movie) ಧೂಳೆಬ್ಬಿಸುತ್ತಿದೆ. ಯಾರ ಬಾಯಲ್ಲಿ ಕೇಳಿದರೂ ಈ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ. ಅನೇಕ ಸ್ಟಾರ್​​ಗಳು ‘ಕಾಂತಾರ’ ಚಿತ್ರವನ್ನು ಹಾಡಿ ಹೊಗಳಿದ್ದಾರೆ. ಈಗ ರಾಮ್ ಗೋಪಾಲ್ ವರ್ಮಾ ಅವರು ಕಾಂತಾರ’ದ ಬಗ್ಗೆ ಒಳ್ಳೆಯ ಮಾತುಗಳನ್ನು ಆಡಿದ್ದಾರೆ. ಅಷ್ಟೇ ಅಲ್ಲ ಹಲವು ಭ್ರಮೆಗಳನ್ನು ಈ ಚಿತ್ರ ತೊಡೆದು ಹಾಕಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ಕಾಂತಾರ’ ಸಿನಿಮಾ ಕನ್ನಡದಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಂಡಿತು. ಬುಕ್​ ಮೈ ಶೋನಲ್ಲಿ ಈಗಲೂ 9.9 ರೇಟಿಂಗ್ ಪಡೆದು ಈ ಸಿನಿಮಾ ಮುನ್ನುಗ್ಗುತ್ತಿದೆ. ಸದ್ಯ, ಹಿಂದಿ, ತೆಲುಗು, ತಮಿಳು ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗಿ ಜನರಿಂದ ಪ್ರಶಂಸೆ ಪಡೆದುಕೊಳ್ಳುತ್ತಿದೆ. ಈ ಚಿತ್ರದ ಎದುರು ಅನೇಕ ದೊಡ್ಡ ಬಜೆಟ್ ಚಿತ್ರಗಳು ಮಂಡಿ ಊರಿವೆ. 15-20 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ನೂರಾರು ಕೋಟಿ ಬಾಚಿಕೊಂಡಿದೆ. ಈ ಚಿತ್ರದ ಬಗ್ಗೆ ಆರ್​ಜಿವಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಇದನ್ನೂ ಓದಿ
Image
Kantara: ‘ಕಾಂತಾರ’ ಚಿತ್ರದಿಂದ ಅಲ್ಲು ಅರ್ಜುನ್​ ತಂದೆಗೆ ಭಾರಿ ಲಾಭ; ಎಷ್ಟಕ್ಕೆ ನಡೆಯಿತು ತೆಲುಗು ವ್ಯವಹಾರ?
Image
Rishab Shetty: ಒಂದೇ ದಿನಕ್ಕೆ 15 ಕೋಟಿ ರೂಪಾಯಿ ಬಾಚಿದ ‘ಕಾಂತಾರ’; ಪರಭಾಷೆಯಲ್ಲಿ ಭರ್ಜರಿ ಕಮಾಯಿ
Image
Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ
Image
Rishab Shetty: ರಿಷಬ್​ ಶೆಟ್ಟಿ ಕಾಲಿಗೆ ಬಿದ್ದ ಖ್ಯಾತ ಯೂಟ್ಯೂಬರ್​; ಹಿಂದಿ ಪ್ರೇಕ್ಷಕರಲ್ಲಿ ಹೆಚ್ಚಿತು ‘ಕಾಂತಾರ’ ಸೆನ್ಸೇಷನ್​

‘ದೊಡ್ಡ ಬಜೆಟ್​​ನ ಸಿನಿಮಾಗಳು ಬಂದರೆ ಮಾತ್ರ ಜನರು ಥಿಯೇಟರ್​ಗೆ ಬರುತ್ತಾರೆ ಎಂಬ ನಂಬಿಕೆಯನ್ನು ರಿಷಬ್ ಶೆಟ್ಟಿ ಸುಳ್ಳು ಮಾಡಿದ್ದಾರೆ. ಮುಂದಿನ ಹಲವು ದಶಕಗಳಿಗೆ ಕಾಂತಾರ ಒಂದೊಳ್ಳೆಯ ಪಾಠ’ ಎಂದು ಆರ್​ಜಿವಿ ಟ್ವೀಟ್ ಮಾಡಿದ್ದಾರೆ.

‘300, 400, 500 ಕೋಟಿ ರೂಪಾಯಿ ಬಜೆಟ್ ಸಿನಿಮಾಗಳು ಕಾಂತಾರ ಕಲೆಕ್ಷನ್ ಎಂಬ ಹಾರ್ಟ್​ ಅಟ್ಯಾಕ್​ನಿಂದ ಮೃತಪಟ್ಟಿವೆ. ಡೆವಿಲ್ ​ರಿಷಬ್ ಶೆಟ್ಟಿಗೆ ಧನ್ಯವಾದ ಹೇಳಬೇಕು. ದೊಡ್ಡ ಬಜೆಟ್​ ಸಿನಿಮಾಗಳು ಕಾಂತಾರದ ಭರ್ಜರಿ ಕಲೆಕ್ಷನ್​ನಿಂದ ರಾತ್ರೋರಾತ್ರಿ ಕಾಲ್ಕಿತ್ತಿವೆ. ಕಾಂತಾರ ಎಂಬ ಒಂದೊಳ್ಳೆಯ ಪಾಠವನ್ನು ಹೇಳಿದ ನಿಮಗೆ ಧನ್ಯವಾದ. ಚಿತ್ರರಂಗದ ಎಲ್ಲರೂ ನಿಮಗೆ ಟ್ಯೂಷನ್ ಹಣವನ್ನು ಪಾವತಿಸಬೇಕು’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Published On - 6:00 pm, Tue, 18 October 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ