AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೊಡ್ಡ ಚಿತ್ರಗಳಿಗೆ ಕಾಂತಾರದಿಂದ ಹಾರ್ಟ್​ ಅಟ್ಯಾಕ್ ಆಗಿದೆ’; ರಿಷಬ್​ ಶೆಟ್ಟಿಗೆ ಡೆವಿಲ್ ಎಂದ ಆರ್​ಜಿವಿ

ಈ ಚಿತ್ರದ ಎದುರು ಅನೇಕ ದೊಡ್ಡ ಬಜೆಟ್ ಚಿತ್ರಗಳು ಮಂಡಿ ಊರಿವೆ. 15-20 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ನೂರಾರು ಕೋಟಿ ಬಾಚಿಕೊಂಡಿದೆ. ಈ ಚಿತ್ರದ ಬಗ್ಗೆ ಆರ್​ಜಿವಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

‘ದೊಡ್ಡ ಚಿತ್ರಗಳಿಗೆ ಕಾಂತಾರದಿಂದ ಹಾರ್ಟ್​ ಅಟ್ಯಾಕ್ ಆಗಿದೆ’; ರಿಷಬ್​ ಶೆಟ್ಟಿಗೆ ಡೆವಿಲ್ ಎಂದ ಆರ್​ಜಿವಿ
ಆರ್​ಜಿವಿ-ರಿಷಬ್
TV9 Web
| Edited By: |

Updated on:Oct 18, 2022 | 7:03 PM

Share

ರಿಷಬ್ ಶೆಟ್ಟಿ (Rishab Shetty) ಅವರ ನಟನೆಯ ‘ಕಾಂತಾರ’ ಸಿನಿಮಾ (Kantara Movie) ಧೂಳೆಬ್ಬಿಸುತ್ತಿದೆ. ಯಾರ ಬಾಯಲ್ಲಿ ಕೇಳಿದರೂ ಈ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ. ಅನೇಕ ಸ್ಟಾರ್​​ಗಳು ‘ಕಾಂತಾರ’ ಚಿತ್ರವನ್ನು ಹಾಡಿ ಹೊಗಳಿದ್ದಾರೆ. ಈಗ ರಾಮ್ ಗೋಪಾಲ್ ವರ್ಮಾ ಅವರು ಕಾಂತಾರ’ದ ಬಗ್ಗೆ ಒಳ್ಳೆಯ ಮಾತುಗಳನ್ನು ಆಡಿದ್ದಾರೆ. ಅಷ್ಟೇ ಅಲ್ಲ ಹಲವು ಭ್ರಮೆಗಳನ್ನು ಈ ಚಿತ್ರ ತೊಡೆದು ಹಾಕಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ಕಾಂತಾರ’ ಸಿನಿಮಾ ಕನ್ನಡದಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಂಡಿತು. ಬುಕ್​ ಮೈ ಶೋನಲ್ಲಿ ಈಗಲೂ 9.9 ರೇಟಿಂಗ್ ಪಡೆದು ಈ ಸಿನಿಮಾ ಮುನ್ನುಗ್ಗುತ್ತಿದೆ. ಸದ್ಯ, ಹಿಂದಿ, ತೆಲುಗು, ತಮಿಳು ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗಿ ಜನರಿಂದ ಪ್ರಶಂಸೆ ಪಡೆದುಕೊಳ್ಳುತ್ತಿದೆ. ಈ ಚಿತ್ರದ ಎದುರು ಅನೇಕ ದೊಡ್ಡ ಬಜೆಟ್ ಚಿತ್ರಗಳು ಮಂಡಿ ಊರಿವೆ. 15-20 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ನೂರಾರು ಕೋಟಿ ಬಾಚಿಕೊಂಡಿದೆ. ಈ ಚಿತ್ರದ ಬಗ್ಗೆ ಆರ್​ಜಿವಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಇದನ್ನೂ ಓದಿ
Image
Kantara: ‘ಕಾಂತಾರ’ ಚಿತ್ರದಿಂದ ಅಲ್ಲು ಅರ್ಜುನ್​ ತಂದೆಗೆ ಭಾರಿ ಲಾಭ; ಎಷ್ಟಕ್ಕೆ ನಡೆಯಿತು ತೆಲುಗು ವ್ಯವಹಾರ?
Image
Rishab Shetty: ಒಂದೇ ದಿನಕ್ಕೆ 15 ಕೋಟಿ ರೂಪಾಯಿ ಬಾಚಿದ ‘ಕಾಂತಾರ’; ಪರಭಾಷೆಯಲ್ಲಿ ಭರ್ಜರಿ ಕಮಾಯಿ
Image
Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ
Image
Rishab Shetty: ರಿಷಬ್​ ಶೆಟ್ಟಿ ಕಾಲಿಗೆ ಬಿದ್ದ ಖ್ಯಾತ ಯೂಟ್ಯೂಬರ್​; ಹಿಂದಿ ಪ್ರೇಕ್ಷಕರಲ್ಲಿ ಹೆಚ್ಚಿತು ‘ಕಾಂತಾರ’ ಸೆನ್ಸೇಷನ್​

‘ದೊಡ್ಡ ಬಜೆಟ್​​ನ ಸಿನಿಮಾಗಳು ಬಂದರೆ ಮಾತ್ರ ಜನರು ಥಿಯೇಟರ್​ಗೆ ಬರುತ್ತಾರೆ ಎಂಬ ನಂಬಿಕೆಯನ್ನು ರಿಷಬ್ ಶೆಟ್ಟಿ ಸುಳ್ಳು ಮಾಡಿದ್ದಾರೆ. ಮುಂದಿನ ಹಲವು ದಶಕಗಳಿಗೆ ಕಾಂತಾರ ಒಂದೊಳ್ಳೆಯ ಪಾಠ’ ಎಂದು ಆರ್​ಜಿವಿ ಟ್ವೀಟ್ ಮಾಡಿದ್ದಾರೆ.

‘300, 400, 500 ಕೋಟಿ ರೂಪಾಯಿ ಬಜೆಟ್ ಸಿನಿಮಾಗಳು ಕಾಂತಾರ ಕಲೆಕ್ಷನ್ ಎಂಬ ಹಾರ್ಟ್​ ಅಟ್ಯಾಕ್​ನಿಂದ ಮೃತಪಟ್ಟಿವೆ. ಡೆವಿಲ್ ​ರಿಷಬ್ ಶೆಟ್ಟಿಗೆ ಧನ್ಯವಾದ ಹೇಳಬೇಕು. ದೊಡ್ಡ ಬಜೆಟ್​ ಸಿನಿಮಾಗಳು ಕಾಂತಾರದ ಭರ್ಜರಿ ಕಲೆಕ್ಷನ್​ನಿಂದ ರಾತ್ರೋರಾತ್ರಿ ಕಾಲ್ಕಿತ್ತಿವೆ. ಕಾಂತಾರ ಎಂಬ ಒಂದೊಳ್ಳೆಯ ಪಾಠವನ್ನು ಹೇಳಿದ ನಿಮಗೆ ಧನ್ಯವಾದ. ಚಿತ್ರರಂಗದ ಎಲ್ಲರೂ ನಿಮಗೆ ಟ್ಯೂಷನ್ ಹಣವನ್ನು ಪಾವತಿಸಬೇಕು’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Published On - 6:00 pm, Tue, 18 October 22

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು