‘ದೊಡ್ಡ ಚಿತ್ರಗಳಿಗೆ ಕಾಂತಾರದಿಂದ ಹಾರ್ಟ್​ ಅಟ್ಯಾಕ್ ಆಗಿದೆ’; ರಿಷಬ್​ ಶೆಟ್ಟಿಗೆ ಡೆವಿಲ್ ಎಂದ ಆರ್​ಜಿವಿ

ಈ ಚಿತ್ರದ ಎದುರು ಅನೇಕ ದೊಡ್ಡ ಬಜೆಟ್ ಚಿತ್ರಗಳು ಮಂಡಿ ಊರಿವೆ. 15-20 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ನೂರಾರು ಕೋಟಿ ಬಾಚಿಕೊಂಡಿದೆ. ಈ ಚಿತ್ರದ ಬಗ್ಗೆ ಆರ್​ಜಿವಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

‘ದೊಡ್ಡ ಚಿತ್ರಗಳಿಗೆ ಕಾಂತಾರದಿಂದ ಹಾರ್ಟ್​ ಅಟ್ಯಾಕ್ ಆಗಿದೆ’; ರಿಷಬ್​ ಶೆಟ್ಟಿಗೆ ಡೆವಿಲ್ ಎಂದ ಆರ್​ಜಿವಿ
ಆರ್​ಜಿವಿ-ರಿಷಬ್
Follow us
| Updated By: ರಾಜೇಶ್ ದುಗ್ಗುಮನೆ

Updated on:Oct 18, 2022 | 7:03 PM

ರಿಷಬ್ ಶೆಟ್ಟಿ (Rishab Shetty) ಅವರ ನಟನೆಯ ‘ಕಾಂತಾರ’ ಸಿನಿಮಾ (Kantara Movie) ಧೂಳೆಬ್ಬಿಸುತ್ತಿದೆ. ಯಾರ ಬಾಯಲ್ಲಿ ಕೇಳಿದರೂ ಈ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ. ಅನೇಕ ಸ್ಟಾರ್​​ಗಳು ‘ಕಾಂತಾರ’ ಚಿತ್ರವನ್ನು ಹಾಡಿ ಹೊಗಳಿದ್ದಾರೆ. ಈಗ ರಾಮ್ ಗೋಪಾಲ್ ವರ್ಮಾ ಅವರು ಕಾಂತಾರ’ದ ಬಗ್ಗೆ ಒಳ್ಳೆಯ ಮಾತುಗಳನ್ನು ಆಡಿದ್ದಾರೆ. ಅಷ್ಟೇ ಅಲ್ಲ ಹಲವು ಭ್ರಮೆಗಳನ್ನು ಈ ಚಿತ್ರ ತೊಡೆದು ಹಾಕಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ಕಾಂತಾರ’ ಸಿನಿಮಾ ಕನ್ನಡದಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಂಡಿತು. ಬುಕ್​ ಮೈ ಶೋನಲ್ಲಿ ಈಗಲೂ 9.9 ರೇಟಿಂಗ್ ಪಡೆದು ಈ ಸಿನಿಮಾ ಮುನ್ನುಗ್ಗುತ್ತಿದೆ. ಸದ್ಯ, ಹಿಂದಿ, ತೆಲುಗು, ತಮಿಳು ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗಿ ಜನರಿಂದ ಪ್ರಶಂಸೆ ಪಡೆದುಕೊಳ್ಳುತ್ತಿದೆ. ಈ ಚಿತ್ರದ ಎದುರು ಅನೇಕ ದೊಡ್ಡ ಬಜೆಟ್ ಚಿತ್ರಗಳು ಮಂಡಿ ಊರಿವೆ. 15-20 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ನೂರಾರು ಕೋಟಿ ಬಾಚಿಕೊಂಡಿದೆ. ಈ ಚಿತ್ರದ ಬಗ್ಗೆ ಆರ್​ಜಿವಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಇದನ್ನೂ ಓದಿ
Image
Kantara: ‘ಕಾಂತಾರ’ ಚಿತ್ರದಿಂದ ಅಲ್ಲು ಅರ್ಜುನ್​ ತಂದೆಗೆ ಭಾರಿ ಲಾಭ; ಎಷ್ಟಕ್ಕೆ ನಡೆಯಿತು ತೆಲುಗು ವ್ಯವಹಾರ?
Image
Rishab Shetty: ಒಂದೇ ದಿನಕ್ಕೆ 15 ಕೋಟಿ ರೂಪಾಯಿ ಬಾಚಿದ ‘ಕಾಂತಾರ’; ಪರಭಾಷೆಯಲ್ಲಿ ಭರ್ಜರಿ ಕಮಾಯಿ
Image
Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ
Image
Rishab Shetty: ರಿಷಬ್​ ಶೆಟ್ಟಿ ಕಾಲಿಗೆ ಬಿದ್ದ ಖ್ಯಾತ ಯೂಟ್ಯೂಬರ್​; ಹಿಂದಿ ಪ್ರೇಕ್ಷಕರಲ್ಲಿ ಹೆಚ್ಚಿತು ‘ಕಾಂತಾರ’ ಸೆನ್ಸೇಷನ್​

‘ದೊಡ್ಡ ಬಜೆಟ್​​ನ ಸಿನಿಮಾಗಳು ಬಂದರೆ ಮಾತ್ರ ಜನರು ಥಿಯೇಟರ್​ಗೆ ಬರುತ್ತಾರೆ ಎಂಬ ನಂಬಿಕೆಯನ್ನು ರಿಷಬ್ ಶೆಟ್ಟಿ ಸುಳ್ಳು ಮಾಡಿದ್ದಾರೆ. ಮುಂದಿನ ಹಲವು ದಶಕಗಳಿಗೆ ಕಾಂತಾರ ಒಂದೊಳ್ಳೆಯ ಪಾಠ’ ಎಂದು ಆರ್​ಜಿವಿ ಟ್ವೀಟ್ ಮಾಡಿದ್ದಾರೆ.

‘300, 400, 500 ಕೋಟಿ ರೂಪಾಯಿ ಬಜೆಟ್ ಸಿನಿಮಾಗಳು ಕಾಂತಾರ ಕಲೆಕ್ಷನ್ ಎಂಬ ಹಾರ್ಟ್​ ಅಟ್ಯಾಕ್​ನಿಂದ ಮೃತಪಟ್ಟಿವೆ. ಡೆವಿಲ್ ​ರಿಷಬ್ ಶೆಟ್ಟಿಗೆ ಧನ್ಯವಾದ ಹೇಳಬೇಕು. ದೊಡ್ಡ ಬಜೆಟ್​ ಸಿನಿಮಾಗಳು ಕಾಂತಾರದ ಭರ್ಜರಿ ಕಲೆಕ್ಷನ್​ನಿಂದ ರಾತ್ರೋರಾತ್ರಿ ಕಾಲ್ಕಿತ್ತಿವೆ. ಕಾಂತಾರ ಎಂಬ ಒಂದೊಳ್ಳೆಯ ಪಾಠವನ್ನು ಹೇಳಿದ ನಿಮಗೆ ಧನ್ಯವಾದ. ಚಿತ್ರರಂಗದ ಎಲ್ಲರೂ ನಿಮಗೆ ಟ್ಯೂಷನ್ ಹಣವನ್ನು ಪಾವತಿಸಬೇಕು’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Published On - 6:00 pm, Tue, 18 October 22

ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​