AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯಿಂದ ಮೋಸ; ಫೇಸ್​ಬುಕ್​​ನಲ್ಲಿ ಲೈವ್​ ಬಂದು ವಿಷ ಕುಡಿದ ಕಾಮಿಡಿಯನ್

ತೀರ್ಥಾನಂದ್ ಅವರು ಫೇಸ್​ಬುಕ್ ಲೈವ್ ಬಂದಿದ್ದಾರೆ. ಈ ವೇಳೆ ಅವರು ಲಿವ್​-ಇನ್ ರಿಲೇಷನ್​ಶಿಪ್ ಬಗ್ಗೆ, ಬ್ಲಾಕ್​ಮೇಲ್ ಮಾಡುತ್ತಿರುವ ಬಗ್ಗೆ, ಹಣ ಕಿತ್ತಿರುವ ಬಗ್ಗೆ ಅವರು ಆರೋಪಿಸಿದ್ದಾರೆ.

ಮಹಿಳೆಯಿಂದ ಮೋಸ; ಫೇಸ್​ಬುಕ್​​ನಲ್ಲಿ ಲೈವ್​ ಬಂದು ವಿಷ ಕುಡಿದ ಕಾಮಿಡಿಯನ್
ಕಪಿಲ್ ಶರ್ಮಾ ಜೊತೆ ತೀರ್ಥಾನಂದ್
ರಾಜೇಶ್ ದುಗ್ಗುಮನೆ
|

Updated on: Jun 14, 2023 | 10:40 AM

Share

ನಟ ಹಾಗೂ ಕಾಮಿಡಿಯನ್ ತೀರ್ಥಾನಂದ್​ ರಾವ್ (Tirthanand Rao) ಅವರು ಕಪಿಲ್ ಶರ್ಮಾ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ. ‘ಕಾಮಿಡಿ ಸರ್ಕಸ್​​ ಕೆ ಆಜೂಬೆ’ ಶೋನಲ್ಲಿ ಕಪಿಲ್ ಶರ್ಮಾ (Kapil Sharma) ಜೊತೆ ಅವರು ಕೆಲಸ ಮಾಡಿದ್ದರು. ಈಗ ಅವರು ಫೇಸ್​ಬುಕ್ ಲೈವ್ ಬಂದು ವಿಷ ಕುಡಿದಿದ್ದಾರೆ. ‘ನನ್ನ ಸಾವಿಗೆ ಆ ಮಹಿಳೆಯೇ ಕಾರಣ’ ಎಂದು ಕಿಡಿಕಾರಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ. ತೀರ್ಥಾನಂದ್ ಅವರ ಆರೋಗ್ಯದ ಬಗ್ಗೆ ಎಲ್ಲರಿಗೂ ಆತಂಕ ಮೂಡಿದೆ.

ತೀರ್ಥಾನಂದ್ ಅವರು ಫೇಸ್​ಬುಕ್ ಲೈವ್ ಬಂದಿದ್ದಾರೆ. ಈ ವೇಳೆ ಅವರು ಲಿವ್​-ಇನ್ ರಿಲೇಷನ್​ಶಿಪ್ ಬಗ್ಗೆ, ಬ್ಲಾಕ್​ಮೇಲ್ ಮಾಡುತ್ತಿರುವ ಬಗ್ಗೆ, ಹಣ ಕಿತ್ತಿರುವ ಬಗ್ಗೆ ಅವರು ಆರೋಪಿಸಿದ್ದಾರೆ. ಈ ಸಂಬಂಧ ದೂರು ದಾಖಲಾಗಿದ್ದು, ಆ ಯುವತಿ ಯಾರು ಎಂಬಿತ್ಯಾದಿ ವಿಚಾರ ಇನ್ನಷ್ಟೇ ಬಯಲಿಗೆ ಬರಬೇಕಿದೆ.

‘ಮಹಿಳೆಯಿಂದಾಗಿ ನಾನು 3-4 ಲಕ್ಷ ರೂಪಾಯಿ ಸಾಲದಲ್ಲಿದ್ದೇನೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ನನಗೆ ಅವಳ ಪರಿಚಯ ಆಯಿತು. ಆಕೆ ನನ್ನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಆದರೆ ಇದಕ್ಕೆ ಕಾರಣ ನನಗೆ ತಿಳಿದಿಲ್ಲ. ನಂತರ ಆಕೆ ನನಗೆ ಕರೆ ಮಾಡಿ ಭೇಟಿಯಾಗಬೇಕೆಂದು ಹೇಳುತ್ತಿದ್ದಳು’ ಎಂದು ತೀರ್ಥಾನಂದ್ ವಿಡಿಯೋದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಇನ್ನೂ ಮುಗಿಯಲಿಲ್ಲ ಮುನಿಸು; ಕಪಿಲ್ ಶರ್ಮಾ ಶೋಗೆ ಸುನೀಲ್ ಗ್ರೋವರ್ ಬರೋದು ಅನುಮಾನ 

ಇದಾದ ಬಳಿಕ ಅವರು ವಿಷದ ಬಾಟಲಿ ತೆಗೆದುಕೊಂಡು ಕುಡಿದ್ದಾರೆ. ಆ ಬಳಿಕ ಅವರ ಗೆಳೆಯ ಮನೆಗೆ ಬಂದಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಅಂದಹಾಗೆ, ಈ ರೀತಿ ಅವರು ಆತ್ಮಹತ್ಯೆಗೆ ಪ್ರಯತ್ನಿಸಿರೋದು ಇದೇ ಮೊದಲೇನು ಅಲ್ಲ. 2021ರ ಡಿಸೆಂಬರ್​ನಲ್ಲಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆಯೂ ಅವರು ಲೈವ್ ಬಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​