AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯಿಂದ ಮೋಸ; ಫೇಸ್​ಬುಕ್​​ನಲ್ಲಿ ಲೈವ್​ ಬಂದು ವಿಷ ಕುಡಿದ ಕಾಮಿಡಿಯನ್

ತೀರ್ಥಾನಂದ್ ಅವರು ಫೇಸ್​ಬುಕ್ ಲೈವ್ ಬಂದಿದ್ದಾರೆ. ಈ ವೇಳೆ ಅವರು ಲಿವ್​-ಇನ್ ರಿಲೇಷನ್​ಶಿಪ್ ಬಗ್ಗೆ, ಬ್ಲಾಕ್​ಮೇಲ್ ಮಾಡುತ್ತಿರುವ ಬಗ್ಗೆ, ಹಣ ಕಿತ್ತಿರುವ ಬಗ್ಗೆ ಅವರು ಆರೋಪಿಸಿದ್ದಾರೆ.

ಮಹಿಳೆಯಿಂದ ಮೋಸ; ಫೇಸ್​ಬುಕ್​​ನಲ್ಲಿ ಲೈವ್​ ಬಂದು ವಿಷ ಕುಡಿದ ಕಾಮಿಡಿಯನ್
ಕಪಿಲ್ ಶರ್ಮಾ ಜೊತೆ ತೀರ್ಥಾನಂದ್
ರಾಜೇಶ್ ದುಗ್ಗುಮನೆ
|

Updated on: Jun 14, 2023 | 10:40 AM

Share

ನಟ ಹಾಗೂ ಕಾಮಿಡಿಯನ್ ತೀರ್ಥಾನಂದ್​ ರಾವ್ (Tirthanand Rao) ಅವರು ಕಪಿಲ್ ಶರ್ಮಾ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ. ‘ಕಾಮಿಡಿ ಸರ್ಕಸ್​​ ಕೆ ಆಜೂಬೆ’ ಶೋನಲ್ಲಿ ಕಪಿಲ್ ಶರ್ಮಾ (Kapil Sharma) ಜೊತೆ ಅವರು ಕೆಲಸ ಮಾಡಿದ್ದರು. ಈಗ ಅವರು ಫೇಸ್​ಬುಕ್ ಲೈವ್ ಬಂದು ವಿಷ ಕುಡಿದಿದ್ದಾರೆ. ‘ನನ್ನ ಸಾವಿಗೆ ಆ ಮಹಿಳೆಯೇ ಕಾರಣ’ ಎಂದು ಕಿಡಿಕಾರಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ. ತೀರ್ಥಾನಂದ್ ಅವರ ಆರೋಗ್ಯದ ಬಗ್ಗೆ ಎಲ್ಲರಿಗೂ ಆತಂಕ ಮೂಡಿದೆ.

ತೀರ್ಥಾನಂದ್ ಅವರು ಫೇಸ್​ಬುಕ್ ಲೈವ್ ಬಂದಿದ್ದಾರೆ. ಈ ವೇಳೆ ಅವರು ಲಿವ್​-ಇನ್ ರಿಲೇಷನ್​ಶಿಪ್ ಬಗ್ಗೆ, ಬ್ಲಾಕ್​ಮೇಲ್ ಮಾಡುತ್ತಿರುವ ಬಗ್ಗೆ, ಹಣ ಕಿತ್ತಿರುವ ಬಗ್ಗೆ ಅವರು ಆರೋಪಿಸಿದ್ದಾರೆ. ಈ ಸಂಬಂಧ ದೂರು ದಾಖಲಾಗಿದ್ದು, ಆ ಯುವತಿ ಯಾರು ಎಂಬಿತ್ಯಾದಿ ವಿಚಾರ ಇನ್ನಷ್ಟೇ ಬಯಲಿಗೆ ಬರಬೇಕಿದೆ.

‘ಮಹಿಳೆಯಿಂದಾಗಿ ನಾನು 3-4 ಲಕ್ಷ ರೂಪಾಯಿ ಸಾಲದಲ್ಲಿದ್ದೇನೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ನನಗೆ ಅವಳ ಪರಿಚಯ ಆಯಿತು. ಆಕೆ ನನ್ನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಆದರೆ ಇದಕ್ಕೆ ಕಾರಣ ನನಗೆ ತಿಳಿದಿಲ್ಲ. ನಂತರ ಆಕೆ ನನಗೆ ಕರೆ ಮಾಡಿ ಭೇಟಿಯಾಗಬೇಕೆಂದು ಹೇಳುತ್ತಿದ್ದಳು’ ಎಂದು ತೀರ್ಥಾನಂದ್ ವಿಡಿಯೋದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಇನ್ನೂ ಮುಗಿಯಲಿಲ್ಲ ಮುನಿಸು; ಕಪಿಲ್ ಶರ್ಮಾ ಶೋಗೆ ಸುನೀಲ್ ಗ್ರೋವರ್ ಬರೋದು ಅನುಮಾನ 

ಇದಾದ ಬಳಿಕ ಅವರು ವಿಷದ ಬಾಟಲಿ ತೆಗೆದುಕೊಂಡು ಕುಡಿದ್ದಾರೆ. ಆ ಬಳಿಕ ಅವರ ಗೆಳೆಯ ಮನೆಗೆ ಬಂದಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಅಂದಹಾಗೆ, ಈ ರೀತಿ ಅವರು ಆತ್ಮಹತ್ಯೆಗೆ ಪ್ರಯತ್ನಿಸಿರೋದು ಇದೇ ಮೊದಲೇನು ಅಲ್ಲ. 2021ರ ಡಿಸೆಂಬರ್​ನಲ್ಲಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆಯೂ ಅವರು ಲೈವ್ ಬಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ