AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯಿಂದ ಮೋಸ; ಫೇಸ್​ಬುಕ್​​ನಲ್ಲಿ ಲೈವ್​ ಬಂದು ವಿಷ ಕುಡಿದ ಕಾಮಿಡಿಯನ್

ತೀರ್ಥಾನಂದ್ ಅವರು ಫೇಸ್​ಬುಕ್ ಲೈವ್ ಬಂದಿದ್ದಾರೆ. ಈ ವೇಳೆ ಅವರು ಲಿವ್​-ಇನ್ ರಿಲೇಷನ್​ಶಿಪ್ ಬಗ್ಗೆ, ಬ್ಲಾಕ್​ಮೇಲ್ ಮಾಡುತ್ತಿರುವ ಬಗ್ಗೆ, ಹಣ ಕಿತ್ತಿರುವ ಬಗ್ಗೆ ಅವರು ಆರೋಪಿಸಿದ್ದಾರೆ.

ಮಹಿಳೆಯಿಂದ ಮೋಸ; ಫೇಸ್​ಬುಕ್​​ನಲ್ಲಿ ಲೈವ್​ ಬಂದು ವಿಷ ಕುಡಿದ ಕಾಮಿಡಿಯನ್
ಕಪಿಲ್ ಶರ್ಮಾ ಜೊತೆ ತೀರ್ಥಾನಂದ್
ರಾಜೇಶ್ ದುಗ್ಗುಮನೆ
|

Updated on: Jun 14, 2023 | 10:40 AM

Share

ನಟ ಹಾಗೂ ಕಾಮಿಡಿಯನ್ ತೀರ್ಥಾನಂದ್​ ರಾವ್ (Tirthanand Rao) ಅವರು ಕಪಿಲ್ ಶರ್ಮಾ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ. ‘ಕಾಮಿಡಿ ಸರ್ಕಸ್​​ ಕೆ ಆಜೂಬೆ’ ಶೋನಲ್ಲಿ ಕಪಿಲ್ ಶರ್ಮಾ (Kapil Sharma) ಜೊತೆ ಅವರು ಕೆಲಸ ಮಾಡಿದ್ದರು. ಈಗ ಅವರು ಫೇಸ್​ಬುಕ್ ಲೈವ್ ಬಂದು ವಿಷ ಕುಡಿದಿದ್ದಾರೆ. ‘ನನ್ನ ಸಾವಿಗೆ ಆ ಮಹಿಳೆಯೇ ಕಾರಣ’ ಎಂದು ಕಿಡಿಕಾರಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ. ತೀರ್ಥಾನಂದ್ ಅವರ ಆರೋಗ್ಯದ ಬಗ್ಗೆ ಎಲ್ಲರಿಗೂ ಆತಂಕ ಮೂಡಿದೆ.

ತೀರ್ಥಾನಂದ್ ಅವರು ಫೇಸ್​ಬುಕ್ ಲೈವ್ ಬಂದಿದ್ದಾರೆ. ಈ ವೇಳೆ ಅವರು ಲಿವ್​-ಇನ್ ರಿಲೇಷನ್​ಶಿಪ್ ಬಗ್ಗೆ, ಬ್ಲಾಕ್​ಮೇಲ್ ಮಾಡುತ್ತಿರುವ ಬಗ್ಗೆ, ಹಣ ಕಿತ್ತಿರುವ ಬಗ್ಗೆ ಅವರು ಆರೋಪಿಸಿದ್ದಾರೆ. ಈ ಸಂಬಂಧ ದೂರು ದಾಖಲಾಗಿದ್ದು, ಆ ಯುವತಿ ಯಾರು ಎಂಬಿತ್ಯಾದಿ ವಿಚಾರ ಇನ್ನಷ್ಟೇ ಬಯಲಿಗೆ ಬರಬೇಕಿದೆ.

‘ಮಹಿಳೆಯಿಂದಾಗಿ ನಾನು 3-4 ಲಕ್ಷ ರೂಪಾಯಿ ಸಾಲದಲ್ಲಿದ್ದೇನೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ನನಗೆ ಅವಳ ಪರಿಚಯ ಆಯಿತು. ಆಕೆ ನನ್ನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಆದರೆ ಇದಕ್ಕೆ ಕಾರಣ ನನಗೆ ತಿಳಿದಿಲ್ಲ. ನಂತರ ಆಕೆ ನನಗೆ ಕರೆ ಮಾಡಿ ಭೇಟಿಯಾಗಬೇಕೆಂದು ಹೇಳುತ್ತಿದ್ದಳು’ ಎಂದು ತೀರ್ಥಾನಂದ್ ವಿಡಿಯೋದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಇನ್ನೂ ಮುಗಿಯಲಿಲ್ಲ ಮುನಿಸು; ಕಪಿಲ್ ಶರ್ಮಾ ಶೋಗೆ ಸುನೀಲ್ ಗ್ರೋವರ್ ಬರೋದು ಅನುಮಾನ 

ಇದಾದ ಬಳಿಕ ಅವರು ವಿಷದ ಬಾಟಲಿ ತೆಗೆದುಕೊಂಡು ಕುಡಿದ್ದಾರೆ. ಆ ಬಳಿಕ ಅವರ ಗೆಳೆಯ ಮನೆಗೆ ಬಂದಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಅಂದಹಾಗೆ, ಈ ರೀತಿ ಅವರು ಆತ್ಮಹತ್ಯೆಗೆ ಪ್ರಯತ್ನಿಸಿರೋದು ಇದೇ ಮೊದಲೇನು ಅಲ್ಲ. 2021ರ ಡಿಸೆಂಬರ್​ನಲ್ಲಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆಯೂ ಅವರು ಲೈವ್ ಬಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ