AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಪ್ರೊಡಕ್ಷನ್​ ಹೌಸ್​​ನಲ್ಲಿ ನಿನಗೆ ಅವಕಾಶ ಇಲ್ಲ; ಸ್ಟಾರ್​ ನಟನನ್ನೇ ಹೊರ ದಬ್ಬಿದ ಕರಣ್​ ಜೋಹರ್

ಕಾರ್ತಿಕ್​ ಆರಂಭದಲ್ಲಿ ಡೇಟ್ಸ್​ ಸಮಸ್ಯೆ ಎಂದು ಶೂಟಿಂಗ್​ಗೆ ಬರುತ್ತಿರಲಿಲ್ಲ. ನಂತರ ಕತೆ ವಿಚಾರಕ್ಕೆ ನಿರ್ಮಾಪಕರಿಗೂ ಹಾಗೂ ಕಾರ್ತಿಕ್​ಗೆ ಭಿನ್ನಾಭಿಪ್ರಾಯಗಳು ಮೂಡಲು ಆರಂಭವಾದವು.

ನಮ್ಮ ಪ್ರೊಡಕ್ಷನ್​ ಹೌಸ್​​ನಲ್ಲಿ ನಿನಗೆ ಅವಕಾಶ ಇಲ್ಲ; ಸ್ಟಾರ್​ ನಟನನ್ನೇ ಹೊರ ದಬ್ಬಿದ ಕರಣ್​ ಜೋಹರ್
ಕರಣ್​ ಜೋಹರ್
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on:Apr 16, 2021 | 5:28 PM

ನಿರ್ಮಾಪಕರು ಹಾಗೂ ನಟರ ನಡುವೆ ಮನಸ್ತಾಪಗಳು ಮೂಡೋದು ಸಹಜ. ಕೆಲವೊಂದು ಜಗಳಗಳು ಇಂಡಸ್ಟ್ರಿಯಲ್ಲೇ ಹುಟ್ಟಿ, ಅಲ್ಲಿಯೇ ಕಾಣೆಯಾಗುತ್ತವೆ. ಆದರೆ, ಕೆಲವು ಮನಸ್ತಾಪಗಳು ಮಾತ್ರ ಬಟಾಬಯಲಾಗುತ್ತವೆ. ಈಗ ಬಾಲಿವುಡ್​ನ ಖ್ಯಾತ ನಿರ್ಮಾಪಕ ಕರಣ್​ ಜೋಹರ್​ ಹಾಗೂ ಬಾಲಿವುಡ್​ನ ಖ್ಯಾತ ನಟನ ನಡುವೆ ಸಂಘರ್ಷ ಏರ್ಪಟ್ಟಿದೆ. ಇದು ಮಿತಿಮೀರಿದ್ದು, ಇನ್ನೆಂದಿಗೂ ನಮ್ಮ ಪ್ರೊಡಕ್ಷನ್​ನಲ್ಲಿ ಸ್ಥಾನವಿಲ್ಲ ಎನ್ನುವ ಖಡಕ್​ ಸಂದೇಶವನ್ನು ಕರಣ್​ ರವಾನಿಸಿದ್ದಾರೆ. ಈ ಜಗಳ ಏರ್ಪಟ್ಟಿದ್ದು ಕರಣ್​ ಜೋಹರ್​ ಹಾಗೂ ಕಾರ್ತಿಕ್​ ಆರ್ಯನ್​ ನಡುವೆ. ದೋಸ್ತಾನ 2 ಸಿನಿಮಾಗೆ ಕಾರ್ತಿಕ್​ ಹೀರೋ ಆಗಿದ್ದರು. 2019ರಲ್ಲೇ ಈ ಬಗ್ಗೆ ಘೋಷಣೆ ಆಗಿತ್ತು. ಆದರೆ, ಕೊರೊನಾ ವೈರಸ್​ ಕಾಣಿಸಿಕೊಂಡಿದ್ದರಿಂದ ಸಿನಿಮಾ ಕೆಲಸಗಳು ಮುಂದೂಡಲ್ಪಟ್ಟಿದ್ದವು. ನಂತರ ಕಾರ್ತಿಕ್​ ಸಿನಿಮಾದಿಂದಲೇ ಹೊರ ಬಂದಿದ್ದರು. ಈಗ ಕೇಳಿ ಬರುತ್ತಿರುವ ಮಾಹಿತಿ ಏನೆಂದರೆ, ಕಾರ್ತಿಕ್​ ಆರ್ಯನ್​ ಜತೆ ಕರಣ್​ ಒಡೆತನದ ಧರ್ಮ ಪ್ರೊಡಕ್ಷನ್​ ಇನ್ನೆಂದೂ ಕೆಲಸ ಮಾಡದಿರಲು ನಿರ್ಧರಿಸಿದೆ.

ಕಾರ್ತಿಕ್​ ಆರಂಭದಲ್ಲಿ ಡೇಟ್ಸ್​ ಸಮಸ್ಯೆ ಎಂದು ಶೂಟಿಂಗ್​ಗೆ ಬರುತ್ತಿರಲಿಲ್ಲ. ನಂತರ ಕತೆ ವಿಚಾರಕ್ಕೆ ನಿರ್ಮಾಪಕರಿಗೂ ಹಾಗೂ ಕಾರ್ತಿಕ್​ಗೆ ಭಿನ್ನಾಭಿಪ್ರಾಯಗಳು ಮೂಡಲು ಆರಂಭವಾದವು. ಕಾರ್ತಿಕ್​ ಮೊದಲು ರಾಮ್​ ಮಾಧ್ವಾನಿ ಅವರ ಧಮಾಕಾ ಸಿನಿಮಾದ ಕೆಲಸಗಳನ್ನು ಪೂರ್ಣಗೊಳಿಸಲು ಹೆಚ್ಚು ಆಸಕ್ತಿ ತೋರಿದ್ದರು. ಇದು ಕರಣ್ ಕೋಪಕ್ಕೆ ಕಾರಣವಾಗಿದೆ. ಕೊನೆಗೆ ಕಾರ್ತಿಕ್​ ಅವರನ್ನು ಸಿನಿಮಾದಿಂದಲೇ ಕೈ ಬಿಡಲು ನಿರ್ಧರಿಸಲಾಗಿದೆ.

ಕಾರ್ತಿಕ್​ ಆರ್ಯನ್​

ಈ ವಿಚಾರದ ಬಗ್ಗೆ ಕೆಲವು ವಾರಗಳ ಕಾಲ ಕಾರ್ತಿಕ್​ ಹಾಗೂ ಕರಣ್​ ನಡುವೆ ಮುಸುಕಿನ ಗುದ್ದಾಟ ನಡೆದೇ ಇತ್ತು. ಕೊನೆಗೆ ಇಬ್ಬರ ನಡುವಿನ ಗೆಳೆತನ ಸಂಪೂರ್ಣವಾಗಿ ಮುರಿದು ಬಿದ್ದಿದೆ ಎನ್ನಲಾಗಿದೆ. ಈ ವಿಚಾರ ಸದ್ಯ ಬಾಲಿವುಡ್​ ಅಂಗಳದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ.

ಇದನ್ನೂ ಓದಿ: ಸೋತು ಸುಣ್ಣವಾಗಿರುವ ಶಾರುಖ್​ ಖಾನ್​ಗೆ ಈಗ ಸಿಗುತ್ತಿರುವ ಸಂಭಾವನೆ ಎಷ್ಟು?

ಕ್ಷಮಿಸಿ, ನಾನು ಸಂಭಾವನೆ ಪಡೆಯಲ್ಲ; ಶಾರುಖ್​ಗಾಗಿ ಸಲ್ಮಾನ್​ ಹೀಗೊಂದು ತ್ಯಾಗ!

Published On - 4:54 pm, Fri, 16 April 21

ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ