AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಪ್ರೊಡಕ್ಷನ್​ ಹೌಸ್​​ನಲ್ಲಿ ನಿನಗೆ ಅವಕಾಶ ಇಲ್ಲ; ಸ್ಟಾರ್​ ನಟನನ್ನೇ ಹೊರ ದಬ್ಬಿದ ಕರಣ್​ ಜೋಹರ್

ಕಾರ್ತಿಕ್​ ಆರಂಭದಲ್ಲಿ ಡೇಟ್ಸ್​ ಸಮಸ್ಯೆ ಎಂದು ಶೂಟಿಂಗ್​ಗೆ ಬರುತ್ತಿರಲಿಲ್ಲ. ನಂತರ ಕತೆ ವಿಚಾರಕ್ಕೆ ನಿರ್ಮಾಪಕರಿಗೂ ಹಾಗೂ ಕಾರ್ತಿಕ್​ಗೆ ಭಿನ್ನಾಭಿಪ್ರಾಯಗಳು ಮೂಡಲು ಆರಂಭವಾದವು.

ನಮ್ಮ ಪ್ರೊಡಕ್ಷನ್​ ಹೌಸ್​​ನಲ್ಲಿ ನಿನಗೆ ಅವಕಾಶ ಇಲ್ಲ; ಸ್ಟಾರ್​ ನಟನನ್ನೇ ಹೊರ ದಬ್ಬಿದ ಕರಣ್​ ಜೋಹರ್
ಕರಣ್​ ಜೋಹರ್
ರಾಜೇಶ್ ದುಗ್ಗುಮನೆ
| Edited By: |

Updated on:Apr 16, 2021 | 5:28 PM

Share

ನಿರ್ಮಾಪಕರು ಹಾಗೂ ನಟರ ನಡುವೆ ಮನಸ್ತಾಪಗಳು ಮೂಡೋದು ಸಹಜ. ಕೆಲವೊಂದು ಜಗಳಗಳು ಇಂಡಸ್ಟ್ರಿಯಲ್ಲೇ ಹುಟ್ಟಿ, ಅಲ್ಲಿಯೇ ಕಾಣೆಯಾಗುತ್ತವೆ. ಆದರೆ, ಕೆಲವು ಮನಸ್ತಾಪಗಳು ಮಾತ್ರ ಬಟಾಬಯಲಾಗುತ್ತವೆ. ಈಗ ಬಾಲಿವುಡ್​ನ ಖ್ಯಾತ ನಿರ್ಮಾಪಕ ಕರಣ್​ ಜೋಹರ್​ ಹಾಗೂ ಬಾಲಿವುಡ್​ನ ಖ್ಯಾತ ನಟನ ನಡುವೆ ಸಂಘರ್ಷ ಏರ್ಪಟ್ಟಿದೆ. ಇದು ಮಿತಿಮೀರಿದ್ದು, ಇನ್ನೆಂದಿಗೂ ನಮ್ಮ ಪ್ರೊಡಕ್ಷನ್​ನಲ್ಲಿ ಸ್ಥಾನವಿಲ್ಲ ಎನ್ನುವ ಖಡಕ್​ ಸಂದೇಶವನ್ನು ಕರಣ್​ ರವಾನಿಸಿದ್ದಾರೆ. ಈ ಜಗಳ ಏರ್ಪಟ್ಟಿದ್ದು ಕರಣ್​ ಜೋಹರ್​ ಹಾಗೂ ಕಾರ್ತಿಕ್​ ಆರ್ಯನ್​ ನಡುವೆ. ದೋಸ್ತಾನ 2 ಸಿನಿಮಾಗೆ ಕಾರ್ತಿಕ್​ ಹೀರೋ ಆಗಿದ್ದರು. 2019ರಲ್ಲೇ ಈ ಬಗ್ಗೆ ಘೋಷಣೆ ಆಗಿತ್ತು. ಆದರೆ, ಕೊರೊನಾ ವೈರಸ್​ ಕಾಣಿಸಿಕೊಂಡಿದ್ದರಿಂದ ಸಿನಿಮಾ ಕೆಲಸಗಳು ಮುಂದೂಡಲ್ಪಟ್ಟಿದ್ದವು. ನಂತರ ಕಾರ್ತಿಕ್​ ಸಿನಿಮಾದಿಂದಲೇ ಹೊರ ಬಂದಿದ್ದರು. ಈಗ ಕೇಳಿ ಬರುತ್ತಿರುವ ಮಾಹಿತಿ ಏನೆಂದರೆ, ಕಾರ್ತಿಕ್​ ಆರ್ಯನ್​ ಜತೆ ಕರಣ್​ ಒಡೆತನದ ಧರ್ಮ ಪ್ರೊಡಕ್ಷನ್​ ಇನ್ನೆಂದೂ ಕೆಲಸ ಮಾಡದಿರಲು ನಿರ್ಧರಿಸಿದೆ.

ಕಾರ್ತಿಕ್​ ಆರಂಭದಲ್ಲಿ ಡೇಟ್ಸ್​ ಸಮಸ್ಯೆ ಎಂದು ಶೂಟಿಂಗ್​ಗೆ ಬರುತ್ತಿರಲಿಲ್ಲ. ನಂತರ ಕತೆ ವಿಚಾರಕ್ಕೆ ನಿರ್ಮಾಪಕರಿಗೂ ಹಾಗೂ ಕಾರ್ತಿಕ್​ಗೆ ಭಿನ್ನಾಭಿಪ್ರಾಯಗಳು ಮೂಡಲು ಆರಂಭವಾದವು. ಕಾರ್ತಿಕ್​ ಮೊದಲು ರಾಮ್​ ಮಾಧ್ವಾನಿ ಅವರ ಧಮಾಕಾ ಸಿನಿಮಾದ ಕೆಲಸಗಳನ್ನು ಪೂರ್ಣಗೊಳಿಸಲು ಹೆಚ್ಚು ಆಸಕ್ತಿ ತೋರಿದ್ದರು. ಇದು ಕರಣ್ ಕೋಪಕ್ಕೆ ಕಾರಣವಾಗಿದೆ. ಕೊನೆಗೆ ಕಾರ್ತಿಕ್​ ಅವರನ್ನು ಸಿನಿಮಾದಿಂದಲೇ ಕೈ ಬಿಡಲು ನಿರ್ಧರಿಸಲಾಗಿದೆ.

ಕಾರ್ತಿಕ್​ ಆರ್ಯನ್​

ಈ ವಿಚಾರದ ಬಗ್ಗೆ ಕೆಲವು ವಾರಗಳ ಕಾಲ ಕಾರ್ತಿಕ್​ ಹಾಗೂ ಕರಣ್​ ನಡುವೆ ಮುಸುಕಿನ ಗುದ್ದಾಟ ನಡೆದೇ ಇತ್ತು. ಕೊನೆಗೆ ಇಬ್ಬರ ನಡುವಿನ ಗೆಳೆತನ ಸಂಪೂರ್ಣವಾಗಿ ಮುರಿದು ಬಿದ್ದಿದೆ ಎನ್ನಲಾಗಿದೆ. ಈ ವಿಚಾರ ಸದ್ಯ ಬಾಲಿವುಡ್​ ಅಂಗಳದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ.

ಇದನ್ನೂ ಓದಿ: ಸೋತು ಸುಣ್ಣವಾಗಿರುವ ಶಾರುಖ್​ ಖಾನ್​ಗೆ ಈಗ ಸಿಗುತ್ತಿರುವ ಸಂಭಾವನೆ ಎಷ್ಟು?

ಕ್ಷಮಿಸಿ, ನಾನು ಸಂಭಾವನೆ ಪಡೆಯಲ್ಲ; ಶಾರುಖ್​ಗಾಗಿ ಸಲ್ಮಾನ್​ ಹೀಗೊಂದು ತ್ಯಾಗ!

Published On - 4:54 pm, Fri, 16 April 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ