AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೊಡ್ಡ ಬಜೆಟ್​ ಸಿನಿಮಾಗಳಿಂದ ಲಾಭ ಇಲ್ಲ’; ನಿರ್ಮಾಣ ಸಂಸ್ಥೆ ಮಾರಿದ್ದಕ್ಕೆ ಕಾರಣ ತಿಳಿಸಿದ ಕರಣ್ ಜೋಹರ್

ಕರಣ್ ಜೋಹರ್ ಅವರು ‘ಧರ್ಮ ಪ್ರೊಡಕ್ಷನ್ಸ್’ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಈ ಸಂಸ್ಥೆಯ ಶೇ.50 ಷೇರನ್ನು ಸೇರಂ ಇನ್​ಸ್ಟಿಟ್ಯೂಟ್​ನ ಮುಖ್ಯಸ್ಥ ಅದಾರ್ ಪೂನಾವಾಲಾಗೆ ಮಾರಿದ್ದರು. ಇದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.

‘ದೊಡ್ಡ ಬಜೆಟ್​ ಸಿನಿಮಾಗಳಿಂದ ಲಾಭ ಇಲ್ಲ’; ನಿರ್ಮಾಣ ಸಂಸ್ಥೆ ಮಾರಿದ್ದಕ್ಕೆ ಕಾರಣ ತಿಳಿಸಿದ ಕರಣ್ ಜೋಹರ್
ಕರಣ್ ಜೋಹರ್
ರಾಜೇಶ್ ದುಗ್ಗುಮನೆ
|

Updated on: Nov 16, 2024 | 11:40 AM

Share

ಕರಣ್ ಜೋಹರ್ ಅವರು ತಮ್ಮ ಒಡೆತನದ ಧರ್ಮ ಪ್ರೊಡಕ್ಷನ್ ನಿರ್ಮಾಣ ಸಂಸ್ಥೆಯ ಶೇ.50 ಷೇರನ್ನು ಸೇರಂ ಇನ್​ಸ್ಟಿಟ್ಯೂಟ್​ನ ಮುಖ್ಯಸ್ಥ ಅದಾರ್ ಪೂನಾವಾಲಾಗೆ ಮಾರಿದ್ದರು. ಇದು ಅನೇಕರಿಗೆ ಶಾಕಿಂಗ್ ಎನಿಸಿತ್ತು. ಕರಣ್ ನಿರಂತರವಾಗಿ ನಷ್ಟ ಅನುಭವಿಸಿದ್ದರಿಂದ ಈ ರೀತಿ ಮಾಡಿದರು ಎಂದು ಹೇಳಲಾಗಿತ್ತು. ಈಗ ಈ ನಿರ್ಧಾರದ ಹಿಂದಿನ ಕಾರಣವನ್ನು ಅವರು ಬಿಚ್ಚಿಟ್ಟಿದ್ದಾರೆ.

‘ದೊಡ್ಡ ಸಿನಿಮಾ ನಿರ್ಮಾಣ ಮಾಡುವಾಗ ನಾವು ದೊಡ್ಡ ಸ್ಟುಡಿಯೋಗಳ ಜೊತೆ ಕೈ ಜೋಡಿಸಬೇಕಾಗುತ್ತದೆ. ನಾವು ದೊಡ್ಡ ಹಿಟ್ ಕೊಟ್ಟರೂ ಲಾಭವನ್ನು ಹಂಚಿಕೊಳ್ಳಬೇಕಾಗುತ್ತದೆ. ನಾವು ಬ್ರಹ್ಮಾಸ್ತ್ರ ಸಿನಿಮಾ ಮಾಡಿದೆವು. ಇದಕ್ಕೆ ಬೇರೆ ಸ್ಟುಡಿಯೋದ ಬೆಂಬಲ ಬೇಕಾಯಿತು. ಈ ರೀತಿಯ ಸಿನಿಮಾಗೆ 250-300 ಕೋಟಿ ರೂಪಾಯಿ ಹಾಕಬೇಕಾಗುತ್ತದೆ. ಒಬ್ಬಂಟಿಯಾಗಿ ಅಷ್ಟು ಹಣ ಹಾಕಲು ಸಾಧ್ಯವಿಲ್ಲ’ ಎಂದಿದ್ದಾರೆ ಕರಣ್.

ಸಣ್ಣ ಬಜೆಟ್​ನ ಸಿನಿಮಾಗಳನ್ನು ಮಾಡಿ ಅದು ಯಶಸ್ಸು ಕಂಡರೆ ಬರೋ ಲಾಭ ಹೆಚ್ಚು. ಮುಂದಿನ ದಿನಗಳಲ್ಲಿ ಕರಣ್ ಜೋಹರ್ ಈ ರೀತಿಯ ಸಿನಿಮಾ ನಿರ್ಮಾಣ ಮಾಡಲು ಬಯಸಿದ್ದಾರೆ. ‘ಮಧ್ಯಮ ಬಜೆಟ್​ನ ಸಿನಿಮಾ ಮಾಡಿದರೆ ಲಾಭ ಜಾಸ್ತಿ ಸಿಗುತ್ತದೆ. ನಾವಾಗೇ ಸಂಪೂರ್ಣವಾಗಿ ಹಣ ಹಾಕಬಹುದು. ಅದು ನಮಗೆ ನಿಜವಾಗಿಯೂ ಊಟ ಕೊಡುತ್ತದೆ. ಈ ರೀತಿಯ ಸಿನಿಮಾಗಳಿಂದಲೇ ಹಣ ಬರೋದು’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ನಾವು ಸುಳ್ಳುಬುರುಕರು’; ಬಾಲಿವುಡ್​ನ ಕರಾಳ ಮುಖ ಬಿಚ್ಚಿಟ್ಟ ಕರಣ್ ಜೋಹರ್

ದೊಡ್ಡ ಬಜೆಟ್ ಸಿನಿಮಾ ಮಾಡಿದರೆ ಹೆಚ್ಚು ಲಾಭ ಸಿಗುತ್ತದೆ ಎಂಬುದು ಅನೇಕರ ನಂಬಿಕೆ. ಆದರೆ, ಆ ನಂಬಿಕೆ ಸುಳ್ಳು ಎಂದಿದ್ದಾರೆ ಕರಣ್ ಹೋಹರ್. ಕರಣ್ ಜೋಹರ್ ನಿರ್ಮಾಣ ಮಾಡಿದ ‘ಬ್ರಹ್ಮಾಸ್ತ್ರ’ 420 ಕೋಟಿ ರೂಪಾಯಿ ಗಳಿಕೆ ಮಾಡಿತ್ತು ನಿಜ. ಆದರೆ, ಚಿತ್ರದ ಬಜೆಟ್ 400 ಕೋಟಿ ರೂಪಾಯಿ ದಾಟಿತ್ತು. ಹೀಗಾಗಿ, ಈ ಸಿನಿಮಾದಿಂದ ಕರಣ್​ಗೆ ಹೆಚ್ಚಿನ ಲಾಭ ಆಗಿಲ್ಲ. ಈ ಕಾರಣದಿಂದಲೇ 50-80 ಕೋಟಿ ರೂಪಾಯಿ ಬಜೆಟ್​ನ ಸಿನಿಮಾ ಮಾಡುವ ಇಂಗಿತವನ್ನು ಅವರು ಹೊರಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್