AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಹ್ಲಿ ಮದುವೆ ನಂತರ ಅನುಷ್ಕಾ ಶರ್ಮಾಗೆ ಕರಣ್​ ಜೋಹರ್​ ಬಳಸಿದ ಆ ಒಂದು ಶಬ್ದ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು

Karan Johar: ಅದು 2018ರ ಸಮಯ. ಅನುಷ್ಕಾ ಶರ್ಮಾ ಭಾರತೀಯ ಕ್ರಿಕೆಟ್​ ತಂಡದ ನಾಯಕ ವಿರಾಟ್​ ಕೊಹ್ಲಿಯನ್ನು ಮದುವೆಯಾಗಿ ಕೆಲವೇ ತಿಂಗಳು ಕಳೆದಿದ್ದವು. ಹಿಂದಿ ರಿಯಾಲಿಟಿ ಶೋ ಒಂದಕ್ಕೆ ‘ಜೀರೋ’ ಚಿತ್ರದ ಪ್ರಮೋಷನ್​ಗೆ ಕತ್ರಿನಾ ಕೈಫ್​ ಹಾಗೂ ಅನುಷ್ಕಾ ಬಂದಿದ್ದರು.

ಕೊಹ್ಲಿ ಮದುವೆ ನಂತರ ಅನುಷ್ಕಾ ಶರ್ಮಾಗೆ ಕರಣ್​ ಜೋಹರ್​ ಬಳಸಿದ ಆ ಒಂದು ಶಬ್ದ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು
ಅನುಷ್ಕಾ-ವಿರಾಟ್​ ದಂಪತಿ ಹಾಗೂ ಕರಣ್​
ರಾಜೇಶ್ ದುಗ್ಗುಮನೆ
|

Updated on: May 24, 2021 | 9:12 PM

Share

ಕರಣ್​ ಜೋಹರ್​ ಬಾಲಿವುಡ್​ನ ಖ್ಯಾತ ನಿರ್ಮಾಪಕ. ಸಾಕಷ್ಟು ಬಿಗ್​ ಬಜೆಟ್​ ಸಿನಿಮಾಗಳನ್ನು ನಿರ್ಮಾಣ ಮಾಡಿದ ಖ್ಯಾತಿ ಅವರಿಗಿದೆ. ಅಷ್ಟೇ ಅಲ್ಲ, ಅವರು ಸಾಕಷ್ಟು ಸ್ಟಾರ್​ಗಳ ಮಕ್ಕಳನ್ನು ಬಾಲಿವುಡ್​ಗೆ ಪರಿಚಯ ಮಾಡಿದ್ದಾರೆ. ಇನ್ನು, ಕರಣ್​ ವಿವಾದದ ಮೂಲಕವೂ ಆಗಾಗ ಸುದ್ದಿಯಾಗುತ್ತಾರೆ. ಅವರು ನಟಿ ಅನುಷ್ಕಾ ಶರ್ಮಾಗೆ ಬಳಸಿದ ಒಂದು ಶಬ್ದ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.

ಅದು 2018ರ ಸಮಯ. ಅನುಷ್ಕಾ ಶರ್ಮಾ ಭಾರತೀಯ ಕ್ರಿಕೆಟ್​ ತಂಡದ ನಾಯಕ ವಿರಾಟ್​ ಕೊಹ್ಲಿಯನ್ನು ಮದುವೆಯಾಗಿ ಕೆಲವೇ ತಿಂಗಳು ಕಳೆದಿದ್ದವು. ಹಿಂದಿ ರಿಯಾಲಿಟಿ ಶೋ ಒಂದಕ್ಕೆ ‘ಜೀರೋ’ ಚಿತ್ರದ ಪ್ರಮೋಷನ್​ಗೆ ಕತ್ರಿನಾ ಕೈಫ್​ ಹಾಗೂ ಅನುಷ್ಕಾ ಬಂದಿದ್ದರು. ಈ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಕರಣ್​.

ಈ ವೇಳೆ ಗೇಮ್​ ಒಂದನ್ನು ಆಡಿಸಲಾಗಿತ್ತು. ಈ ಆಟದಲ್ಲಿ ಕರಣ್​, ‘ಕೋಯಿ ಮಿಲ್​ ಗಯಾ’ ಚಿತ್ರದ ಸಾಂಗ್​ ವಿಚಾರವಾಗಿ ಪ್ರಶ್ನೆಯೊಂದನ್ನು ಕೇಳಿದ್ದರು. ಈ ಪ್ರಶ್ನೆಗೆ ಕತ್ರಿನಾ ಕೈಫ್​ ಸರಿಯಾಗಿ ಉತ್ತರ ನೀಡಿದರು.

ಕರಣ್​ ಕೇಳಿದ ಮುಂದಿನ ಪ್ರಶ್ನೆಗೆ ಅನುಷ್ಕಾ ತಕ್ಷಣಕ್ಕೆ ಉತ್ತರ ನೀಡಿದರು. ಆಗ ಕತ್ರಿನಾ, ‘ನನಗೆ ಅವಕಾಶವನ್ನೇ ನೀಡಿಲ್ಲ’ ಎಂದು ದೂರಿದ್ದರು. ‘ನಾನು ಅವಕಾಶವನ್ನು ಬಾಚಿಕೊಂಡೆ’ ಎಂದು ಹೇಳುತ್ತಲೇ ಫೋರ್​ ಎಂದಿದ್ದರು ಅನುಷ್ಕಾ. ಆಗ ಕರಣ್​, ‘ನಮ್ಮ ಹುಡುಗಿ ತುಂಬಾನೇ ದೊಡ್ಡವಳಾಗಿದ್ದಾರೆ. ಕ್ರಿಕೆಟ್​ ಜೋಕ್​ಗಳನ್ನು ಹೇಳುತ್ತಿದ್ದಾರೆ. ಅನುಷ್ಕಾ ದೇಶದ ಸೊಸೆ’ ಎಂದು ಹೇಳಿದ್ದರು.

ವಿರಾಟ್​ ಟೀಂ ಇಂಡಿಯಾದ ನಾಯಕ. ಹೀಗಾಗಿ, ಅನುಷ್ಕಾಗೆ ದೇಶದ ಸೊಸೆ ಎಂಬಪದವನ್ನು  ಕರಣ್​ ಬಳಸಿದ್ದರು. ಇದನ್ನು ಸಾಕಷ್ಟು ಜನರು ಪ್ರಶ್ನೆ ಮಾಡಿದ್ದರು.

ಅನುಷ್ಕಾ ಹಾಗೂ ವಿರಾಟ್​ 2017ರ ಡಿಸೆಂಬರ್​ನಲ್ಲಿ ಇಟಲಿಗೆ ತೆರಳಿ ಮದುವೆ ಆದರು. ಹಲವು ವರ್ಷಗಳಿಂದ ಇಬ್ಬರೂ ಪ್ರೀತಿಸುತ್ತಿದ್ದರು. ಈ ವರ್ಷ ಜನವರಿಯಲ್ಲಿ ವಮಿಕಾ ಹೆಸರಿನ ಮಗು ಅವರಿಗೆ ಜನಿಸಿತು. ಕೊವಿಡ್​ ಸಂಕಷ್ಟದ ಸಮಯದಲ್ಲಿ ಅನುಷ್ಕಾ ಹಾಗೂ ವಿರಾಟ್​ ಸಹಾಯಕ್ಕೆ ನಿಂತಿದ್ದಾರೆ. ಕೊವಿಡ್​-19 ರಿಲೀಫ್​ ಫಂಡ್​ಗೆ 2 ಕೋಟಿ ನೀಡಿದ್ದರು. ಅಲ್ಲದೆ, ಜನರಿಂದಲೂ ಹಣ ಪಡೆದು ಅಗತ್ಯ ಇರುವವರಿಗೆ ನೀಡಿದ್ದರು.

ಇದನ್ನೂ ಓದಿ: ಕಾರ್ತಿಕ್​ ಆರ್ಯನ್​ಗೆ ಗೇಟ್​ ಪಾಸ್​ ಕೊಟ್ಟ ಬೆನ್ನಲ್ಲೇ ಕರಣ್​​ ಜೋಹರ್​ಗೆ ಬಿಗ್​ ಶಾಕ್​

ಸುಶಾಂತ್ ರೀತಿ ಕಾರ್ತಿಕ್ ಆರ್ಯನ್​ಗೂ ಆತ್ಮಹತ್ಯೆ ಮಾಡಿಕೊಳ್ಳುವಂತೆ ಒತ್ತಾಯಿಸಬೇಡಿ; ಕರಣ್​​​ಗೆ ಕಂಗನಾ ಛೀಮಾರಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!