ಜೂ. ಎನ್​ಟಿಆರ್​ ಜತೆ ಕೈ ಜೋಡಿಸಿದ ಕರಣ್​ ಜೋಹರ್​; ‘ದೇವರ’ ದೊಡ್ಡ ಪ್ಲ್ಯಾನ್​

ಶೂಟಿಂಗ್​ ಮುಗಿಯುವುದಕ್ಕೂ ಮುನ್ನವೇ ‘ದೇವರ’ ಸಿನಿಮಾದ ಹೈಪ್​ ಹೆಚ್ಚಾಗಿದೆ. ಈ ಸಿನಿಮಾಗೆ ಕೊರಟಾಲ ಶಿವ ನಿರ್ದೇಶನ ಮಾಡುತ್ತಿದ್ದು, ಜೂನಿಯರ್​ ಎನ್​ಟಿಆರ್​ ಅವರು ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಉತ್ತರ ಭಾರತದಲ್ಲಿ ಈ ಸಿನಿಮಾದ ವಿತರಣೆ ಹಕ್ಕನ್ನು ಕರಣ್​ ಜೋಹರ್​ ಪಡೆದುಕೊಂಡಿದ್ದಾರೆ. ಈ ಡೀಲ್​ ಬಗ್ಗೆ ಅವರಿಗೆ ತುಂಬ ಖುಷಿ ಇದೆ.

ಜೂ. ಎನ್​ಟಿಆರ್​ ಜತೆ ಕೈ ಜೋಡಿಸಿದ ಕರಣ್​ ಜೋಹರ್​; ‘ದೇವರ’ ದೊಡ್ಡ ಪ್ಲ್ಯಾನ್​
‘ದೇವರ’ ಸಿನಿಮಾ ತಂಡದ ಜೊತೆ ಕರಣ್​ ಜೋಹರ್​
Follow us
|

Updated on: Apr 10, 2024 | 6:06 PM

ನಿರ್ಮಾಪಕ, ನಿರ್ದೇಶಕ ಕರಣ್​ ಜೋಹರ್​ (Karan Johar) ಅವರು ಕೇವಲ ಬಾಲಿವುಡ್​ನಲ್ಲಿ ಮಾತ್ರವಲ್ಲದೇ ದಕ್ಷಿಣ ಭಾರತದಲ್ಲೂ ಸ್ನೇಹಿತರನ್ನು ಹೊಂದಿದ್ದಾರೆ. ಈಗ ಅವರು ಜೂನಿಯರ್​ ಎನ್​ಟಿಆರ್​ (Jr NTR) ಜೊತೆ ಕೈ ಜೋಡಿಸಿದ್ದಾರೆ. ಅಂದರೆ, ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ’ (Devara) ಸಿನಿಮಾವನ್ನು ಉತ್ತರ ಭಾರತದಲ್ಲಿ ಬಿಡುಗಡೆ ಮಾಡಲು ಕರಣ್​ ಜೋಹರ್​ ಮುಂದೆ ಬಂದಿದ್ದಾರೆ. ಉತ್ತರ ಭಾರತದ ವಿತರಣೆ ಹಕ್ಕನ್ನು ಅವರು ಖರೀದಿಸಿದ್ದಾರೆ. ಆ ಮೂಲಕ ಅದ್ದೂರಿಯಾಗಿ ಸಿನಿಮಾ ರಿಲೀಸ್​ ಮಾಡಲು ಪ್ಲ್ಯಾನ್​ ರೂಪಿಸಲಾಗಿದೆ. ಈ ಸಿನಿಮಾ ಮೇಲೆ ಜೂನಿಯರ್​ ಎನ್​ಟಿಆರ್​ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ.

‘ಯುವಸುಧಾ ಆರ್ಟ್ಸ್​’ ಮತ್ತು ‘ಎನ್​ಟಿಆರ್​ ಆರ್ಟ್ಸ್​’ ಸಂಸ್ಥೆಗಳ ಮೂಲಕ ‘ದೇವರ’ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಸಂಸ್ಥೆಗಳ ಜೊತೆ ಕರಣ್​ ಜೋಹರ್​ ಅವರು ವ್ಯವಹಾರ ಕುದುರಿಸಿದ್ದಾರೆ. ಈ ವಿಚಾರವನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಖಚಿತಪಡಿಸಿದ್ದಾರೆ. ‘ಜೂನಿಯರ್​ ಎನ್​ಟಿಆರ್​ ಅಭಿನಯದ ‘ದೇವರ’ ಸಿನಿಮಾದ ಭಾಗವಾಗಲು ಸಂತೋಷವಾಗುತ್ತಿದೆ’ ಎಂದು ಅವರು ಪೋಸ್ಟ್​ ಮಾಡಿದ್ದಾರೆ.

View this post on Instagram

A post shared by Karan Johar (@karanjohar)

ಕರಣ್​ ಜೋಹರ್​ ಅವರು ತಮ್ಮ ಒಡೆತನದ ‘ಧರ್ಮ ಪ್ರೊಡಕ್ಷನ್ಸ್​’ ಮೂಲಕ ಈ ಮೊದಲು ‘ಬಾಹುಬಲಿ 1’ ಸಿನಿಮಾವನ್ನು ಉತ್ತರ ಭಾರತದಲ್ಲಿ ಬಿಡುಗಡೆ ಮಾಡಿದ್ದರು. ನಿರ್ಮಾಪಕನಾಗಿ ಹಾಗೂ ನಿರ್ದೇಶಕನಾಗಿ ಮಾತ್ರವಲ್ಲದೇ ವಿತರಕನಾಗಿಯೂ ಅವರು ಅನುಭವ ಹೊಂದಿದ್ದಾರೆ. ‘ದೇವರ’ ಸಿನಿಮಾದಿಂದ ಅವರು ದೊಡ್ಡ ಮಟ್ಟದ ಲಾಭ ಕಾಣುವ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ: ಅವಾರ್ಡ್ ಫಂಕ್ಷನ್​ನಲ್ಲಿ ಕರಣ್​ ಜೋಹರ್ ವಿರುದ್ಧ ಕೂಗಾಡಿದ ರಣಬೀರ್ ಕಪೂರ್; ವಿಡಿಯೋ ವೈರಲ್

ಕೊರಟಾಲ ಶಿವ ಅವರು ‘ದೇವರ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಟೀಸರ್​ ಗಮನ ಸೆಳೆದಿದೆ. ಜೂನಿಯರ್​ ಎನ್​ಟಿಆರ್​ ಅವರು ಈ ಸಿನಿಮಾ ಮೇಲೆ ಭಾರಿ ಭರವಸೆ ಇಟ್ಟುಕೊಂಡಿದ್ದಾರೆ. ಇತ್ತೀಚೆಗೆ ವೇದಿಕೆಯೊಂದರಲ್ಲಿ ಮಾತನಾಡಿದ್ದ ಅವರು, ‘ಇದು ನಿಮ್ಮೆಲ್ಲರಿಗೂ ಹೆಮ್ಮೆ ತರುವ ಸಿನಿಮಾ’ ಎಂದು ಅಭಿಮಾನಿಗಳಿಗೆ ಹೇಳಿದ್ದರು. ಈ ಎಲ್ಲ ಕಾರಣಗಳಿಂದಾಗಿ ‘ದೇವರ’ ಚಿತ್ರದ ಮೇಲೆ ಹೈಪ್​ ಹೆಚ್ಚಾಗಿದೆ. ಅಕ್ಟೋಬರ್​ 10ರಂದು ಈ ಸಿನಿಮಾ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!