AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಂಕಿ’ Vs ‘ಸಲಾರ್’ ಫೈಟ್​ಗೆ ಹೆದರಿ ಕಾಲ್ಕಿತ್ತ ಸಿನಿಮಾಗಳು; ಎದ್ದಿದೆ ದೊಡ್ಡ ಅಲೆ

ಡಿಸೆಂಬರ್ 15ರಂದು ‘ಯೋಧ’ ಸಿನಿಮಾ ರಿಲೀಸ್ ಆಗಬೇಕಿತ್ತು. ಸಿದ್ದಾರ್ಥ್ ಮಲ್ಹೋತ್ರಾ ನಟನೆಯ ಈ ಚಿತ್ರವನ್ನು ಕರಣ್ ಜೋಹರ್ ನಿರ್ಮಾಣ ಮಾಡುತ್ತಿದ್ದಾರೆ. ಡಿಸೆಂಬರ್ 1ರಂದು ‘ಅನಿಮಲ್’ ರಿಲೀಸ್ ಆಗಲಿದೆ. ಡಿಸೆಂಬರ್ 22ರಂದು ದೊಡ್ಡಬಜೆಟ್​ನ ಎರಡು ಚಿತ್ರಗಳು ರಿಲೀಸ್ ಆಗುತ್ತಿವೆ.

‘ಡಂಕಿ’ Vs ‘ಸಲಾರ್’ ಫೈಟ್​ಗೆ ಹೆದರಿ ಕಾಲ್ಕಿತ್ತ ಸಿನಿಮಾಗಳು; ಎದ್ದಿದೆ ದೊಡ್ಡ ಅಲೆ
ಪ್ರಭಾಸ್, ಕರಣ್, ಶಾರುಖ್
ರಾಜೇಶ್ ದುಗ್ಗುಮನೆ
|

Updated on: Sep 30, 2023 | 2:27 PM

Share

ಈ ವರ್ಷಾಂತ್ಯಕ್ಕೆ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಕ್ಲ್ಯಾಶ್ ಏರ್ಪಡುತ್ತಿದೆ. ಸಲಾರ್’ (Salaar Movie) ಹಾಗೂ ‘ಡಂಕಿ’ ಸಿನಿಮಾ (Dunki Movie) ಮಧ್ಯೆ ಫೈಟ್ ನಡೆಯುತ್ತಿದೆ. ಎರಡೂ ಸಿನಿಮಾಗಳನ್ನು ನೋಡಲು ಸಿನಿಪ್ರಿಯರು ಕಾದಿದ್ದಾರೆ. ಇವರ ಮಧ್ಯೆ ಸಿಲುಕಿದರೆ ಸಿನಿಮಾ ಕಲೆಕ್ಷನ್​ಗೆ ದೊಡ್ಡ ಹೊಡೆತ ಉಂಟಾಗಲಿದೆ ಅನ್ನೋದು ಹಲವು ನಿರ್ಮಾಪಕರಿಗೆ ಅರ್ಥವಾಗಿದೆ. ಹೀಗಾಗಿ ಹಲವು ಸಿನಿಮಾಗಳು ರಿಲೀಸ್ ದಿನಾಂಕವನ್ನು 2024ಕ್ಕೆ ಮುಂದೂಡಿಕೊಂಡಿವೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಬೇಕಿದೆ.

ಡಿಸೆಂಬರ್ 22ರಂದು ‘ಡಂಕಿ’ ರಿಲೀಸ್ ಆಗುವ ಬಗ್ಗೆ ಈ ಮೊದಲೇ ಘೋಷಣೆ ಆಗಿತ್ತು. ಈಗ ರೇಸ್​​ನಲ್ಲಿ ‘ಸಲಾರ್’ ಕೂಡ ಸೇರಿಕೊಂಡಿದೆ. ಪ್ರಶಾಂತ್ ನೀಲ್ ನಿರ್ದೇಶನ ಇರುವ ಈ ಚಿತ್ರದಲ್ಲಿ ಪ್ರಭಾಸ್, ಶ್ರುತಿ ಹಾಸನ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ತೆಲುಗು ಮಾತ್ರವಲ್ಲದೆ, ಹಿಂದಿ ಮೊದಲಾದ ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಈ ಕಾರಣಕ್ಕೆ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಫೈಟ್ ಏರ್ಪಡುತ್ತಿದೆ.

ಡಿಸೆಂಬರ್ 15ರಂದು ‘ಯೋಧ’ ಸಿನಿಮಾ ರಿಲೀಸ್ ಆಗಬೇಕಿತ್ತು. ಸಿದ್ದಾರ್ಥ್ ಮಲ್ಹೋತ್ರಾ ನಟನೆಯ ಈ ಚಿತ್ರವನ್ನು ಕರಣ್ ಜೋಹರ್ ನಿರ್ಮಾಣ ಮಾಡುತ್ತಿದ್ದಾರೆ. ಡಿಸೆಂಬರ್ 1ರಂದು ‘ಅನಿಮಲ್’ ರಿಲೀಸ್ ಆಗಲಿದೆ. ಡಿಸೆಂಬರ್ 22ರಂದು ದೊಡ್ಡಬಜೆಟ್​ನ ಎರಡು ಚಿತ್ರಗಳು ರಿಲೀಸ್ ಆಗುತ್ತಿವೆ. ಇವರ ಮಧ್ಯೆ ಸ್ಪರ್ಧಿಸಿದರೆ ಕೈ ಸುಟ್ಟುಕೊಳ್ಳೋದು ಖಚಿತ ಅನ್ನೋದು ಕರಣ್ ಜೋಹರ್​ಗೆ ಗೊತ್ತಾಗಿದೆ. ಹೀಗಾಗಿ ಅವರು ರಿಲೀಸ್ ದಿನಾಂಕವನ್ನು 2024ಕ್ಕೆ ಮುಂದೂಡಿಕೊಂಡಿದ್ದಾರೆ.

ಇದನ್ನೂ ಓದಿ: ಗೇ ಎಂಬ ಕಾರಣಕ್ಕೆ ಕರಣ್ ಜೋಹರ್ ಮದುವೆ ಆಗಿಲ್ವಾ? ಅಸಲಿ ಕಾರಣ ತಿಳಿಸಿದ ನಿರ್ಮಾಪಕ

ಕರಣ್ ಜೋಹರ್ ಹಾಗೂ ಶಾರುಖ್ ಖಾನ್ ಮಧ್ಯೆ ಬಹಳ ಹಳೆಯ ಗೆಳೆತನ ಇದೆ. ಇನ್ನು, ಪ್ರಭಾಸ್ ನಟನೆಯ ‘ಬಾಹುಬಲಿ’ ಚಿತ್ರವನ್ನು ಹಿಂದಿಯಲ್ಲಿ ರಿಲೀಸ್ ಮಾಡಿ ಲಾಭ ಕಂಡಿದ್ದರು. ಶಾರುಖ್ ಖಾನ್ ಹಾಗೂ ಪ್ರಭಾಸ್ ಮೇಲಿನ ಗೌರವದಿಂದಲೂ ಅವರು ‘ಯೋಧ’ ಚಿತ್ರದ ರಿಲೀಸ್ ದಿನಾಂಕವನ್ನು ಮುಂದೂಡಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ. ತೆಲುಗು, ತಮಿಳಿನಲ್ಲೂ ಕೆಲವು ಸಿನಿಮಾಗಳು ರಿಲೀಸ್ ದಿನಾಂಕ ಮುಂದಕ್ಕೆ ಹಾಕಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!