AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಂಕಿ’ Vs ‘ಸಲಾರ್’ ಫೈಟ್​ಗೆ ಹೆದರಿ ಕಾಲ್ಕಿತ್ತ ಸಿನಿಮಾಗಳು; ಎದ್ದಿದೆ ದೊಡ್ಡ ಅಲೆ

ಡಿಸೆಂಬರ್ 15ರಂದು ‘ಯೋಧ’ ಸಿನಿಮಾ ರಿಲೀಸ್ ಆಗಬೇಕಿತ್ತು. ಸಿದ್ದಾರ್ಥ್ ಮಲ್ಹೋತ್ರಾ ನಟನೆಯ ಈ ಚಿತ್ರವನ್ನು ಕರಣ್ ಜೋಹರ್ ನಿರ್ಮಾಣ ಮಾಡುತ್ತಿದ್ದಾರೆ. ಡಿಸೆಂಬರ್ 1ರಂದು ‘ಅನಿಮಲ್’ ರಿಲೀಸ್ ಆಗಲಿದೆ. ಡಿಸೆಂಬರ್ 22ರಂದು ದೊಡ್ಡಬಜೆಟ್​ನ ಎರಡು ಚಿತ್ರಗಳು ರಿಲೀಸ್ ಆಗುತ್ತಿವೆ.

‘ಡಂಕಿ’ Vs ‘ಸಲಾರ್’ ಫೈಟ್​ಗೆ ಹೆದರಿ ಕಾಲ್ಕಿತ್ತ ಸಿನಿಮಾಗಳು; ಎದ್ದಿದೆ ದೊಡ್ಡ ಅಲೆ
ಪ್ರಭಾಸ್, ಕರಣ್, ಶಾರುಖ್
ರಾಜೇಶ್ ದುಗ್ಗುಮನೆ
|

Updated on: Sep 30, 2023 | 2:27 PM

Share

ಈ ವರ್ಷಾಂತ್ಯಕ್ಕೆ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಕ್ಲ್ಯಾಶ್ ಏರ್ಪಡುತ್ತಿದೆ. ಸಲಾರ್’ (Salaar Movie) ಹಾಗೂ ‘ಡಂಕಿ’ ಸಿನಿಮಾ (Dunki Movie) ಮಧ್ಯೆ ಫೈಟ್ ನಡೆಯುತ್ತಿದೆ. ಎರಡೂ ಸಿನಿಮಾಗಳನ್ನು ನೋಡಲು ಸಿನಿಪ್ರಿಯರು ಕಾದಿದ್ದಾರೆ. ಇವರ ಮಧ್ಯೆ ಸಿಲುಕಿದರೆ ಸಿನಿಮಾ ಕಲೆಕ್ಷನ್​ಗೆ ದೊಡ್ಡ ಹೊಡೆತ ಉಂಟಾಗಲಿದೆ ಅನ್ನೋದು ಹಲವು ನಿರ್ಮಾಪಕರಿಗೆ ಅರ್ಥವಾಗಿದೆ. ಹೀಗಾಗಿ ಹಲವು ಸಿನಿಮಾಗಳು ರಿಲೀಸ್ ದಿನಾಂಕವನ್ನು 2024ಕ್ಕೆ ಮುಂದೂಡಿಕೊಂಡಿವೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಬೇಕಿದೆ.

ಡಿಸೆಂಬರ್ 22ರಂದು ‘ಡಂಕಿ’ ರಿಲೀಸ್ ಆಗುವ ಬಗ್ಗೆ ಈ ಮೊದಲೇ ಘೋಷಣೆ ಆಗಿತ್ತು. ಈಗ ರೇಸ್​​ನಲ್ಲಿ ‘ಸಲಾರ್’ ಕೂಡ ಸೇರಿಕೊಂಡಿದೆ. ಪ್ರಶಾಂತ್ ನೀಲ್ ನಿರ್ದೇಶನ ಇರುವ ಈ ಚಿತ್ರದಲ್ಲಿ ಪ್ರಭಾಸ್, ಶ್ರುತಿ ಹಾಸನ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ತೆಲುಗು ಮಾತ್ರವಲ್ಲದೆ, ಹಿಂದಿ ಮೊದಲಾದ ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಈ ಕಾರಣಕ್ಕೆ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಫೈಟ್ ಏರ್ಪಡುತ್ತಿದೆ.

ಡಿಸೆಂಬರ್ 15ರಂದು ‘ಯೋಧ’ ಸಿನಿಮಾ ರಿಲೀಸ್ ಆಗಬೇಕಿತ್ತು. ಸಿದ್ದಾರ್ಥ್ ಮಲ್ಹೋತ್ರಾ ನಟನೆಯ ಈ ಚಿತ್ರವನ್ನು ಕರಣ್ ಜೋಹರ್ ನಿರ್ಮಾಣ ಮಾಡುತ್ತಿದ್ದಾರೆ. ಡಿಸೆಂಬರ್ 1ರಂದು ‘ಅನಿಮಲ್’ ರಿಲೀಸ್ ಆಗಲಿದೆ. ಡಿಸೆಂಬರ್ 22ರಂದು ದೊಡ್ಡಬಜೆಟ್​ನ ಎರಡು ಚಿತ್ರಗಳು ರಿಲೀಸ್ ಆಗುತ್ತಿವೆ. ಇವರ ಮಧ್ಯೆ ಸ್ಪರ್ಧಿಸಿದರೆ ಕೈ ಸುಟ್ಟುಕೊಳ್ಳೋದು ಖಚಿತ ಅನ್ನೋದು ಕರಣ್ ಜೋಹರ್​ಗೆ ಗೊತ್ತಾಗಿದೆ. ಹೀಗಾಗಿ ಅವರು ರಿಲೀಸ್ ದಿನಾಂಕವನ್ನು 2024ಕ್ಕೆ ಮುಂದೂಡಿಕೊಂಡಿದ್ದಾರೆ.

ಇದನ್ನೂ ಓದಿ: ಗೇ ಎಂಬ ಕಾರಣಕ್ಕೆ ಕರಣ್ ಜೋಹರ್ ಮದುವೆ ಆಗಿಲ್ವಾ? ಅಸಲಿ ಕಾರಣ ತಿಳಿಸಿದ ನಿರ್ಮಾಪಕ

ಕರಣ್ ಜೋಹರ್ ಹಾಗೂ ಶಾರುಖ್ ಖಾನ್ ಮಧ್ಯೆ ಬಹಳ ಹಳೆಯ ಗೆಳೆತನ ಇದೆ. ಇನ್ನು, ಪ್ರಭಾಸ್ ನಟನೆಯ ‘ಬಾಹುಬಲಿ’ ಚಿತ್ರವನ್ನು ಹಿಂದಿಯಲ್ಲಿ ರಿಲೀಸ್ ಮಾಡಿ ಲಾಭ ಕಂಡಿದ್ದರು. ಶಾರುಖ್ ಖಾನ್ ಹಾಗೂ ಪ್ರಭಾಸ್ ಮೇಲಿನ ಗೌರವದಿಂದಲೂ ಅವರು ‘ಯೋಧ’ ಚಿತ್ರದ ರಿಲೀಸ್ ದಿನಾಂಕವನ್ನು ಮುಂದೂಡಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ. ತೆಲುಗು, ತಮಿಳಿನಲ್ಲೂ ಕೆಲವು ಸಿನಿಮಾಗಳು ರಿಲೀಸ್ ದಿನಾಂಕ ಮುಂದಕ್ಕೆ ಹಾಕಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್