‘ತಲೆ ಉಪಯೋಗಿಸಿ ಸ್ವಂತವಾಗಿ ಏನನ್ನಾದರೂ ಮಾಡಿ’; ಕರಣ್ ಜೋಹರ್​ಗೆ ನೆಟ್ಟಿಗರ ಟೀಕೆ

ವಿನೀತ್ ಶ್ರೀನಿವಾಸನ್ ‘ಹೃದಯಂ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಕಾಲೇಜ್ ಹುಡುಗನೊಬ್ಬ ಜೀವನದಲ್ಲಿ ತನ್ನ ಪ್ಯಾಷನ್​ ಬೆನ್ನತ್ತಿ ಹೋಗಿ ದೊಡ್ಡ ಮಟ್ಟದ ಯಶಸ್ಸು ಕಾಣುವ ಕಥೆಯನ್ನು ವಿನೀತ್ ಹೇಳಿದ್ದರು.

‘ತಲೆ ಉಪಯೋಗಿಸಿ ಸ್ವಂತವಾಗಿ ಏನನ್ನಾದರೂ ಮಾಡಿ’; ಕರಣ್ ಜೋಹರ್​ಗೆ ನೆಟ್ಟಿಗರ ಟೀಕೆ
ಕರಣ್​ ಜೋಹರ್
Follow us
| Edited By: Rajesh Duggumane

Updated on: Mar 25, 2022 | 4:10 PM

ಭಿನ್ನ ಪ್ರಯೋಗಗಳನ್ನು ಮಲಯಾಳಂ ಚಿತ್ರರಂಗದಲ್ಲಿ (Malayam Movie) ಮಾಡುತ್ತಲೇ ಇರುತ್ತಾರೆ. ಅಲ್ಲಿ ಆ್ಯಕ್ಷನ್​ ಸಿನಿಮಾಗಳಿಗಿಂತ, ಯಾವುದೇ ವಿಜೃಂಭಣೆ ಇಲ್ಲದೆ ಸಾಗುವ ಸಿನಿಮಾಗಳು ಹೆಚ್ಚು ಸದ್ದು ಮಾಡುತ್ತವೆ. ಈ ವರ್ಷ ತೆರೆಗೆ ಬಂದ ಮಲಯಾಳಂನ ‘ಹೃದಯಂ’ ಸಿನಿಮಾ (Hridayam Movie) ಕೂಡ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿತ್ತು. ಮೋಹನ್​ಲಾಲ್ ಮಗ ಪ್ರಣವ್​ ಮೋಹನ್​ಲಾಲ್​ ನಟಿಸಿರುವ ಈ ಸಿನಿಮಾ ಯಶಸ್ಸು ಕಂಡಿದೆ. ಕೇವಲ 6 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧಗೊಂಡ ಈ ಸಿನಿಮಾ 55 ಕೋಟಿ ರೂಪಾಯಿ ಬಾಚಿದೆ. ಈಗ ಈ ಸಿನಿಮಾ ಹಿಂದಿಗೆ ರಿಮೇಕ್ ಆಗುತ್ತಿದೆ. ಬಾಲಿವುಡ್​ನ ಲೀಡಿಂಗ್ ನಿರ್ಮಾಣ ಸಂಸ್ಥೆ ಕರಣ್​ ಜೋಹರ್​ ಒಡೆತನದ ಧರ್ಮ ಪ್ರೊಡಕ್ಷನ್ (Dharma Production) ಈ ಚಿತ್ರದ ರಿಮೇಕ್ ಹಕ್ಕು ಪಡೆದಿದೆ. ಇದಕ್ಕೆ ನೆಟ್ಟಿಗರು ಕಿಡಿಕಾರಿದ್ದಾರೆ.

ವಿನೀತ್ ಶ್ರೀನಿವಾಸನ್ ‘ಹೃದಯಂ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಕಾಲೇಜ್ ಹುಡುಗನೊಬ್ಬ ಜೀವನದಲ್ಲಿ ತನ್ನ ಪ್ಯಾಷನ್​ ಬೆನ್ನತ್ತಿ ಹೋಗಿ ದೊಡ್ಡ ಮಟ್ಟದ ಯಶಸ್ಸು ಕಾಣುವ ಕಥೆಯನ್ನು ವಿನೀತ್ ಹೇಳಿದ್ದರು. ಕಾಲೇಜಿನ ಪ್ರೀತಿ, ಪ್ರೇಮ, ಬ್ರೇಕಪ್​, ರ‍್ಯಾಗಿಂಗ್ ಹೀಗೆ ಹತ್ತು ಹಲವು ವಿಚಾರಗಳನ್ನು ಇಟ್ಟುಕೊಂಡು ಹೇಳಿದ್ದ ಕಥೆ ಯುವಜನತೆಗೆ ಕನೆಕ್ಟ್​ ಆಗಿತ್ತು. ಈಗ ಇದನ್ನು ರಿಮೇಕ್​ ಮಾಡಲು ಧರ್ಮ ಪ್ರೊಡಕ್ಷನ್​ ಹಾಗೂ ಫಾಕ್ಸ್ ಸ್ಟಾರ್ ಸ್ಟುಡಿಯೋಸ್ ಮುಂದಾಗಿದೆ.

ಹಿಂದಿ ಮಾತ್ರವಲ್ಲದೆ, ತಮಿಳು ಹಾಗೂ ತೆಲುಗು ಭಾಷೆಗೂ ಚಿತ್ರವನ್ನು ರಿಮೇಕ್​ ಮಾಡಲಾಗುತ್ತಿದೆ. ಈ ಬಗ್ಗೆ ನಿರ್ಮಾಣ ಸಂಸ್ಥೆಗಳು ಅಧಿಕೃತ ಘೋಷಣೆ ಮಾಡಿವೆ. ‘ಈ ವಿಚಾರವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ನನಗೆ ನಿಜಕ್ಕೂ ಖುಷಿ ಇದೆ. ಧರ್ಮ ಪ್ರೊಡಕ್ಷನ್ಸ್ ಮತ್ತು ಫಾಕ್ಸ್ ಸ್ಟಾರ್ ಸ್ಟುಡಿಯೋಸ್ ‘ಹೃದಯಂ’ ಚಿತ್ರವನ್ನು ಹಿಂದಿ, ತಮಿಳು ಮತ್ತು ತೆಲುಗು ಭಾಷೆಯ ರಿಮೇಕ್​ ಹಕ್ಕನ್ನು ಪಡೆದುಕೊಂಡಿದೆ. ಶೀಘ್ರವೇ ಈ ಬಗ್ಗೆ ಮಾಹಿತಿ ನೀಡುತ್ತೇವೆ’ ಎಂದು ಬರೆದುಕೊಂಡಿದ್ದಾರೆ ಕರಣ್​. ಈ ಚಿತ್ರದಲ್ಲಿ ಯಾರೆಲ್ಲ ನಟಿಸಲಿದ್ದಾರೆ ಎನ್ನುವ ವಿಚಾರ ಇನ್ನಷ್ಟೇ ತಿಳಿದುಬರಬೇಕಿದೆ.

ಇತ್ತೀಚೆಗೆ ದಕ್ಷಿಣ ಭಾರತದ ಸಾಕಷ್ಟು ಸಿನಿಮಾಗಳನ್ನು ಹಿಂದಿಗೆ ರಿಮೇಕ್​ ಮಾಡಲಾಗಿದೆ. ಈ ವಿಚಾರ ಇಟ್ಟುಕೊಂಡು ಕೆಲವರು ಟೀಕೆ ಮಾಡಿದ್ದಾರೆ. ‘ದಕ್ಷಿಣ ಭಾರತದಲ್ಲಿ ಯಶಸ್ಸು ಕಂಡ ಎಲ್ಲಾ ಸಿನಿಮಾಗಳನ್ನು ಏಕೆ ಬಾಲಿವುಡ್​ಗೆ ರಿಮೇಕ್​ ಮಾಡುತ್ತೀರಿ? ಒಂದು ಸಿನಿಮಾವಾದರೂ ಸ್ವಂತ ತಲೆ ಉಪಯೋಗಿಸಿ ಮಾಡಿ’ ಎಂದು ಕೆಲವರು ಕರಣ್​ಗೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಟ ಸಂಜಯ್​ ಮಗಳು; ಕರಣ್​ ಹೆಗಲಿದೆ ಹೊಸ ಜವಾಬ್ದಾರಿ

Karan Johar: ‘ಕೆಜಿಎಫ್​ 2’ ಟ್ರೇಲರ್​ ರಿಲೀಸ್​ಗೆ ಬರ್ತಿದ್ದಾರೆ ಸ್ಟಾರ್​ ನಿರೂಪಕ ಕರಣ್​ ಜೋಹರ್​; ಏನು ಇವರ ವಿಶೇಷ?

ತಾಜಾ ಸುದ್ದಿ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್