AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ರಾಜಾ ಸಾಬ್’ ಸಿನಿಮಾದಲ್ಲಿ ಪ್ರಭಾಸ್ ಜೊತೆ ಕರೀನಾ ಕಪೂರ್ ಸ್ಪೆಷಲ್ ಸಾಂಗ್?

ಬೇರೆ ಬೇರೆ ಸಿನಿಮಾಗಳಲ್ಲಿ ಕರೀನಾ ಕಪೂರ್ ಖಾನ್ ಅವರು ಸ್ಪೆಷಲ್ ಸಾಂಗ್ ಮಾಡಿ ಜನರನ್ನು ರಂಜಿಸಿದ್ದಾರೆ. ಈಗ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ತಂಡದಿಂದ ಕರೀನಾ ಕಪೂರ್ ಅವರಿಗೆ ಆಫರ್ ನೀಡಲಾಗಿದೆ. ಈ ಆಫರ್ ಒಪ್ಪಿಕೊಂಡರೆ ಅವರಿಗೆ ದುಬಾರಿ ಸಂಭಾವನೆ ಸಿಗಲಿದೆ. ಈ ರೀತಿ ಸುದ್ದಿಯೊಂದು ಟಾಲಿವುಡ್ ಅಂಗಳದಲ್ಲಿ ಕೇಳಿಸುತ್ತಿದೆ.

‘ದಿ ರಾಜಾ ಸಾಬ್’ ಸಿನಿಮಾದಲ್ಲಿ ಪ್ರಭಾಸ್ ಜೊತೆ ಕರೀನಾ ಕಪೂರ್ ಸ್ಪೆಷಲ್ ಸಾಂಗ್?
Prabhas, Kareena Kapoor Khan
ಮದನ್​ ಕುಮಾರ್​
|

Updated on: Jul 02, 2025 | 7:13 AM

Share

ಬಾಲಿವುಡ್ ನಟಿ ಕರೀನಾ ಕಪೂರ್ ಖಾನ್ (Kareena Kapoor Khan) ಅವರಿಗೆ ಈಗ 44 ವರ್ಷ ವಯಸ್ಸು. ಎರಡು ಮಕ್ಕಳ ತಾಯಿ ಅವರು. ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷಗಳು ಕಳೆದಿವೆ. ಹಾಗಿದ್ದರೂ ಕೂಡ ಅವರಿಗೆ ಇಂದಿಗೂ ಅಷ್ಟೇ ಬೇಡಿಕೆ ಇದೆ. ಬಾಲಿವುಡ್ ಮಾತ್ರವಲ್ಲದೇ ದಕ್ಷಿಣ ಭಾರತದ ಚಿತ್ರರಂಗದಲ್ಲೂ ಕರೀನಾ ಕಪೂರ್ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. ಪ್ರಭಾಸ್ (Prabhas) ನಟನೆಯ ‘ದಿ ರಾಜಾ ಸಾಬ್’ (The Raja Saab) ಸಿನಿಮಾದಲ್ಲಿ ಸಹ ಕರೀನಾ ಕಪೂರ್ ಅವರು ನಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಗ್ಗೆ ಚಿತ್ರತಂಡದವರು ಕರೀನಾ ಕಪೂರ್ ಜೊತೆ ಈಗಾಗಲೇ ಒಂದು ಸತ್ತಿನ ಮಾತುಕಥೆ ಮಾಡಿದ್ದಾರೆ ಎಂದು ಸುದ್ದಿ ಆಗಿದೆ.

‘ದಿ ರಾಜಾ ಸಾಬ್’ ಸಿನಿಮಾದ ಬಹುತೇಕ ಕೆಲಸಗಳು ಮುಕ್ತಾಯ ಆಗಿವೆ. ಈಗಾಗಲೇ ಈ ಸಿನಿಮಾದ ಟೀಸರ್ ಬಿಡುಗಡೆಯಾಗಿ ಗಮನ ಸೆಳೆದಿದೆ. ಇದು ಹಾರರ್ ಸಿನಿಮಾ. ಪ್ರಭಾಸ್ ಅವರು ಇದೇ ಮೊದಲ ಬಾರಿಗೆ ಹಾರರ್ ಕಥೆಯನ್ನು ಆಯ್ಕೆ ಮಾಡಿಕೊಂಡಿರುವುದರಿಂದ ನಿರೀಕ್ಷೆ ಜೋರಾಗಿದೆ. ಇದೇ ಸಿನಿಮಾದಲ್ಲಿ ಕರೀನಾ ಕಪೂರ್ ಕೂಡ ನಟಿಸುವ ಸಾಧ್ಯತೆ ಇದೆ.

ಈ ಸಿನಿಮಾದಲ್ಲಿ ಒಂದು ಸ್ಪೆಷಲ್ ಸಾಂಗ್ ಇರಬೇಕು ಎಂದು ಚಿತ್ರತಂಡ ನಿರ್ಧರಿಸಿದೆಯಂತೆ. ಅದರಲ್ಲಿ ಡ್ಯಾನ್ಸ್ ಮಾಡಲು ಕರೀನಾ ಕಪೂರ್ ಅವರಿಗೆ ಆಫರ್ ನೀಡಲಾಗಿದೆ. ಕರೀನಾ ಒಪ್ಪಿಕೊಂಡರೆ ಅವರಿಗೆ ದುಬಾರಿ ಸಂಭಾವನೆ ನೀಡಲು ನಿರ್ಮಾಪಕರು ಸಿದ್ಧರಿದ್ದಾರೆ. ಕರೀನಾ ಕಡೆಯಿಂದ ಅಂತಿಮ ನಿರ್ಧಾರ ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಇದನ್ನೂ ಓದಿ
Image
ಪ್ರಭಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ‘ಕಲ್ಕಿ 2898 ಎಡಿ’ ಟೀಂ
Image
ಪ್ರಭಾಸ್ ಜೊತೆಗೆ ಹೊಂಬಾಳೆಯ 4ನೇ ಸಿನಿಮಾ, ನಿರ್ದೇಶಕ ಯಾರು?
Image
ತಂದೆ ಮೃತಪಟ್ಟ ನೋವಲ್ಲೂ ಸಹಾಯ ಮಾಡೋದು ಮರೆತಿರಲಿಲ್ಲ ಪ್ರಭಾಸ್  
Image
ಪ್ರಭಾಸ್​ರ ಹೊಸ ಚಿತ್ರ ಶೂಟಿಂಗ್​ಗೆ ಮುಹೂರ್ತ ಫಿಕ್ಸ್, ಬಿಡುಗಡೆ ಯಾವಾಗ?

ಮಾರುತಿ ಅವರು ‘ದಿ ರಾಜಾ ಸಾಬ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಮೂಲಕ ಟಿಜಿ ವಿಶ್ವಪ್ರಸಾದ್ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪ್ರಭಾಸ್ ಜೊತೆ ಸಂಜಯ್ ದತ್, ನಿಧಿ ಅಗರ್​ವಾಲ್, ಮಾಳವಿಕಾ ಮೋಹನನ್ ಮುಂತಾದವರು ಕೂಡ ‘ದಿ ರಾಜಾ ಸಾಬ್’ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಇದನ್ನೂ ಓದಿ: ‘ಕರೀನಾ ಕಪೂರ್ ಸಹವಾಸ ಮಾಡಬೇಡ’: ಸೈಫ್​ಗೆ ಎಚ್ಚರಿಕೆ ನೀಡಿದ್ದ ಅಕ್ಷಯ್ ಕುಮಾರ್

ಈ ಮೊದಲು ಕೂಡ ಕರೀನಾ ಕಪೂರ್ ಖಾನ್ ಬಗ್ಗೆ ಕೆಲವು ಗಾಸಿಪ್ ಕೇಳಿಬಂದಿತ್ತು. ಪ್ರಭಾಸ್ ಮತ್ತು ನಿರ್ದೇಶಕ ಸಂದೀಪ್ ರೆಡ್ಡಿ ವಂಗ ಅವರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ‘ಸ್ಪಿರಿಟ್’ ಸಿನಿಮಾದಲ್ಲಿ ಕರೀನಾ ನಟಿಸುತ್ತಾರೆ ಎನ್ನಲಾಗಿತ್ತು. ಆದರೆ ಅದು ನಿಜವಾಗಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು