AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀತೆ ಪಾತ್ರಕ್ಕೆ 12 ಕೋಟಿ ಕೇಳಿದ್ರಾ ಕರೀನಾ ಕಪೂರ್​ ಖಾನ್​? ವಿಷ್ಯ ಬೇರೆಯೇ ಇದೆ ಅಂತಿವೆ ಮೂಲಗಳು

Kareena Kapoor Khan: ಸೀರಿಯಲ್​, ಸಿನಿಮಾ, ವೆಬ್​ ಸಿರೀಸ್​ನಲ್ಲೂ ರಾಮಾಯಣ ಮೂಡಿಬಂದಿದೆ. ಹಾಗಿದ್ದರೂ ಮತ್ತೊಮ್ಮೆ ಮೆಗಾ ಬಜೆಟ್​ನಲ್ಲಿ ರಾಮಾಯಣದ ಕಥೆಯನ್ನು ತೆರೆ ಮೇಲೆ ತರಲು ಬಾಲಿವುಡ್​ನಲ್ಲಿ ಮಾತುಕತೆ ನಡೆಯುತ್ತಿದೆ.

ಸೀತೆ ಪಾತ್ರಕ್ಕೆ 12 ಕೋಟಿ ಕೇಳಿದ್ರಾ ಕರೀನಾ ಕಪೂರ್​ ಖಾನ್​? ವಿಷ್ಯ ಬೇರೆಯೇ ಇದೆ ಅಂತಿವೆ ಮೂಲಗಳು
ಕರೀನಾ ಕಡೆಯಿಂದ ಸೈಫ್​ಗೆ ಬಂತು ಕಟ್ಟುನಿಟ್ಟಿನ ಆದೇಶ; ಇದನ್ನು ಅವರು ಪಾಲಿಸಲೇಬೇಕು
ಮದನ್​ ಕುಮಾರ್​
| Edited By: |

Updated on: Jun 10, 2021 | 5:09 PM

Share

‘ಆದಿಪುರುಷ್​’ ಸಿನಿಮಾದಲ್ಲಿ ನಟ ಸೈಫ್​ ಅಲಿ ಖಾನ್​ ಅವರು ರಾವಣನ ಪಾತ್ರ ಮಾಡುತ್ತಿದ್ದಾರೆ. ರಾಮಾಯಣದ ಪಾತ್ರಗಳ ಬಗ್ಗೆ ಅವರು ಹೇಳಿಕೆ ನೀಡಿ ಈ ಹಿಂದೆ ಕಾಂಟ್ರವರ್ಸಿ ಮಾಡಿಕೊಂಡಿದ್ದರು. ಈಗ ಅವರ ಪತ್ನಿ ಕರೀನಾ ಕಪೂರ್​ ಖಾನ್​ ಅವರು ಕೂಡ ರಾಮಾಯಣಕ್ಕೆ ಸಂಬಂಧಿಸಿದಂತೆ ಸುದ್ದಿ ಆಗುತ್ತಿದ್ದಾರೆ. ರಾಮಾಯಣದ ಕಥೆ ಆಧರಿಸಿ ಬಾಲಿವುಡ್​ನಲ್ಲಿ ಸಿದ್ಧ ಆಗಬೇಕಿರುವ ಬಿಗ್​ ಬಜೆಟ್​ ಸಿನಿಮಾದಲ್ಲಿ ಸೀತೆ ಪಾತ್ರ ಮಾಡೋಕೆ ಕರೀನಾ ಕಪೂರ್​ ಬರೋಬ್ಬರಿ 12 ಕೋಟಿ ರೂ. ಸಂಭಾವನೆ ಕೇಳಿದ್ದಾರೆ ಎಂಬ ಗುಸುಗುಸು ಹಬ್ಬಿದೆ.

ರಾಮಾಯಣದ ಕಥೆಯನ್ನು ಈಗಾಗಲೇ ಜನರು ಹಲವು ರೂಪಗಳಲ್ಲಿ ತಿಳಿದುಕೊಂಡಿದ್ದಾರೆ. ಸೀರಿಯಲ್​, ಸಿನಿಮಾ, ವೆಬ್​ ಸಿರೀಸ್​ನಲ್ಲೂ ರಾಮಾಯಣ ಮೂಡಿಬಂದಿದೆ. ಹಾಗಿದ್ದರೂ ಮತ್ತೊಮ್ಮೆ ಮೆಗಾ ಬಜೆಟ್​ನಲ್ಲಿ ರಾಮಾಯಣ ಕಥೆಯನ್ನು ತೆರೆ ಮೇಲೆ ತರಲು ಬಾಲಿವುಡ್​ನಲ್ಲಿ ಮಾತುಕತೆ ನಡೆಯುತ್ತಿದೆ. ಆ ಚಿತ್ರದ ಸೀತೆ ಪಾತ್ರಕ್ಕೆ ಕರೀನಾಗೆ ಆಫರ್​ ನೀಡಲಾಗಿತ್ತು. ಆದರೆ ಅವರು 12 ಕೋಟಿ ರೂ. ಸಂಭಾವನೆ ಕೇಳಿದ್ದರಿಂದ, ಅಷ್ಟು ಕೊಡಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಅವರನ್ನು ತಂಡದಿಂದ ಕೈ ಬಿಡಲಾಯಿತು ಎಂಬ ಗಾಸಿಪ್​ ಹರಿದಾಡುತ್ತಿದೆ.

ಇದೆಲ್ಲ ನಿಜವೇ ಎಂದು ಸಿನಿಮಾ ಕಥೆಗಾರ ವಿಜಯೇಂದ್ರ ಪ್ರಸಾದ್​ ಅವರನ್ನು ಕೇಳಿದರೆ, ‘ಇಲ್ಲ ಇಲ್ಲ’ ಎನ್ನುವ ಉತ್ತರ ನೀಡಿದ್ದಾರೆ ಎಂದು ಕೆಲವು ಕಡೆ ವರದಿ ಆಗಿದೆ. ಮೂಲಗಳ ಪ್ರಕಾರ, ಕರೀನಾಗೆ ಈ ಆಫರ್​ ನೀಡಲಾಗಿಲ್ಲ. ಅವರು ಯಾವುದೇ ಕಾರಣಕ್ಕೂ ಸೀತೆಯ ಪಾತ್ರಕ್ಕೆ ಸೂಕ್ತ ಆಗುವುದಿಲ್ಲ. ಅದರಲ್ಲೂ 12 ಕೋಟಿ ಸಂಭಾವನೆ ಕೊಡಲು ಸಾಧ್ಯವೇ ಇಲ್ಲ ಎಂದು ಚಿತ್ರತಂಡದವರು ನಕ್ಕಿದ್ದಾರಂತೆ.

ಸದ್ಯ ಕರೀನಾ ಎರಡನೇ ಮಗುವಿನ ಪಾಲನೆಯಲ್ಲಿ ತೊಡಗಿಕೊಂಡಿದ್ದಾರೆ. ಈ ವರ್ಷ ಫೆಬ್ರವರಿಯಲ್ಲಿ ಮಗುವಿಗೆ ಜನ್ಮ ನೀಡುವುದಕ್ಕೂ ಮುನ್ನ ಅವರು ಆಮೀರ್​ ಖಾನ್​ ನಟನೆಯ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಆ ಚಿತ್ರದ ಮೇಲೆ ಹೆಚ್ಚು ನಿರೀಕ್ಷೆ ಇದೆ. ಲಾಕ್​ಡೌನ್​ ಕಾರಣಕ್ಕಾಗಿ ಚಿತ್ರದ ಕೆಲಸಗಳು ತಡವಾಗಿವೆ. ಹಾಲಿವುಡ್​ನ ‘ಫಾರೆಸ್ಟ್​ ಗಂಪ್​’ ಚಿತ್ರದ ಹಿಂದಿ ರಿಮೇಕ್​ ಆಗಿ ‘ಲಾಲ್​ ಸಿಂಗ್​ ಚಡ್ಡಾ’ ಮೂಡಿಬರುತ್ತಿದೆ.

ಇದನ್ನೂ ಓದಿ:

ಕರೀನಾ ತೊಟ್ಟ ಮಾಸ್ಕ್​ ಬೆಲೆ ಇಷ್ಟೊಂದಾ? ಐಟಿ ಮಂದಿಯ ವೇತನವೂ ಇಷ್ಟಿರಲ್ಲ ಎಂದ ಫ್ಯಾನ್ಸ್​​

ಎರಡನೇ ಮಗು ಜನನದ ಬಳಿಕ ಮೊದಲ ಬಾರಿಗೆ ಫೋಟೋ ಹಂಚಿಕೊಂಡ ಕರೀನಾ ಕಪೂರ್; ಏನು ಹೇಳಿದ್ದಾರೆ?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್