AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರೀನಾ ಕಪೂರ್ ಖಾನ್ ಪುಸ್ತಕದ ಶೀರ್ಷಿಕೆ ವಿರುದ್ಧ ಕ್ರೈಸ್ತ ಸಮುದಾಯ ಗುಂಪೊಂದರಿಂದ ದೂರು ದಾಖಲು

ಲಭ್ಯವಾಗಿರುವ ಮಾಹಿತಿಯ ಪ್ರಕಾರ ಅಲ್ಪಾ, ಒಮೆಗಾ ಕ್ರಿಶ್ಚಿಯನ್ ಮಹಾಸಂಘ ಹೆಸರಿನ ಕ್ರಿಶ್ಚಿಯನ್ ಸಂಸ್ಥೆಯು, ಪುಸ್ತಕದ ಟೈಟಲ್ ಕ್ರಿಶ್ವಿಯನ್ನರ ಭಾವನಗಳಿಗೆ ಘಾಸಿಯುಂಟು ಮಾಡಿದೆ ಎಂದು ಆರೋಪಿಸಿದೆ.

ಕರೀನಾ ಕಪೂರ್ ಖಾನ್ ಪುಸ್ತಕದ ಶೀರ್ಷಿಕೆ ವಿರುದ್ಧ ಕ್ರೈಸ್ತ ಸಮುದಾಯ ಗುಂಪೊಂದರಿಂದ ದೂರು ದಾಖಲು
ತಮ್ಮ ಪುಸ್ತಕದೊಂದಿಗೆ ಕರೀನಾ ಕಪೂರ್
TV9 Web
| Edited By: |

Updated on: Jul 15, 2021 | 12:26 AM

Share

ಜನಪ್ರಿಯ ಬಾಲಿವುಡ್​ ನಟಿ ಕರೀನಾ ಕಪೂರ್ ಅವರು ವಿರುದ್ಧ ಅವರು ಬರೆದಿರುವ (ಸಹ ಲೇಖಕಿ) ಪುಸ್ತಕದ ಶೀರ್ಷಿಕೆಗೆ ಸಂಭಂಧಿಸಿದಂತೆ ಮಹಾರಾಷ್ಟ್ರದ ಬೀಡ್​ನಲ್ಲಿ ದೂರೊಂದು ದಾಖಲಾಗಿದೆ. ಕ್ರೈಸ್ತ ಸಮುದಾಯಕ್ಕೆ ಸೇರಿದ ಗುಂಪೊಂದು ಕರೀನಾ ಅವರ ‘ಪ್ರಿಗ್ನೆನ್ಸಿ ಬೈಬಲ್’ ಪುಸ್ತಕ ಶೀರ್ಷಿಕೆಯಾಗಿ ಪವಿತ್ರ ಗ್ರಂಥದ ಹೆಸರನ್ನು ಪುಸ್ತಕಕ್ಕೆ ಇಟ್ಟಿರುವದಕ್ಕೆ ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿ ದೂರು ದಾಖಲಿಸಿದ್ದಾರೆ.

ಲಭ್ಯವಾಗಿರುವ ಮಾಹಿತಿಯ ಪ್ರಕಾರ ಅಲ್ಪಾ, ಒಮೆಗಾ ಕ್ರಿಶ್ಚಿಯನ್ ಮಹಾಸಂಘ ಹೆಸರಿನ ಕ್ರಿಶ್ಚಿಯನ್ ಸಂಸ್ಥೆಯು, ಪುಸ್ತಕದ ಟೈಟಲ್ ಕ್ರಿಶ್ವಿಯನ್ನರ ಭಾವನಗಳಿಗೆ ಘಾಸಿಯುಂಟು ಮಾಡಿದೆ ಎಂದು ಆರೋಪಿಸಿದೆ. ಸಂಸ್ಥೆಯ ಅಧ್ಯಕ್ಷ ಆಶಿಷ್ ಶಿಂಧೆ, ಬೀಡ್ ನಗರದಲ್ಲಿನ ಶಿವಾಜಿ ನಗರ ಪೊಲೀಸ್ ಸ್ಟೇಶನ್​ನಲ್ಲಿ ದೂರನ್ನು ದಾಖಲಿಸಿ ಪುಸ್ತಕದ ಕರ್ತೃ ವಿರುದ್ಧ ದೇವದೂಷಣೆ ಆರೋಪದಡಿ ಕ್ರಮ ತೆಗೆದಗುಕೊಳ್ಳಬೇಕು ಅಂತ ಆಗ್ರಹಿಸಿದ್ದಾರೆ.

ಪವಿತ್ರ ಪದವಾಗಿರುವ ಬೈಬಲ್​ ಅನ್ನು ಸದರಿ ಪುಸ್ತಕದಲ್ಲಿ ಬಳಸಲಾಗಿದ್ದು ಅದು ಕ್ರಿಶ್ಚಿಯನ್ನರ ಧಾರ್ಮಿಕ ಭಾವನೆಗಳಿಗೆ ಘಾಸಿಯನ್ನುಂಟು ಮಾಡಿದೆ ಅಂತ ದೂರಿನಲ್ಲಿ ಹೇಳಿರುವ ಶಿಂಧೆ ಅವರು, ಐಪಿಸಿ ಸೆಕ್ಷನ್ 295-ಎ ( ಯಾವುದೇ ಒಂದು ವರ್ಗದ ಧಾರ್ಮಿಕ ಭಾವನೆ ಮತ್ತು ಧಾರ್ಮಿಕ ನಂಬುಗೆಗಳನ್ನು ಉದ್ದೇಶಪೂರ್ವಕ ಘಾಸಿಗೊಳಿಸುವುದು) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ದೂರು ಸ್ವೀಕರಿಸಿರುವುದನ್ನು ಖಚಿತಪಡಿಸಿರುವ ಪೊಲೀಸರು ಇನ್ನೂ ಎಫ್​ಐಅರ್ ದಾಖಲಿಸಿಲ್ಲವೆಂದು ಹೇಳಿದ್ದಾರೆ. ಕರೀನಾ ಅವರು ಪುಸ್ತಕವು ಬೀಡ್​ನಲ್ಲಿ ಪ್ರಕಾಶನಗೊಂಡಿಲ್ಲವಾದ್ದರಿಂದ ದೂರನ್ನು ಮುಂಬೈ ಮಹಾನಗರದಲ್ಲಿ ದಾಖಲಿಸುವಂತೆ ದೂರುದಾರರಿಗೆ ತಿಳಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಶಿವಾಜಿ ನಗರ ಪೊಲೀಸ್ ಠಾಣೆಯ ಇನ್-ಚಾರ್ಜ್ ಇನ್ಸ್​ಪೆಕ್ಟರ್ ಸಾಯಿನಾಥ್ ಥೋಂಬ್ರೆ ಅವರು, ‘ ನಾವು ದೂರನ್ನು ಸ್ವೀಕರಿಸಿದ್ದೇವೆ. ಆದರೆ, ಘಟನೆಯು ಬೀಡ್​ನಲ್ಲಿ ನಡೆದಿಲ್ಲವಾದ್ದರಿಂದ ಕೇಸ್ ರಿಜಿಸ್ಟರ್ ಮಾಡಿಲ್ಲ. ನಾವು ಅವರಿಗೆ ಮುಂಬೈಯಲ್ಲಿ ದೂರು ದಾಖಲಿಸುವಂತೆ ಸಲಹೆ ನೀಡಿದ್ದೇವೆ,’ ಎಂದು ಹೇಳಿದರು.

ಕರೀನಾ ಕಪೂರ್ ಖಾನ್ ಅವರ ಪ್ರಿಗ್ನೆನ್ಸಿ ಬೈಬಲ್: ದಿ ಅಲ್ಟಿಮೇಟ್ ಮ್ಯಾನುಯಲ್ ಫಾರ್ ಮದರ್ಸ್ ಟು ಬಿ ಪುಸ್ತಕವು ಕರೀನಾ ಕಪೂರ್ ಖಾನ್ ಮತ್ತು ಆದಿತಿ ಶಾಹ ಭಿಮ್ಜಿಯಾನಿ ಅವರು ಜಂಟಿಯಾಗಿ ಬರೆದಿದ್ದಾರೆ. ಒಬ್ಬ ಸೆಲಿಬ್ರಿಟಿಯಾಗಿ ಕರೀನಾ ಎರಡು ಬಾರಿ ಗರ್ಭಿಣಿಗಾಗಿದ್ದಾಗಿನ ಅನುಭವವನ್ನು ಪುಸ್ತಕದಲ್ಲಿ ವಿವರಿಸಲಾಗಿದೆ. ಭಾರತದಲ್ಲಿ ಸ್ರ್ತೀರೋಗ, ಹೆರಿಗೆ ಮತ್ತು ಪ್ರಸೂತಿ ವೈದ್ಯರ ಅಧಿಕೃತ ಅಂಗವಾಗಿರುವ ಫೆಡರೇಷನ್ ಆಫ್ ಆಬ್ಸ್​ಟೆಟ್ರಿಕ್ ಅಂಡ್ ಗೈನೆಕಾಲಿಜಿಕಲ್ ಸೊಸೈಟೀಸ್ ಆಫ್ ಇಂಡಿಯಾದ (ಎಫ್ಒಜಿಎಸ್ಐ) ಈ ಪುಸ್ತಕವನ್ನು ಪರಿಶೀಲನೆ ಮಾಡಿದೆ.

ಇದನ್ನೂ ಓದಿ: ಮತ್ತೆ ಹಿಂದೂಗಳ ಭಾವನೆಗೆ ಧಕ್ಕೆ ತಂದ ಸೈಫ್​ ಅಲಿ ಖಾನ್​; ಈ ಪೋಸ್ಟರ್​ನಲ್ಲಿ ಇರುವ ವಿವಾದ ಏನು?

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?