AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BC Patil: ‘ಕೆಲವು ತಪ್ಪು ನಿರ್ಧಾರಗಳಿಂದ ಹೊಡೆತ ಬಿದ್ದಿದೆ’; ಬಿಜೆಪಿ ಸೋಲಿಗೆ ಕಾರಣ ತಿಳಿಸಿದ ಬಿ.ಸಿ. ಪಾಟೀಲ್​

Karnataka Assembly Elections: ‘ಜನರ ತೀರ್ಮಾನಕ್ಕೆ ನಾನು ತಲೆಬಾಗುತ್ತೇನೆ. ನಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನಿಲ್ಲಬಾರದು. ಈಗಿನ ಶಾಸಕರು ಆ ಕಾರ್ಯ ಮುಂದುವರಿಸಿಕೊಂಡು ಹೋಗಲಿ’ ಎಂದು ಬಿ.ಸಿ. ಪಾಟೀಲ್​ ಹೇಳಿದ್ದಾರೆ.

BC Patil: ‘ಕೆಲವು ತಪ್ಪು ನಿರ್ಧಾರಗಳಿಂದ ಹೊಡೆತ ಬಿದ್ದಿದೆ’; ಬಿಜೆಪಿ ಸೋಲಿಗೆ ಕಾರಣ ತಿಳಿಸಿದ ಬಿ.ಸಿ. ಪಾಟೀಲ್​
ಬಿ.ಸಿ. ಪಾಟೀಲ್
ಮದನ್​ ಕುಮಾರ್​
|

Updated on: May 14, 2023 | 2:30 PM

Share

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Elections) ಬಿಜೆಪಿಗೆ ಸೋಲುಂಟಾಗಿದೆ. ಕೇವಲ 66 ಸ್ಥಾನಗಳನ್ನು ಗೆಲ್ಲುವಲ್ಲಿ ಭಾರತೀಯ ಜನತಾ ಪಾರ್ಟಿ ತೃಪ್ತಿಪಟ್ಟುಕೊಂಡಿದೆ. ಭಾರಿ ಭರವಸೆ ಹೊಂದಿದ್ದ ಘಟಾನುಘಟಿ ನಾಯಕರು ಕೂಡ ಸೋಲು ಕಂಡಿದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿ ಇದ್ದಾಗಿಯೂ ಕೂಡ ಬಿಜೆಪಿ (BJP) ಈ ರೀತಿ ಹಿನ್ನಡೆ ಅನುಭವಿಸುತ್ತದೆ ಎಂದು ಕಾರ್ಯಕರ್ತರು ನಿರೀಕ್ಷಿಸಿರಲಿಲ್ಲ. ಒಟ್ಟಿನಲ್ಲಿ ಬಿಜೆಪಿಗೆ ಈ ಸೋಲು ದೊಡ್ಡ ಆಘಾತ ನೀಡಿದೆ. ಈಗ ಸೋಲಿನ ಬಗ್ಗೆ ಅನೇಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ನಟ, ರಾಜಕಾರಣಿ ಬಿ.ಸಿ. ಪಾಟೀಲ್​ (BC Patil) ಕೂಡ ಈ ಬಗ್ಗೆ ಮಾತನಾಡಿದ್ದಾರೆ. ಹಿರೇಕೆರೂರಿನಲ್ಲಿ ಮಾತನಾಡಿದ ಅವರು ‘ಕೆಲವು ತಪ್ಪು ನಿರ್ಧಾರಗಳಿಂದ ಹೊಡೆತ ಬಿದ್ದಿವೆ’ ಎಂದಿದ್ದಾರೆ.

‘ಕಾಂಗ್ರೆಸ್​ನವರದ್ದು ಬೋಗಸ್​ ಗ್ಯಾರಂಟಿ ಅಂತ ನಂತರ ಗೊತ್ತಾಗತ್ತೆ’:

‘ಬಂಜಾರ ಸಮುದಾಯದವರು ದೊಡ್ಡ ಪ್ರತಿಭಟನೆ ಮಾಡಿದ್ದರು. ಸದಾಶಿವ ಆಯೋಗವನ್ನು ಜಾರಿಗೆ ತಂದಿದ್ದು ಹರಿಜನರಿಗೆ ಅನುಕೂಲ ಆಗಿದ್ದು ಅವರಿಗೆ ಅರ್ಥ ಆಗಲಿಲ್ಲ. ರೇಷನ್​ ಕಾರ್ಡ್​ಗೆ ಜನರು ಮರುಳಾದರು. ಕಾಂಗ್ರೆಸ್​ನವರು ಗ್ಯಾರಂಟಿ ಕಾರ್ಡ್​ ಪ್ರಿಂಟ್​ ಮಾಡಿ ಜನರ ಕೈಗೆ ನೀಡಿದರು. ಅದು ಬೋಗಸ್​ ಎಂಬುದು ಜನರಿಗೆ ಮುಂದೆ ಗೊತ್ತಾಗುತ್ತದೆ. ಆ ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಿಲ್ಲ. ಆಗ ನಾವು ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ’ ಎಂದು ಬಿಸಿ ಪಾಟೀಲ್​ ಹೇಳಿದ್ದಾರೆ.

ಇದನ್ನೂ ಓದಿ: ಮರು ಎಣಿಕೆ ಮಾಡಿದರಾದರೂ ಬಿಜೆಪಿ ಅಭ್ಯರ್ಥಿ ಕೋರ್ಟ್​ ಮೊರೆ: ಯಾವ ಕ್ಷೇತ್ರ? ಏನಾಯ್ತು? ಈ ಸ್ಟೋರಿ ನೋಡಿ

‘ಜನರು ನನಗೆ ಈ ಹಿಂದೆ ಆಶೀರ್ವಾದ ಮಾಡಿದ್ದರು. ಒಂದು ತೃಪ್ತಿ ಇದೆ. ನಾನು ಸೋತರೂ ಕೂಡ ತಾಲೂಕಿನ ಜನರ ಋಣ ತೀರಿಸಿದ್ದೇನೆ. ಎಲ್ಲ ಕೆರೆಗಳನ್ನು ತುಂಬಿಸುವಂತಹ ಯೋಜನೆಗಳನ್ನು ಮಾಡಿದ್ದೇವೆ. ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದೇವೆ. ಸಂಪೂರ್ಣ ಮೂಲಸೌಕರ್ಯವನ್ನು ಒದಗಿಸಿ ತಾಲೂಕಿಗೆ ಹೊಸ ರೂಪ ನೀಡಿದ್ದೇನೆ. ಮನುಷ್ಯನಿಗೆ ತೃಪ್ತಿ ಇರಬೇಕು. ನಾವು ಮಾಡಿದ ಕೆಲಸದ ಬಗ್ಗೆ ಅಪಪ್ರಚಾರ ಮಾಡಿದ್ದಕ್ಕೆ ಕೆಲವರು ಮತ ಹಾಕದೇ ಇರಬಹುದು. 69 ಸಾವಿರ ಜನರು ನನ್ನ ಪರವಾಗಿ ನಿಂತಿದ್ದಾರೆ. ನಾವು ಮಾಡಿದ ಅಭಿವೃದ್ಧಿಯನ್ನು ಈಗಿನ ಶಾಸಕರು ಮುಂದುವರಿಸಿಕೊಂಡು ಹೋಗಲಿ ಎಂಬುದು ನನ್ನ ಆಶಯ’ ಎಂದು ಬಿ.ಸಿ. ಪಾಟೀಲ್​ ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂದಿತ್ತು ಬಿಜೆಪಿ, ಈಗ ಅದೇ ದಕ್ಷಿಣ ಭಾರತದಿಂದ ಮುಕ್ತವಾಗಿದೆ: ಮಲ್ಲಿಕಾರ್ಜುನ ಖರ್ಗೆ

‘ಕ್ಷೇತ್ರದಲ್ಲಿ ಅಭಿವೃದ್ಧಿ ನಿಲ್ಲಬಾರದು. ಈಗಿನ ಶಾಸಕ ಯುಬಿ ಬಣಕಾರ್​ ಅವರಿಗೆ ಜನರು ಆಶೀರ್ವಾದ ಮಾಡಿದ್ದಾರೆ. ಅವರ ಪಕ್ಷ ಆಡಳಿತಕ್ಕೆ ಬಂದಿದೆ. ಅವರು ಎಲ್ಲ ಕೆಲಸವನ್ನು ಮುಂದುವರಿಸಿಕೊಂಡು ಹೋಗುತ್ತಾರೆ ಅಂತ ನಾನು ನಂಬಿದ್ದೇನೆ. ಜನರ ತೀರ್ಮಾನಕ್ಕೆ ನಾನು ತಲೆಬಾಗುತ್ತೇನೆ’ ಎಂದಿದ್ದಾರೆ ಬಿ.ಸಿ. ಪಾಟೀಲ್​.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ