AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BC Patil: ‘ಕೆಲವು ತಪ್ಪು ನಿರ್ಧಾರಗಳಿಂದ ಹೊಡೆತ ಬಿದ್ದಿದೆ’; ಬಿಜೆಪಿ ಸೋಲಿಗೆ ಕಾರಣ ತಿಳಿಸಿದ ಬಿ.ಸಿ. ಪಾಟೀಲ್​

Karnataka Assembly Elections: ‘ಜನರ ತೀರ್ಮಾನಕ್ಕೆ ನಾನು ತಲೆಬಾಗುತ್ತೇನೆ. ನಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನಿಲ್ಲಬಾರದು. ಈಗಿನ ಶಾಸಕರು ಆ ಕಾರ್ಯ ಮುಂದುವರಿಸಿಕೊಂಡು ಹೋಗಲಿ’ ಎಂದು ಬಿ.ಸಿ. ಪಾಟೀಲ್​ ಹೇಳಿದ್ದಾರೆ.

BC Patil: ‘ಕೆಲವು ತಪ್ಪು ನಿರ್ಧಾರಗಳಿಂದ ಹೊಡೆತ ಬಿದ್ದಿದೆ’; ಬಿಜೆಪಿ ಸೋಲಿಗೆ ಕಾರಣ ತಿಳಿಸಿದ ಬಿ.ಸಿ. ಪಾಟೀಲ್​
ಬಿ.ಸಿ. ಪಾಟೀಲ್
ಮದನ್​ ಕುಮಾರ್​
|

Updated on: May 14, 2023 | 2:30 PM

Share

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Elections) ಬಿಜೆಪಿಗೆ ಸೋಲುಂಟಾಗಿದೆ. ಕೇವಲ 66 ಸ್ಥಾನಗಳನ್ನು ಗೆಲ್ಲುವಲ್ಲಿ ಭಾರತೀಯ ಜನತಾ ಪಾರ್ಟಿ ತೃಪ್ತಿಪಟ್ಟುಕೊಂಡಿದೆ. ಭಾರಿ ಭರವಸೆ ಹೊಂದಿದ್ದ ಘಟಾನುಘಟಿ ನಾಯಕರು ಕೂಡ ಸೋಲು ಕಂಡಿದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿ ಇದ್ದಾಗಿಯೂ ಕೂಡ ಬಿಜೆಪಿ (BJP) ಈ ರೀತಿ ಹಿನ್ನಡೆ ಅನುಭವಿಸುತ್ತದೆ ಎಂದು ಕಾರ್ಯಕರ್ತರು ನಿರೀಕ್ಷಿಸಿರಲಿಲ್ಲ. ಒಟ್ಟಿನಲ್ಲಿ ಬಿಜೆಪಿಗೆ ಈ ಸೋಲು ದೊಡ್ಡ ಆಘಾತ ನೀಡಿದೆ. ಈಗ ಸೋಲಿನ ಬಗ್ಗೆ ಅನೇಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ನಟ, ರಾಜಕಾರಣಿ ಬಿ.ಸಿ. ಪಾಟೀಲ್​ (BC Patil) ಕೂಡ ಈ ಬಗ್ಗೆ ಮಾತನಾಡಿದ್ದಾರೆ. ಹಿರೇಕೆರೂರಿನಲ್ಲಿ ಮಾತನಾಡಿದ ಅವರು ‘ಕೆಲವು ತಪ್ಪು ನಿರ್ಧಾರಗಳಿಂದ ಹೊಡೆತ ಬಿದ್ದಿವೆ’ ಎಂದಿದ್ದಾರೆ.

‘ಕಾಂಗ್ರೆಸ್​ನವರದ್ದು ಬೋಗಸ್​ ಗ್ಯಾರಂಟಿ ಅಂತ ನಂತರ ಗೊತ್ತಾಗತ್ತೆ’:

‘ಬಂಜಾರ ಸಮುದಾಯದವರು ದೊಡ್ಡ ಪ್ರತಿಭಟನೆ ಮಾಡಿದ್ದರು. ಸದಾಶಿವ ಆಯೋಗವನ್ನು ಜಾರಿಗೆ ತಂದಿದ್ದು ಹರಿಜನರಿಗೆ ಅನುಕೂಲ ಆಗಿದ್ದು ಅವರಿಗೆ ಅರ್ಥ ಆಗಲಿಲ್ಲ. ರೇಷನ್​ ಕಾರ್ಡ್​ಗೆ ಜನರು ಮರುಳಾದರು. ಕಾಂಗ್ರೆಸ್​ನವರು ಗ್ಯಾರಂಟಿ ಕಾರ್ಡ್​ ಪ್ರಿಂಟ್​ ಮಾಡಿ ಜನರ ಕೈಗೆ ನೀಡಿದರು. ಅದು ಬೋಗಸ್​ ಎಂಬುದು ಜನರಿಗೆ ಮುಂದೆ ಗೊತ್ತಾಗುತ್ತದೆ. ಆ ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಿಲ್ಲ. ಆಗ ನಾವು ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ’ ಎಂದು ಬಿಸಿ ಪಾಟೀಲ್​ ಹೇಳಿದ್ದಾರೆ.

ಇದನ್ನೂ ಓದಿ: ಮರು ಎಣಿಕೆ ಮಾಡಿದರಾದರೂ ಬಿಜೆಪಿ ಅಭ್ಯರ್ಥಿ ಕೋರ್ಟ್​ ಮೊರೆ: ಯಾವ ಕ್ಷೇತ್ರ? ಏನಾಯ್ತು? ಈ ಸ್ಟೋರಿ ನೋಡಿ

‘ಜನರು ನನಗೆ ಈ ಹಿಂದೆ ಆಶೀರ್ವಾದ ಮಾಡಿದ್ದರು. ಒಂದು ತೃಪ್ತಿ ಇದೆ. ನಾನು ಸೋತರೂ ಕೂಡ ತಾಲೂಕಿನ ಜನರ ಋಣ ತೀರಿಸಿದ್ದೇನೆ. ಎಲ್ಲ ಕೆರೆಗಳನ್ನು ತುಂಬಿಸುವಂತಹ ಯೋಜನೆಗಳನ್ನು ಮಾಡಿದ್ದೇವೆ. ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದೇವೆ. ಸಂಪೂರ್ಣ ಮೂಲಸೌಕರ್ಯವನ್ನು ಒದಗಿಸಿ ತಾಲೂಕಿಗೆ ಹೊಸ ರೂಪ ನೀಡಿದ್ದೇನೆ. ಮನುಷ್ಯನಿಗೆ ತೃಪ್ತಿ ಇರಬೇಕು. ನಾವು ಮಾಡಿದ ಕೆಲಸದ ಬಗ್ಗೆ ಅಪಪ್ರಚಾರ ಮಾಡಿದ್ದಕ್ಕೆ ಕೆಲವರು ಮತ ಹಾಕದೇ ಇರಬಹುದು. 69 ಸಾವಿರ ಜನರು ನನ್ನ ಪರವಾಗಿ ನಿಂತಿದ್ದಾರೆ. ನಾವು ಮಾಡಿದ ಅಭಿವೃದ್ಧಿಯನ್ನು ಈಗಿನ ಶಾಸಕರು ಮುಂದುವರಿಸಿಕೊಂಡು ಹೋಗಲಿ ಎಂಬುದು ನನ್ನ ಆಶಯ’ ಎಂದು ಬಿ.ಸಿ. ಪಾಟೀಲ್​ ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂದಿತ್ತು ಬಿಜೆಪಿ, ಈಗ ಅದೇ ದಕ್ಷಿಣ ಭಾರತದಿಂದ ಮುಕ್ತವಾಗಿದೆ: ಮಲ್ಲಿಕಾರ್ಜುನ ಖರ್ಗೆ

‘ಕ್ಷೇತ್ರದಲ್ಲಿ ಅಭಿವೃದ್ಧಿ ನಿಲ್ಲಬಾರದು. ಈಗಿನ ಶಾಸಕ ಯುಬಿ ಬಣಕಾರ್​ ಅವರಿಗೆ ಜನರು ಆಶೀರ್ವಾದ ಮಾಡಿದ್ದಾರೆ. ಅವರ ಪಕ್ಷ ಆಡಳಿತಕ್ಕೆ ಬಂದಿದೆ. ಅವರು ಎಲ್ಲ ಕೆಲಸವನ್ನು ಮುಂದುವರಿಸಿಕೊಂಡು ಹೋಗುತ್ತಾರೆ ಅಂತ ನಾನು ನಂಬಿದ್ದೇನೆ. ಜನರ ತೀರ್ಮಾನಕ್ಕೆ ನಾನು ತಲೆಬಾಗುತ್ತೇನೆ’ ಎಂದಿದ್ದಾರೆ ಬಿ.ಸಿ. ಪಾಟೀಲ್​.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?