AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಮಲ್ಟಿಪ್ಲೆಕ್ಸ್-ಚಿತ್ರಮಂದಿರಕ್ಕೆ ಏಕ ರೂಪದ ದರ ನೀತಿ? ತಗ್ಗಲಿದೆ ಪಾಪ್​ಕಾರ್ನ್ ಬೆಲೆ

ಕನ್ನಡ ಚಿತ್ರರಂಗ ಕಲಾವಿದರ ನಟ್ಟು ಬೋಲ್ಟ್ ಟೈಟ್ ಮಾಡಬೇಕು ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ತಣ್ಣುಗಾಗುವ ಮೊದಲೇ ಪರಿಷತ್​ನಲ್ಲಿ ಸಿನಿಮಾ ರಂಗದ ಬಗ್ಗೆ ಮತ್ತೊಂದು ಬೆಳವಣಿಗೆ ಬಗ್ಗೆ ಚರ್ಚೆಯಾಗಿದೆ. ಮಲ್ಟಿಪ್ಲೆಕ್ಸ್​​, ಚಿತ್ರಮಂದಿರಕ್ಕೆ ಏಕ ರೂಪದ ದರ ನೀತಿ ಜಾರಿಗೆ ಸರ್ಕಾರ ಚಿಂತನೆ ನಡೆಸಿದೆ.

ಇನ್ಮುಂದೆ ಮಲ್ಟಿಪ್ಲೆಕ್ಸ್-ಚಿತ್ರಮಂದಿರಕ್ಕೆ ಏಕ ರೂಪದ ದರ ನೀತಿ? ತಗ್ಗಲಿದೆ ಪಾಪ್​ಕಾರ್ನ್ ಬೆಲೆ
ಮಲ್ಟಿಪ್ಲೆಕ್ಸ್
Anil Kalkere
| Edited By: |

Updated on:Mar 07, 2025 | 8:50 AM

Share

ಸಿಂಗಲ್​ಸ್ಕ್ರೀನ್ ಹಾಗೂ ಮಲ್ಟಿಪ್ಲೆಕ್ಸ್ ಟಿಕೆಟ್​ ದರದಲ್ಲಿ (Cinema Ticket Price) ಭಾರೀ ವ್ಯತ್ಯಾಸ ಇದೆ. ಅದರಲ್ಲೂ ಪರಭಾಷೆಯ ಸಿನಿಮಾಗಳು ಬಂದರೆ ಮಲ್ಟಿಪ್ಲೆಕ್ಸ್​ಗಳು ಜನರಿಂದ ದೊಡ್ಡ ಮೊತ್ತದ ಹಣವನ್ನು ಲೂಟಿ ಮಾಡುತ್ತಾರೆ. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳುವ ಸೂಚನೆ ಕೊಟ್ಟಿದೆ. ಮಲ್ಟಿಪ್ಲೆಕ್ಸ್ ಹಾಗೂ ಸಿಂಗಲ್​ ಸ್ಕ್ರೀನ್ ಥಿಯೇಟರ್​ಗೆ ಒಂದೇ ರೀತಿಯ ದರ ನಿಗದಿ ಮಾಡುವ ಬಗ್ಗೆ ಆಲೋಚನೆ ಮಾಡಿದೆ. ಪರಿಷತ್ ಕಲಾಪದಲ್ಲಿ ಈ ಬಗ್ಗೆ ಚರ್ಚೆ ಆಗಿದ್ದು, ಸರ್ಕಾರದ ಕಡೆಯಿಂದ ಪ್ರತಿಕ್ರಿಯೆ ಬಂದಿದೆ.

ಪರಿಷತ್ ಕಲಾಪದಲ್ಲಿ ಎಂಎಲ್​ಸಿ ಗೋವಿಂದ ರಾಜು ಏಕ ರೂಪದ ದರ ವಿಚಾರವನ್ನು ಸರ್ಕಾರದ ಮುಂದೆ ಪ್ರಸ್ತಾಪ ಮಾಡಿದರು. ‘ಚಿತ್ರ ಮಂದಿರಗಳಲ್ಲಿ ಒಂದೊಂದು ಸಿನಿಮಾಗೆ ಒಂದೊಂದು ದರ ನಿಗದಿ ಮಾಡಲಾಗುತ್ತಿದೆ. ಕನ್ನಡ ಸಿನಿಮಾಗೆ ಒಂದು ದರ, ಅನ್ಯಭಾಷೆ ಸಿನಿಮಾಗೆ ಇನ್ನೊಂದು ದರ ನಿಗದಿ ಮಾಡಲಾಗುತ್ತಿದೆ. ಕನ್ನಡಕ್ಕೆ ಬಹಳ ಕಡಿಮೆ, ಆದರೆ ಬೇರೆ ಭಾಷೆಯ ಚಿತ್ರಗಳಿಗೆ 500 ರೂಪಾಯಿಯಿಂದ 1000 ರೂಪಾಯಿವರೆಗೆ ವಸೂಲಿ ಮಾಡುತ್ತಾರೆ. ಸರ್ಕಾರದ ಪರಿಮಿತಿಯಲ್ಲೇ ದರ ನಿಯಂತ್ರಣ ಇದ್ದರೂ ನಿಯಂತ್ರಣ ಮಾಡುತ್ತಿಲ್ಲ’ ಎಂದು ಅಸಮಾಧಾನ ಹೊರಹಾಕಿದರು.

2017ರ ಬಜೆಟ್​ನಲ್ಲಿ ಸಿದ್ದರಾಮಯ್ಯ ಅವರು 200 ರೂಪಾಯಿ ದರ ನಿಗದಿ ಮಾಡುತ್ತೇವೆ ಎಂದಿದ್ದರು.  ಅದೂ ಜಾರಿಗೆ ಬಂದಿಲ್ಲ. ಇದಕ್ಕೆ ಗೃಹ ಸಚಿವ ಪರಮೇಶ್ವರ್ ಉತ್ತರಿಸಿದ್ದಾರೆ. ‘ಚಿತ್ರ ಮಂದಿರದಲ್ಲಿ ಮಾಲೀಕರೇ ಟಿಕೆಟ್ ದರ ನಿಗದಿ ಮಾಡುವ ಪದ್ಧತಿ ಇದೆ. ಸಿದ್ದರಾಮಯ್ಯ 2017ರ ಬಜೆಟ್​ನಲ್ಲಿ ಏಕರೂಪ ದರ ಪ್ರಸ್ತಾಪ ಮಾಡಿ ಆದೇಶ ಜಾರಿ ಮಾಡಿದ್ದರು. ನೀವು ಹೇಳಿದಂತೆ 200 ರೂಪಾಯಿ ದರ ನಿಗದಿ ಮಾಡಲಾಗಿತ್ತು. ಆದೇಶ ಮಾಡಿದ ಮೇಲೆ ಥಿಯೇಟರ್ ಮಾಲೀಕರು ಸ್ಟೇ ತಂದಿದ್ದಾರೆ. ಸ್ಟೇ ತಂದ ಮೇಲೆ ಸರ್ಕಾರ ಆ ಆದೇಶವನ್ನು ವಾಪಸ್ ಪಡೆದಿದೆ’ ಎಂದರು ಪರಮೇಶ್ವರ್.

ಇದನ್ನೂ ಓದಿ
Image
ಒಂದೇ ವಾರಕ್ಕೆ ಬೇರೆ ಭಾಷೆಗೆ ರಿಮೇಕ್ ಆಯ್ತು ಸೂಪರ್ ಹಿಟ್ ಧಾರಾವಾಹಿ
Image
ಮೇಕಿಂಗ್ ಮೂಲಕ ಗಮನ ಸೆಳೆದ ನಾ ನಿನ್ನ ಬಿಡಲಾರೆ ಧಾರಾವಾಹಿ; ಸಿನಿಮಾ ಗುಣಮಟ್ಟ
Image
ಸುದೀಪ್ ‘ಬಿಗ್ ಬಾಸ್’ ಕಂಬ್ಯಾಕ್​ಗೆ ಸಿಕ್ತು ಭರ್ಜರಿ ಟಿಆರ್​ಪಿ
Image
ಅಪಘಾತದಲ್ಲಿ ಸ್ನೇಹಾ ಮರಣ; ಕೊನೆ ಆಯಿತು ಸಂಜನಾ ಬುರ್ಲಿ ಪಾತ್ರ

ಇದನ್ನೂ ಓದಿ: ‘ಸಿಂಗಂ ಅಗೇನ್’ ಚಿತ್ರಕ್ಕೆ ಮಲ್ಟಿಪ್ಲೆಕ್ಸ್​ನಲ್ಲಿ ಸಿಂಹಪಾಲು; ಉಳಿದ ಸಿನಿಮಾಗಳಿಗೆ ಸಂಕಷ್ಟ

‘ಕೇವಲ ಸಿನಿಮಾ ಟಿಕೆಟ್ ದರ ಮಾತ್ರವಲ್ಲದೆ, ವೀಕ್ಷಣೆಗೆ ತೆರಳಿದ ವೇಳೆ ಪಾಪ್ ಕಾರ್ನ್, ವಾಟರ್ ಬಾಟಲ್​ಗೂ ನೂರಿನ್ನೂರು ರೂಪಾಯಿ ದರ ವಿಧಿಸಿ ತೊಂದರೆ ಕೊಡ್ತಾರೆ. ಇಷ್ಟ ಬಂದ ರೇಟ್​ನಲ್ಲಿ ಮಾರಾಟ ಮಾಡ್ತಿರೋದ್ರಿಂದ ಗ್ರಾಹಕರಿಗೆ ಸಮಸ್ಯೆ ಆಗ್ತಿದೆ’ ಎಂದು ಗೋವಿಂದ ರಾಜು ಹೇಳಿದರು. ಆಗ ಪ್ರತಿಕ್ರಿಯಿಸಿದ ಡಾ.ಜಿ ಪರಮೇಶ್ವರ್, ‘ಅದನ್ನು ರೆಗ್ಯುಲೇಟ್ ಮಾಡಲು ಕ್ರಮ ಕೈಗೊಳ್ಳುತ್ತೇವೆ’ ಎಂದು ಭರವಸೆ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:32 am, Fri, 7 March 25

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?