AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಶೃತಿ ಹರಿಹರನ್ ಕೇಸ್: ಪ್ರಶಾಂತ್ ಸಂಬರಗಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್

ಬಹುಭಾಷಾ ನಟಿ ಶೃತಿ ಹರಿಹರನ್ ದಾಖಲಿಸಿದ್ದ ಕೇಸ್​ಗೆ ಸಂಬಂಧಿಸಿದಂತೆ ಪ್ರಶಾಂತ್ ಸಂಬರಗಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ನಟಿ ಶೃತಿ ಹರಿಹರನ್ ಕೇಸ್: ಪ್ರಶಾಂತ್ ಸಂಬರಗಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್
ಪ್ರಶಾಂತ್ ಸಂಬರಗಿ, ನಟಿ ಶೃತಿ ಹರಿಹರನ್
TV9 Web
| Edited By: |

Updated on: Dec 16, 2022 | 5:36 PM

Share

ಬಿಗ್​ಬಾಸ್ (Bigg Boss) ಖ್ಯಾತಿಯ ಪ್ರಶಾಂತ್ ಸಂಬರಗಿ (Prashant Sambargi) ವಿರುದ್ಧ ಬಹುಭಾಷಾ ನಟಿ ಶೃತಿ ಹರಿಹರನ್ (Shruti Hariharan) ದಾಖಲಿಸಿದ್ದ ಪ್ರಕರಣಕ್ಕೆ ಹೈಕೋರ್ಟ್ (High court) ತಡೆ ನೀಡಿದೆ. ಮಿ ಟೂ ವಿವಾದದ ವೇಳೆ ಅವಹೇಳನಕಾರಿ ಹೇಳಿಕೆ. ಮಹಿಳೆಯ ಮಾನಹಾನಿ, ಬೆದರಿಕೆ ಸಂಬಂಧ ಶೃತಿ ಹರಿಹರನ್ ಅವರು ಪ್ರಶಾಂತ್ ಸಂಬರಗಿ ದೂರು ದೂರು ನೀಡಿದ್ದರು. ಈ ಪ್ರಕರಣವನ್ನು ಪ್ರಶ್ನಿಸಿ ಪ್ರಶಾಂತ್‌ ಸಂಬರಗಿ ಅವರು ಹೈಕೋರ್ಟ್‌ಗೆ ಅರ್ಜಿ ಅಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಏಕಸದಸ್ಯ ಪೀಠ ಹೈಕೋರ್ಟ್, ಇಂದು(ಡಿಸೆಂಬರ್ 16) ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: KGF 2 ಹಾಡಿನ ದುರ್ಬಳಕೆ ಆರೋಪ: ರಾಹುಲ್ ಗಾಂಧಿಗೆ ಬಿಗ್​ ರಿಲೀಫ್​ ನೀಡಿದ ಕರ್ನಾಟಕ ಹೈಕೋರ್ಟ್

ವಿಸ್ಮಯ ಸಿನಿಮಾ ಶೂಟಿಂಗ್ ವೇಳೆ ತಮ್ಮ ಮೇಲೆ ಲೈಂಗಿಕ ಕಿರುಕುಳ ಮಾಡಲಾಗಿದೆ ಎಂದು ಹೆಸರಾಂತ ನಟರೊಬ್ಬರ ಮೇಲೆ ನಟಿ ಶ್ರುತಿ ಹರಿಹರನ್ ಆರೋಪ ಮಾಡಿದ್ದರು. ಈ ಆರೋಪಕ್ಕೆ ಸಂಬಂಧಿಸಿದಂತೆ ನಟನ ಪರವಾಗಿ ಪ್ರಶಾಂತ್ ಸಂಬರಗಿ ನಾನಾ ಹೇಳಿಕೆಗಳನ್ನು ನೀಡಿದ್ದರು. ಮಾಧ್ಯಮಗಳ ಜೊತೆ ಈ ಪ್ರಕರಣದ ಬಗ್ಗೆ ಮಾತನಾಡುವಾಗ ಪ್ರಶಾಂತ್ ಸಂಬರಗಿ ತಮ್ಮ ಚಾರಿತ್ರ್ಯ ಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಟಿ ಶ್ರುತಿ ಹರಿಹರನ್ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್ , ಪ್ರಶಾಂತ್ ಸಂಬರಗಿಗೆ ಸಮನ್ಸ್​ ನೀಡಿತ್ತು.

ಇದನ್ನೂ ಓದಿ: ಬೆಂಗಳೂರು ಡ್ರಗ್ಸ್​ ಕೇಸ್: ನಟಿ ರಕುಲ್ ಪ್ರೀತ್ ಸಿಂಗ್, ಟಿಆರ್​ಎಸ್ ಶಾಸಕ ರೋಹಿತ್ ರೆಡ್ಡಿಗೆ ಇಡಿ ನೋಟಿಸ್

ಇನ್ನು ಈ ಪ್ರಕರಣವನ್ನು ರದ್ದು ಕೋರಿ ಪ್ರಶಾಂತ್ ಸಂಬರಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಪೀಠ, ಸಂಬರಗಿ ವಿರುದ್ಧ ಪ್ರಕರಣಕ್ಕೆ ಮುಂದಿನ ವಿಚಾರಣೆವರೆಗೂ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಈ ವಿಚಾರಣೆಯನ್ನು 2023ರ ಫೆಬ್ರುವರಿ 1ಕ್ಕೆ ಮುಂದೂಡಿದೆ. ಅಲ್ಲದೇ ಈ ಬಗ್ಗೆ ಹೈಕೋರ್ಟ್, ನಟಿ ಶೃತಿ ಹರಿಹರನ್​ಗೆ ನೋಟಿಸ್ ಸಹ ನೀಡಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!