AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪದ್ಮಾವತ್​ ಸಿನಿಮಾಗಾದ ಗತಿಯೇ ನಿಮಗೂ ಆಗುತ್ತದೆ’; ಚಿತ್ರದ ಟೈಟಲ್​ ಬದಲಿಸಲು ಅಕ್ಷಯ್​ ಕುಮಾರ್​ಗೆ ಬಂತು ಬೆದರಿಕೆ

ಪೃಥ್ವಿರಾಜ್ ಚೌಹಾಣ್​​ ಅವರ ಜೀವನ ಆಧರಿಸಿ ಯಶ್​ ರಾಜ್​ ಫಿಲ್ಮ್ಸ್ ನಿರ್ಮಾಣ ಸಂಸ್ಥೆ​ ಸಿನಿಮಾ ಮಾಡುತ್ತಿದೆ. ಈ ಚಿತ್ರದಲ್ಲಿ ಅಕ್ಷಯ್​ ಕುಮಾರ್​ ಪೃಥ್ವಿರಾಜ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

‘ಪದ್ಮಾವತ್​ ಸಿನಿಮಾಗಾದ ಗತಿಯೇ ನಿಮಗೂ ಆಗುತ್ತದೆ’; ಚಿತ್ರದ ಟೈಟಲ್​ ಬದಲಿಸಲು ಅಕ್ಷಯ್​ ಕುಮಾರ್​ಗೆ ಬಂತು ಬೆದರಿಕೆ
ಅಕ್ಷಯ್​ ಕುಮಾರ್​
ರಾಜೇಶ್ ದುಗ್ಗುಮನೆ
|

Updated on:May 31, 2021 | 10:10 PM

Share

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಪದ್ಮಾವತ್’​ ಸಿನಿಮಾ ತೆರೆಕಾಣವುದಕ್ಕೆ ಕರಣಿ ಸೇನಾದವರು ಸಾಕಷ್ಟು ಅಡಚಣೆ ಉಂಟು ಮಾಡಿದ್ದರು. ಸಿನಿಮಾದಲ್ಲಿ ಇಲ್ಲ ಸಲ್ಲದ್ದನ್ನು ತೋರಿಸಲಾಗಿದೆ ಎಂದು ಆರೋಪಿಸಿ ‘ಪದ್ಮವತಿ’ ಎಂದಿದ್ದ ಸಿನಿಮಾ ಹೆಸರನ್ನು ‘ಪದ್ಮಾವತ್’​ ಎಂದು ಬದಲಾಯಿಸಿದ್ದರು. ಅಷ್ಟೇ ಅಲ್ಲ, ನಾಲ್ಕೈದು ರಾಜ್ಯಗಳಲ್ಲಿ ಸಿನಿಮಾ ತೆರೆಕಾಣದೆ ಇರಲು ಕಾರಣರಾಗಿದ್ದರು. ಈಗ ಅಕ್ಷಯ್​ ಕುಮಾರ್​ ನಟನೆಯ ‘ಪೃಥ್ವಿರಾಜ್’​ ಸಿನಿಮಾದ ಮೇಲೆ ಕರಣಿ ಸೇನಾ ಕಣ್ಣು ಬಿದ್ದಿದೆ. ಷರತ್ತಿಗೆ ಒಪ್ಪದಿದ್ದರೆ ‘ಪದ್ಮಾವತ್​’ ಸಿನಿಮಾಗಾದ ಗತಿಯೇ ನಿಮಗೂ ಆಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ.

ಪೃಥ್ವಿರಾಜ್ ಚೌಹಾಣ್​​ ಅವರ ಜೀವನ ಆಧರಿಸಿ ಯಶ್​ ರಾಜ್​ ಫಿಲ್ಮ್ಸ್ ನಿರ್ಮಾಣ ಸಂಸ್ಥೆ​ ಸಿನಿಮಾ ಮಾಡುತ್ತಿದೆ. ಈ ಚಿತ್ರದಲ್ಲಿ ಅಕ್ಷಯ್​ ಕುಮಾರ್​ ಪೃಥ್ವಿರಾಜ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮಾಡೆಲ್​ ಮಾನುಷಿ ಚಿಲ್ಲರ್​ ಅವರು ಸನ್ಯೋಗಿತಾ ಪಾತ್ರ ನಿರ್ವಹಿಸುತ್ತಿದ್ದು, ಈ ಚಿತ್ರದ ಮೂಲಕ ಅವರು ಸಿನಿಮಾ ರಂಗಕ್ಕೆ ಕಾಲಿಡುತ್ತಿದ್ದಾರೆ. ಈಗ ಸಿನಿಮಾ ಟೈಟಲ್​ ಬದಲಿಸುವಂತೆ ಕರಣಿ ಸೇನಾದವರು ಪಟ್ಟು ಹಿಡಿದಿದ್ದಾರೆ. ಮೂರು ಷರತ್ತುಗಳನ್ನು ವಿಧಿಸಿರುವ ಅವರು, ಇದಕ್ಕೆ ಒಪ್ಪಲೇ ಬೇಕು ಎಂದು ಹೇಳಿದ್ದಾರೆ.

ಸಿನಿಮಾ ಬಗ್ಗೆ ಇರುವ ಷರತ್ತುಗಳೇನು ಎಂಬುದನ್ನು ಕರಣಿ ಸೇನಾ ಸ್ಪಷ್ಟವಾಗಿ ಹೇಳಿದೆ. ಷರತ್ತು ಒಂದು, ಈ ಚಿತ್ರ ತೆರೆಕಾಣುವುದಕ್ಕೂ ಮೊದಲು ಅದನ್ನು ನಮಗೆ ತೋರಿಸಬೇಕು. ಎರಡು, ಈ ಸಿನಿಮಾವನ್ನು ರಜಪೂತ್​​ ಸಮಾಜದವರಿಗೂ ಪ್ರದರ್ಶಿಸಬೇಕು. ಮೂರನೇ ಷರತ್ತು, ಸಿನಿಮಾದ ಶೀರ್ಷಿಕೆಯನ್ನು, ‘ವೀರ ಯೋಧ ಸಾಮ್ರಾಟ್​ ಪೃಥ್ವಿರಾಜ್ ಚೌಹಾಣ್’​ ಎಂಬುದಾಗಿ ಬದಲಾಯಿಸಬೇಕು ಎನ್ನುವ ಆಗ್ರಹ ಇಟ್ಟಿದ್ದಾರೆ.

2019ರಲ್ಲಿ ಅಕ್ಷಯ್​ ಕುಮಾರ್​ ಈ ಸಿನಿಮಾವನ್ನು ಘೋಷಿಸಿದ್ದರು. 2020ರ ದೀಪಾವಳಿಗೆ ಸಿನಿಮಾ ತೆರೆಕಾಣಬೇಕಿತ್ತು. ಆದರೆ, ಕೊವಿಡ್​ ಕಾರಣದಿಂದ ಚಿತ್ರದ ಕೆಲಸಗಳು ವಿಳಂಬವಾಗಿದ್ದವು. ಸಿನಿಮಾದ ರಿಲೀಸ್​ ದಿನಾಂಕವನ್ನು ಚಿತ್ರತಂಡ ಇನ್ನಷ್ಟೇ ಘೋಷಣೆ ಮಾಡಬೇಕಿದೆ.

ಇದನ್ನೂ ಓದಿ: Akshay Kumar: ಅಕ್ಷಯ್​ ಕುಮಾರ್​ ಕಡೆಯಿಂದ ದೊರಕಿತು ಮತ್ತೊಂದು ದೊಡ್ಡ ಸಹಾಯ

Published On - 9:03 pm, Mon, 31 May 21

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ