AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪದ್ಮಾವತ್​ ಸಿನಿಮಾಗಾದ ಗತಿಯೇ ನಿಮಗೂ ಆಗುತ್ತದೆ’; ಚಿತ್ರದ ಟೈಟಲ್​ ಬದಲಿಸಲು ಅಕ್ಷಯ್​ ಕುಮಾರ್​ಗೆ ಬಂತು ಬೆದರಿಕೆ

ಪೃಥ್ವಿರಾಜ್ ಚೌಹಾಣ್​​ ಅವರ ಜೀವನ ಆಧರಿಸಿ ಯಶ್​ ರಾಜ್​ ಫಿಲ್ಮ್ಸ್ ನಿರ್ಮಾಣ ಸಂಸ್ಥೆ​ ಸಿನಿಮಾ ಮಾಡುತ್ತಿದೆ. ಈ ಚಿತ್ರದಲ್ಲಿ ಅಕ್ಷಯ್​ ಕುಮಾರ್​ ಪೃಥ್ವಿರಾಜ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

‘ಪದ್ಮಾವತ್​ ಸಿನಿಮಾಗಾದ ಗತಿಯೇ ನಿಮಗೂ ಆಗುತ್ತದೆ’; ಚಿತ್ರದ ಟೈಟಲ್​ ಬದಲಿಸಲು ಅಕ್ಷಯ್​ ಕುಮಾರ್​ಗೆ ಬಂತು ಬೆದರಿಕೆ
ಅಕ್ಷಯ್​ ಕುಮಾರ್​
ರಾಜೇಶ್ ದುಗ್ಗುಮನೆ
|

Updated on:May 31, 2021 | 10:10 PM

Share

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಪದ್ಮಾವತ್’​ ಸಿನಿಮಾ ತೆರೆಕಾಣವುದಕ್ಕೆ ಕರಣಿ ಸೇನಾದವರು ಸಾಕಷ್ಟು ಅಡಚಣೆ ಉಂಟು ಮಾಡಿದ್ದರು. ಸಿನಿಮಾದಲ್ಲಿ ಇಲ್ಲ ಸಲ್ಲದ್ದನ್ನು ತೋರಿಸಲಾಗಿದೆ ಎಂದು ಆರೋಪಿಸಿ ‘ಪದ್ಮವತಿ’ ಎಂದಿದ್ದ ಸಿನಿಮಾ ಹೆಸರನ್ನು ‘ಪದ್ಮಾವತ್’​ ಎಂದು ಬದಲಾಯಿಸಿದ್ದರು. ಅಷ್ಟೇ ಅಲ್ಲ, ನಾಲ್ಕೈದು ರಾಜ್ಯಗಳಲ್ಲಿ ಸಿನಿಮಾ ತೆರೆಕಾಣದೆ ಇರಲು ಕಾರಣರಾಗಿದ್ದರು. ಈಗ ಅಕ್ಷಯ್​ ಕುಮಾರ್​ ನಟನೆಯ ‘ಪೃಥ್ವಿರಾಜ್’​ ಸಿನಿಮಾದ ಮೇಲೆ ಕರಣಿ ಸೇನಾ ಕಣ್ಣು ಬಿದ್ದಿದೆ. ಷರತ್ತಿಗೆ ಒಪ್ಪದಿದ್ದರೆ ‘ಪದ್ಮಾವತ್​’ ಸಿನಿಮಾಗಾದ ಗತಿಯೇ ನಿಮಗೂ ಆಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ.

ಪೃಥ್ವಿರಾಜ್ ಚೌಹಾಣ್​​ ಅವರ ಜೀವನ ಆಧರಿಸಿ ಯಶ್​ ರಾಜ್​ ಫಿಲ್ಮ್ಸ್ ನಿರ್ಮಾಣ ಸಂಸ್ಥೆ​ ಸಿನಿಮಾ ಮಾಡುತ್ತಿದೆ. ಈ ಚಿತ್ರದಲ್ಲಿ ಅಕ್ಷಯ್​ ಕುಮಾರ್​ ಪೃಥ್ವಿರಾಜ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮಾಡೆಲ್​ ಮಾನುಷಿ ಚಿಲ್ಲರ್​ ಅವರು ಸನ್ಯೋಗಿತಾ ಪಾತ್ರ ನಿರ್ವಹಿಸುತ್ತಿದ್ದು, ಈ ಚಿತ್ರದ ಮೂಲಕ ಅವರು ಸಿನಿಮಾ ರಂಗಕ್ಕೆ ಕಾಲಿಡುತ್ತಿದ್ದಾರೆ. ಈಗ ಸಿನಿಮಾ ಟೈಟಲ್​ ಬದಲಿಸುವಂತೆ ಕರಣಿ ಸೇನಾದವರು ಪಟ್ಟು ಹಿಡಿದಿದ್ದಾರೆ. ಮೂರು ಷರತ್ತುಗಳನ್ನು ವಿಧಿಸಿರುವ ಅವರು, ಇದಕ್ಕೆ ಒಪ್ಪಲೇ ಬೇಕು ಎಂದು ಹೇಳಿದ್ದಾರೆ.

ಸಿನಿಮಾ ಬಗ್ಗೆ ಇರುವ ಷರತ್ತುಗಳೇನು ಎಂಬುದನ್ನು ಕರಣಿ ಸೇನಾ ಸ್ಪಷ್ಟವಾಗಿ ಹೇಳಿದೆ. ಷರತ್ತು ಒಂದು, ಈ ಚಿತ್ರ ತೆರೆಕಾಣುವುದಕ್ಕೂ ಮೊದಲು ಅದನ್ನು ನಮಗೆ ತೋರಿಸಬೇಕು. ಎರಡು, ಈ ಸಿನಿಮಾವನ್ನು ರಜಪೂತ್​​ ಸಮಾಜದವರಿಗೂ ಪ್ರದರ್ಶಿಸಬೇಕು. ಮೂರನೇ ಷರತ್ತು, ಸಿನಿಮಾದ ಶೀರ್ಷಿಕೆಯನ್ನು, ‘ವೀರ ಯೋಧ ಸಾಮ್ರಾಟ್​ ಪೃಥ್ವಿರಾಜ್ ಚೌಹಾಣ್’​ ಎಂಬುದಾಗಿ ಬದಲಾಯಿಸಬೇಕು ಎನ್ನುವ ಆಗ್ರಹ ಇಟ್ಟಿದ್ದಾರೆ.

2019ರಲ್ಲಿ ಅಕ್ಷಯ್​ ಕುಮಾರ್​ ಈ ಸಿನಿಮಾವನ್ನು ಘೋಷಿಸಿದ್ದರು. 2020ರ ದೀಪಾವಳಿಗೆ ಸಿನಿಮಾ ತೆರೆಕಾಣಬೇಕಿತ್ತು. ಆದರೆ, ಕೊವಿಡ್​ ಕಾರಣದಿಂದ ಚಿತ್ರದ ಕೆಲಸಗಳು ವಿಳಂಬವಾಗಿದ್ದವು. ಸಿನಿಮಾದ ರಿಲೀಸ್​ ದಿನಾಂಕವನ್ನು ಚಿತ್ರತಂಡ ಇನ್ನಷ್ಟೇ ಘೋಷಣೆ ಮಾಡಬೇಕಿದೆ.

ಇದನ್ನೂ ಓದಿ: Akshay Kumar: ಅಕ್ಷಯ್​ ಕುಮಾರ್​ ಕಡೆಯಿಂದ ದೊರಕಿತು ಮತ್ತೊಂದು ದೊಡ್ಡ ಸಹಾಯ

Published On - 9:03 pm, Mon, 31 May 21

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ