AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ್​ ಆರ್ಯನ್​ಗೆ ಬರುತ್ತಿಲ್ಲ ಸಿನಿಮಾ ಆಫರ್​; ಕರಣ್​ ಜೋಹರ್​ ಜತೆಗಿನ ವೈಷಮ್ಯವೇ ಮುಳುವಾಯ್ತಾ?

ಕರಣ್​ ಜೋಹರ್​ ನಿರ್ಮಾಣದ ‘ದೋಸ್ತಾನಾ 2’ ಸಿನಿಮಾದಲ್ಲಿ ಕಾರ್ತಿಕ್​ ನಟಿಸಬೇಕಿತ್ತು. ಆದರೆ, ಕೊನೆ ಕ್ಷಣದಲ್ಲಿ ಕರಣ್​ ಹಾಗೂ ಕಾರ್ತಿಕ್​ ನಡುವೆ ಉಂಟಾದ ಸಣ್ಣ ಕಿರಿಕ್​ನಿಂದ ಕಾರ್ತಿಕ್​ ಹೊರ ನಡೆದಿದ್ದರು.

ಕಾರ್ತಿಕ್​ ಆರ್ಯನ್​ಗೆ ಬರುತ್ತಿಲ್ಲ ಸಿನಿಮಾ ಆಫರ್​; ಕರಣ್​ ಜೋಹರ್​ ಜತೆಗಿನ ವೈಷಮ್ಯವೇ ಮುಳುವಾಯ್ತಾ?
ಕಾರ್ತಿಕ್​ ಆರ್ಯನ್​
ರಾಜೇಶ್ ದುಗ್ಗುಮನೆ
| Edited By: |

Updated on: Jun 21, 2021 | 3:26 PM

Share

ಬಾಲಿವುಡ್​ ಇಂಡಸ್ಟ್ರಿ ಉಳಿದ ಸಿನಿಮಾ ಇಂಡಸ್ಟ್ರಿಗಿಂತ ಕೊಂಚ ಭಿನ್ನವೇ. ಕನ್ನಡ ಸೇರಿದಂತೆ ದಕ್ಷಿಣದ ಬಹುತೇಕ ಸಿನಿಮಾ ಇಂಡಸ್ಟ್ರಿಗಳಲ್ಲಿ ಯಾವುದೇ ಹಿನ್ನೆಲೆ ಇಲ್ಲದೆ ಬಂದು ಸ್ಟಾರ್​ ಆಗಿ ಮೆರೆದ ಸಾಕಷ್ಟು ನಟರಿದ್ದಾರೆ. ಬಾಲಿವುಡ್​ನಲ್ಲೂ ಈ ರೀತಿ ಇಲ್ಲವೆಂದಲ್ಲ. ಆದರೆ, ಉಳಿದುಕೊಂಡವರು ಬೆರಳೆಣಿಕೆ ಮಂದಿ ಮಾತ್ರ. ಬಾಲಿವುಡ್​ನ ದೊಡ್ಡ ತಲೆಗಳಿಂದಾಗಿ ಸುಶಾಂತ್ ಸಿಂಗ್​ ರಜಪೂತ್​​ ಮೃತಪಟ್ಟರು ಎನ್ನುವ ಮಾತಿದೆ. ಈಗ ಕಾರ್ತಿಕ್​ ಆರ್ಯನ್​ಗೂ ಸೈಡ್​ಲೈನ್​ ಆಗುವ ಭಯ ಕಾಡುತ್ತಿದೆ.

ಕಾರ್ತಿಕ್​ ಆರ್ಯನ್​ ಯಾವುದೇ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಬಂದವರು. ಆದಾಗ್ಯೂ ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗಿದೆ. ಕರಣ್​ ಜೋಹರ್​ ನಿರ್ಮಾಣದ ‘ದೋಸ್ತಾನಾ 2’ ಸಿನಿಮಾದಲ್ಲಿ ಕಾರ್ತಿಕ್​ ನಟಿಸಬೇಕಿತ್ತು. ಆದರೆ, ಕೊನೆ ಕ್ಷಣದಲ್ಲಿ ಕರಣ್​ ಹಾಗೂ ಕಾರ್ತಿಕ್​ ನಡುವೆ ಉಂಟಾದ ಸಣ್ಣ ಕಿರಿಕ್​ನಿಂದ ಕಾರ್ತಿಕ್​ ಹೊರ ನಡೆದಿದ್ದರು. ಇದಾದ ನಂತರದಲ್ಲಿ ಕಾರ್ತಿಕ್​ಗೆ ಅದೃಷ್ಟ ಕೈ ಕೊಟ್ಟಿದೆ.

ಶಾರುಖ್​ ಖಾನ್​ ನಿರ್ಮಾಣ ಸಂಸ್ಥೆ ರೆಡ್​ ಚಿಲ್ಲೀಸ್​ ಅಡಿಯಲ್ಲಿ ಸಿದ್ಧವಾಗುತ್ತಿದ್ದ ಸಿನಿಮಾದಲ್ಲಿ ಕಾರ್ತಿಕ್​ ನಟಿಸಬೇಕಿತ್ತು. ಆದರೆ, ಅಲ್ಲಿಂದ ಅವರಿಗೆ ಗೇಟ್​ ಪಾಸ್​ ನೀಡಲಾಯಿತು. ಈಗ ಅವರ ಕೈನಲ್ಲಿ ‘ಧಮಾಕಾ’ ಹಾಗೂ ‘ಭೂಲ್​ ಭುಲಯ್ಯಾ 2’ ಸಿನಿಮಾ ಬಿಟ್ಟು ಮತ್ತಾವುದೇ ಚಿತ್ರಗಳಿಲ್ಲ. ಮೂಲಗಳ ಪ್ರಕಾರ ಕಾರ್ತಿಕ್​ಗೆ ಯಾವುದೇ ದೊಡ್ಡ ಮಟ್ಟದ ಆಫರ್​ಗಳು ಕೂಡ ಬರುತ್ತಿಲ್ಲವಂತೆ.

ಸುಶಾಂತ್​ ಸಿಂಗ್​ ಯಾವುದೇ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಬಂದವರು. ಆದಾಗ್ಯೂ ಸ್ಟಾರ್​ ಆಗಿ ಮೆರೆದರು. ಆದರೆ, ಅವರನ್ನು ಎಲ್ಲರೂ ಸೈಡ್​ಲೈನ್​ ಮಾಡಿದರು ಎನ್ನುವ ಆರೋಪ ಇದೆ. ಈಗ ಕಾರ್ತಿಕ್​ ಆರ್ಯನ್​ಗೂ ಇದೇ ರೀತಿ ಆದರೂ ಅಚ್ಚರಿ ಇಲ್ಲ ಎಂದು ಅಭಿಮಾನಿಗಳು ಆತಂಕ ಹೊರ ಹಾಕುತ್ತಿದ್ದಾರೆ. ಇನ್ನು, ಈ ಪರಿಸ್ಥಿತಿಯನ್ನು ಕಾರ್ತಿಕ್​ ಸಮರ್ಥವಾಗಿ ನಿಭಾಯಿಸುತ್ತಾರಾ ಎನ್ನುವುದು ಸದ್ಯದ ಪ್ರಶ್ನೆ.

ಇದನ್ನೂ ಓದಿ:

ಕಾರ್ತಿಕ್​ ಆರ್ಯನ್​ಗೆ ಗೇಟ್​ ಪಾಸ್​ ಕೊಟ್ಟ ಬೆನ್ನಲ್ಲೇ ಕರಣ್​​ ಜೋಹರ್​ಗೆ ಬಿಗ್​ ಶಾಕ್​

ಸುಶಾಂತ್​ ಸಿಂಗ್​ ರಜಪೂತ್ ರೀತಿಯೇ ಕಾರ್ತಿಕ್​ ಆರ್ಯನ್​ಗೆ ಅನ್ಯಾಯ ಆಗಲು ಕತ್ರಿನಾ ಕಾರಣವೇ?

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ