AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ್​ ಆರ್ಯನ್​ಗೆ ಬರುತ್ತಿಲ್ಲ ಸಿನಿಮಾ ಆಫರ್​; ಕರಣ್​ ಜೋಹರ್​ ಜತೆಗಿನ ವೈಷಮ್ಯವೇ ಮುಳುವಾಯ್ತಾ?

ಕರಣ್​ ಜೋಹರ್​ ನಿರ್ಮಾಣದ ‘ದೋಸ್ತಾನಾ 2’ ಸಿನಿಮಾದಲ್ಲಿ ಕಾರ್ತಿಕ್​ ನಟಿಸಬೇಕಿತ್ತು. ಆದರೆ, ಕೊನೆ ಕ್ಷಣದಲ್ಲಿ ಕರಣ್​ ಹಾಗೂ ಕಾರ್ತಿಕ್​ ನಡುವೆ ಉಂಟಾದ ಸಣ್ಣ ಕಿರಿಕ್​ನಿಂದ ಕಾರ್ತಿಕ್​ ಹೊರ ನಡೆದಿದ್ದರು.

ಕಾರ್ತಿಕ್​ ಆರ್ಯನ್​ಗೆ ಬರುತ್ತಿಲ್ಲ ಸಿನಿಮಾ ಆಫರ್​; ಕರಣ್​ ಜೋಹರ್​ ಜತೆಗಿನ ವೈಷಮ್ಯವೇ ಮುಳುವಾಯ್ತಾ?
ಕಾರ್ತಿಕ್​ ಆರ್ಯನ್​
ರಾಜೇಶ್ ದುಗ್ಗುಮನೆ
| Edited By: |

Updated on: Jun 21, 2021 | 3:26 PM

Share

ಬಾಲಿವುಡ್​ ಇಂಡಸ್ಟ್ರಿ ಉಳಿದ ಸಿನಿಮಾ ಇಂಡಸ್ಟ್ರಿಗಿಂತ ಕೊಂಚ ಭಿನ್ನವೇ. ಕನ್ನಡ ಸೇರಿದಂತೆ ದಕ್ಷಿಣದ ಬಹುತೇಕ ಸಿನಿಮಾ ಇಂಡಸ್ಟ್ರಿಗಳಲ್ಲಿ ಯಾವುದೇ ಹಿನ್ನೆಲೆ ಇಲ್ಲದೆ ಬಂದು ಸ್ಟಾರ್​ ಆಗಿ ಮೆರೆದ ಸಾಕಷ್ಟು ನಟರಿದ್ದಾರೆ. ಬಾಲಿವುಡ್​ನಲ್ಲೂ ಈ ರೀತಿ ಇಲ್ಲವೆಂದಲ್ಲ. ಆದರೆ, ಉಳಿದುಕೊಂಡವರು ಬೆರಳೆಣಿಕೆ ಮಂದಿ ಮಾತ್ರ. ಬಾಲಿವುಡ್​ನ ದೊಡ್ಡ ತಲೆಗಳಿಂದಾಗಿ ಸುಶಾಂತ್ ಸಿಂಗ್​ ರಜಪೂತ್​​ ಮೃತಪಟ್ಟರು ಎನ್ನುವ ಮಾತಿದೆ. ಈಗ ಕಾರ್ತಿಕ್​ ಆರ್ಯನ್​ಗೂ ಸೈಡ್​ಲೈನ್​ ಆಗುವ ಭಯ ಕಾಡುತ್ತಿದೆ.

ಕಾರ್ತಿಕ್​ ಆರ್ಯನ್​ ಯಾವುದೇ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಬಂದವರು. ಆದಾಗ್ಯೂ ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗಿದೆ. ಕರಣ್​ ಜೋಹರ್​ ನಿರ್ಮಾಣದ ‘ದೋಸ್ತಾನಾ 2’ ಸಿನಿಮಾದಲ್ಲಿ ಕಾರ್ತಿಕ್​ ನಟಿಸಬೇಕಿತ್ತು. ಆದರೆ, ಕೊನೆ ಕ್ಷಣದಲ್ಲಿ ಕರಣ್​ ಹಾಗೂ ಕಾರ್ತಿಕ್​ ನಡುವೆ ಉಂಟಾದ ಸಣ್ಣ ಕಿರಿಕ್​ನಿಂದ ಕಾರ್ತಿಕ್​ ಹೊರ ನಡೆದಿದ್ದರು. ಇದಾದ ನಂತರದಲ್ಲಿ ಕಾರ್ತಿಕ್​ಗೆ ಅದೃಷ್ಟ ಕೈ ಕೊಟ್ಟಿದೆ.

ಶಾರುಖ್​ ಖಾನ್​ ನಿರ್ಮಾಣ ಸಂಸ್ಥೆ ರೆಡ್​ ಚಿಲ್ಲೀಸ್​ ಅಡಿಯಲ್ಲಿ ಸಿದ್ಧವಾಗುತ್ತಿದ್ದ ಸಿನಿಮಾದಲ್ಲಿ ಕಾರ್ತಿಕ್​ ನಟಿಸಬೇಕಿತ್ತು. ಆದರೆ, ಅಲ್ಲಿಂದ ಅವರಿಗೆ ಗೇಟ್​ ಪಾಸ್​ ನೀಡಲಾಯಿತು. ಈಗ ಅವರ ಕೈನಲ್ಲಿ ‘ಧಮಾಕಾ’ ಹಾಗೂ ‘ಭೂಲ್​ ಭುಲಯ್ಯಾ 2’ ಸಿನಿಮಾ ಬಿಟ್ಟು ಮತ್ತಾವುದೇ ಚಿತ್ರಗಳಿಲ್ಲ. ಮೂಲಗಳ ಪ್ರಕಾರ ಕಾರ್ತಿಕ್​ಗೆ ಯಾವುದೇ ದೊಡ್ಡ ಮಟ್ಟದ ಆಫರ್​ಗಳು ಕೂಡ ಬರುತ್ತಿಲ್ಲವಂತೆ.

ಸುಶಾಂತ್​ ಸಿಂಗ್​ ಯಾವುದೇ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಬಂದವರು. ಆದಾಗ್ಯೂ ಸ್ಟಾರ್​ ಆಗಿ ಮೆರೆದರು. ಆದರೆ, ಅವರನ್ನು ಎಲ್ಲರೂ ಸೈಡ್​ಲೈನ್​ ಮಾಡಿದರು ಎನ್ನುವ ಆರೋಪ ಇದೆ. ಈಗ ಕಾರ್ತಿಕ್​ ಆರ್ಯನ್​ಗೂ ಇದೇ ರೀತಿ ಆದರೂ ಅಚ್ಚರಿ ಇಲ್ಲ ಎಂದು ಅಭಿಮಾನಿಗಳು ಆತಂಕ ಹೊರ ಹಾಕುತ್ತಿದ್ದಾರೆ. ಇನ್ನು, ಈ ಪರಿಸ್ಥಿತಿಯನ್ನು ಕಾರ್ತಿಕ್​ ಸಮರ್ಥವಾಗಿ ನಿಭಾಯಿಸುತ್ತಾರಾ ಎನ್ನುವುದು ಸದ್ಯದ ಪ್ರಶ್ನೆ.

ಇದನ್ನೂ ಓದಿ:

ಕಾರ್ತಿಕ್​ ಆರ್ಯನ್​ಗೆ ಗೇಟ್​ ಪಾಸ್​ ಕೊಟ್ಟ ಬೆನ್ನಲ್ಲೇ ಕರಣ್​​ ಜೋಹರ್​ಗೆ ಬಿಗ್​ ಶಾಕ್​

ಸುಶಾಂತ್​ ಸಿಂಗ್​ ರಜಪೂತ್ ರೀತಿಯೇ ಕಾರ್ತಿಕ್​ ಆರ್ಯನ್​ಗೆ ಅನ್ಯಾಯ ಆಗಲು ಕತ್ರಿನಾ ಕಾರಣವೇ?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ