AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀನು ಫೇಕ್​’; ಜೊತೆಯಾಗಿದ್ದ ಕಾರ್ತಿಕ್ ಹಾಗೂ ಸಂಗೀತಾ ಮಧ್ಯೆ ಮೂಡಿತು ವೈಮನಸ್ಸು

‘ಸಂಗೀತಾ ನನ್ನ ಟ್ರ್ಯೂ ಫ್ರೆಂಡ್’ ಎಂದು ಅವರು ಹಲವು ಬಾರಿ ಹೇಳಿಕೊಂಡಿದ್ದಾರೆ. ಸಂಗೀತಾ ಕೂಡ ಕಾರ್ತಿಕ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈಗ ಬಿಗ್ ಬಾಸ್ ಮನೆಯಲ್ಲಿ ಇಬ್ಬರೂ ಬೇರೆ ಆಗುವ ಸೂಚನೆ ಸಿಕ್ಕಿದೆ. ಕಾರ್ತಿಕ್ ಅವರನ್ನು ಫೇಕ್ ಎಂದು ಕರೆದಿದ್ದಾರೆ ಸಂಗೀತಾ.

‘ನೀನು ಫೇಕ್​’; ಜೊತೆಯಾಗಿದ್ದ ಕಾರ್ತಿಕ್ ಹಾಗೂ ಸಂಗೀತಾ ಮಧ್ಯೆ ಮೂಡಿತು ವೈಮನಸ್ಸು
ಕಾರ್ತಿಕ್-ಸಂಗೀತಾ
ರಾಜೇಶ್ ದುಗ್ಗುಮನೆ
|

Updated on: Oct 25, 2023 | 2:30 PM

Share

ಬಿಗ್ ಬಾಸ್ (Bigg Boss) ಮನೆಯಲ್ಲಿ ಯಾರು ಯಾವಾಗ ಬೇಕಾದರೂ ಒಂದಾಗಬಹುದು, ಯಾವಾಗ ಬೇಕಾದರೂ ದೂರ ಆಗಬಹುದು. ಅಲ್ಲಿ ಸ್ಪರ್ಧಿಗಳ ಲೆಕ್ಕಾಚಾರ ಕೆಲಸ ಮಾಡುವುದಿಲ್ಲ. ಅಲ್ಲೇನಿದ್ದರೂ ಬಿಗ್ ಬಾಸ್​​ದೇ ಲೆಕ್ಕಾಚಾರ. ಬಿಗ್ ಬಾಸ್ ಕೈಯಲ್ಲೇ ಚುಕ್ಕಾಣಿ ಇರುತ್ತದೆ. ಎಷ್ಟೇ ಕ್ಲೋಸ್ ಆಗಿದ್ದರೂ ಕೆಲವು ಘಟನೆಗಳಿಂದ ಅವರು ಬೇರೆ ಆದ ಉದಾಹರಣೆ ಸಾಕಷ್ಟಿದೆ. ಈಗ ಸಂಗೀತಾ ಶೃಂಗೇರಿ (Sangeetha Sringeri) ಹಾಗೂ ಕಾರ್ತಿಕ್ ಮಧ್ಯೆ ವೈಮನಸ್ಸು ಮೂಡುವ ಸೂಚನೆ ಸಿಕ್ಕಿದೆ. ಇಬ್ಬರೂ ಮನೆಯಲ್ಲಿ ಜೊತೆಯಾಗಿದ್ದರು.

‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಸಂಗೀತಾ ಶೃಂಗೇರಿ ಹಾಗೂ ಕಾರ್ತಿಕ್ ಮಹೇಶ್ ಕ್ಲೋಸ್ ಆಗಿದ್ದರು. ಇಬ್ಬರ ಮಧ್ಯೆ ಒಳ್ಳೆಯ ಬಾಂಡಿಂಗ್ ಬೆಳೆದಿದೆ. ‘ಸಂಗೀತಾ ನನ್ನ ಟ್ರ್ಯೂ ಫ್ರೆಂಡ್’ ಎಂದು ಅವರು ಹಲವು ಬಾರಿ ಹೇಳಿಕೊಂಡಿದ್ದಾರೆ. ಸಂಗೀತಾ ಕೂಡ ಕಾರ್ತಿಕ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈಗ ಬಿಗ್ ಬಾಸ್ ಮನೆಯಲ್ಲಿ ಇಬ್ಬರೂ ಬೇರೆ ಆಗುವ ಸೂಚನೆ ಸಿಕ್ಕಿದೆ. ಕಾರ್ತಿಕ್ ಅವರನ್ನು ಫೇಕ್ ಎಂದು ಕರೆದಿದ್ದಾರೆ ಸಂಗೀತಾ.

‘ಕ್ಯಾಪ್ಟನ್ ಆಗಲು ಎಲ್ಲಾ ಸದಸ್ಯರು ಇಬ್ಬರು ಸದಸ್ಯರನ್ನು ಆಯ್ಕೆ ಮಾಡಬೇಕು’ ಎಂದು ಬಿಗ್ ಬಾಸ್ ಕಡೆಯಿಂದ ಆದೇಶ ಬಂದಿದೆ. ನಮ್ರತಾ ಹಾಗೂ ತನಿಷಾ ಹೆಸರನ್ನು ಕಾರ್ತಿಕ್ ತೆಗೆದುಕೊಂಡರು. ಇದು ಸಂಗೀತಾಗೆ ಬೇಸರ ಮೂಡಿಸಿದೆ. ‘ನಾನು ಯಾರ ಮೇಲೂ ಡಿಪೆಂಡ್ ಆಗಿ ಇಲ್ಲಿ ಬಂದಿಲ್ಲ. ನಮ್ರತಾ ಹೆಸರು ತೆಗೆದುಕೊಳ್ಳಲು ನಿನಗೆ ಸಮಸ್ಯೆ ಆಗಿಲ್ಲ. ಜೊತೆಗಿದ್ದವರೇ ಚುಚ್ಚೋದು. ನೀನು ಫೇಕ್​’ ಎಂದು ಕಾರ್ತಿಕ್​ಗೆ ಸಂಗೀತಾ ಹೇಳಿದ್ದಾರೆ. ಹೀಗೆ ಹೇಳಿದ ತಕ್ಷಣ ಕಾರ್ತಿಕ್ ಹಾಗೂ ವಿನಯ್ ಅಲ್ಲಿಂದ ಎದ್ದು ಹೋಗಿದ್ದಾರೆ.

ಇದನ್ನೂ ಓದಿ: ‘ನನ್ನನ್ನು ದರಿದ್ರ ಎಂದರು’; ಬಿಗ್ ಬಾಸ್ ಮನೆಯಲ್ಲಿ ಕಣ್ಣೀರು ಹಾಕಿದ ನಮ್ರತಾ ಗೌಡ

ಈ ಪ್ರೋಮೋ ಸದ್ಯ ಗಮನ ಸೆಳೆಯುತ್ತಿದೆ. ಇದಕ್ಕೆ ಅನೇಕರು ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ‘ಫ್ರೆಂಡ್​ಶಿಪ್​ನಲ್ಲಿ ಇದೆಲ್ಲ ಕಾಮನ್’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು, ‘ನಿಮ್ಮ ಮಧ್ಯೆ ವೈಮನಸ್ಸು ಬೇಡ’ ಎಂದು ಬರೆದಿದ್ದಾರೆ. ರಾತ್ರಿ 9:30ಕ್ಕೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಎಪಿಸೋಡ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾ ಮೂಲಕ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವಿಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ