AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ್ ಸುಬ್ಬರಾಜು ಜೊತೆ ಕೈ ಜೋಡಿಸಿದ ಸೂರ್ಯ

Suriya: ತಮಿಳಿನ ಸ್ಟಾರ್ ನಟ ಸೂರ್ಯ, ತಮಿಳಿನ ಪ್ರತಿಭಾವಂತ ನಿರ್ದೇಶಕ ಕಾರ್ತಿಕ್ ಸುಬ್ಬರಾಜು ಜೊತೆ ಕೈ ಜೋಡಿಸಿದ್ದಾರೆ. ಹೊಸ ಸಿನಿಮಾ ಒಂದಕ್ಕಾಗಿ ಈ ಜೋಡಿ ಒಂದಾಗಿದೆ.

ಕಾರ್ತಿಕ್ ಸುಬ್ಬರಾಜು ಜೊತೆ ಕೈ ಜೋಡಿಸಿದ ಸೂರ್ಯ
ಕಾರ್ತಿಕ್-ಸೂರ್ಯ
ಮಂಜುನಾಥ ಸಿ.
|

Updated on: Mar 29, 2024 | 9:58 AM

Share

ತಮಿಳಿನಲ್ಲಿ ಭಿನ್ನ ಮಾರಿ ಸಿನಿಮಾಗಳನ್ನು ಕಟ್ಟಿಕೊಡುತ್ತಿರುವ ಕಾರ್ತಿಕ್ ಸುಬ್ಬರಾಜು (Karthik Subbaraju), ಇತ್ತೀಚೆಗಷ್ಟೆ ‘ಜಿಗರ್ ಥಂಡಾ 2’ ಸಿನಿಮಾ ಮೂಲಕ ಗಮನ ಸೆಳೆದಿದ್ದಾರೆ. ಸಿನಿಮಾದ ಶಕ್ತಿಯನ್ನು ಸಿನಿಮಾ ಮೂಲಕವೇ ಹೇಳುವ ಆ ಸಿನಿಮಾದಲ್ಲಿ ಲಾರೆನ್ಸ್ ಹಾಗೂ ಎಸ್​ಜೆ ಸೂರ್ಯ ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದರು. ಆ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈ ಹಿಂದೆ ರಜನೀಕಾಂತ್, ಧನುಶ್, ಚಿಯಾನ್ ವಿಕ್ರಂ ಅಂಥಹಾ ಸ್ಟಾರ್​ಗಳೊಟ್ಟಿಗೆ ಕೆಲಸ ಮಾಡಿರುವ ಕಾರ್ತಿಕ್ ಸುಬ್ಬರಾಜು ಇದೀಗ ಮತ್ತೊಬ್ಬ ತಮಿಳು ಸ್ಟಾರ್ ನಟನೊಟ್ಟಿಗೆ ಕೈಜೋಡಿಸಿದ್ದಾರೆ. ಅದುವೇ ಸೂರ್ಯ.

ನಟ ಸೂರ್ಯ ಸಹ, ವಾರಗೆಯ ಸೂಪರ್ ಸ್ಟಾರ್​ಗಳಿಗಿಂತಲೂ ಭಿನ್ನವಾದ ಹಾದಿಯನ್ನು ಕತೆ ಆಯ್ಕೆಯ ವಿಷಯದಲ್ಲಿ ಹಿಡಿಸಿದ್ದಾರೆ. ‘ವಿಕ್ರಂ’ ಸಿನಿಮಾನಲ್ಲಿ ವಿಲನ್ ಆಗಿ ಮಿಂಚಿದ್ದರು. ಅದಕ್ಕೆ ಮುನ್ನ ಬಂದಿದ್ದ ‘ಜೈ ಭೀಮ್’ನಲ್ಲಿ ಫೈಟ್​, ಹಾಡುಗಳಿಲ್ಲದ, ಅನ್ಯಾಯದ ವಿರುದ್ಧ ಹೋರಾಡುವ ನಾಯಕನ ಪಾತ್ರಕ್ಕೆ ಜೀವ ತುಂಬಿದ್ದರು. ಇದೀಗ ಕಾರ್ತಿಕ್ ಸುಬ್ಬರಾಜು ಜೊತೆ ಕೈಜೋಡಿಸುವ ಮೂಲಕ ಮತ್ತೊಂದು ಭಿನ್ನ ಕತೆಯನ್ನು ಆಯ್ಕೆ ಮಾಡಿಕೊಂಡಂತಿದೆ ಸೂರ್ಯ.

ಸಿನಿಮಾದ ಮೊದಲ ಪೋಸ್ಟರ್ ಇದೀಗ ಬಿಡುಗಡೆ ಆಗಿದ್ದು, ಪೋಸ್ಟರ್ ನೋಡಿದರೆ ಇದೊಂದು ರೆಟ್ರೋ ಸಿನಿಮಾ ಇರಬಹುದೆನ್ನುವ ಅನುಮಾನ ಮೂಡುತ್ತಿದೆ. ಸಿನಿಮಾದ ಹೆಸರು ಘೋಷಣೆ ಮಾಡಿಲ್ಲವಾದರೂ, ‘ಲವ್, ಲಾಫ್ಟರ್, ವಾರ್’ ಎಂಬ ಅಡಿಬರಹ ಪೋಸ್ಟರ್​ನಲ್ಲಿದೆ. ಆ ಮೂಲಕ ಇದೊಂದು ಹಾಸ್ಯ ಮಿಶ್ರಿತ ಪ್ರೇಮಕತೆ ಜೊತೆಗೆ ಆಕ್ಷನ್ ಸಹ ಭರಪೂರವಾಗಿ ಇರಲಿದೆ ಎಂಬ ಸುಳಿವು ನೀಡುತ್ತಿದೆ.

ಇದನ್ನೂ ಓದಿ:ಈ ವರ್ಷ ಕರಣ್ ಜೋಹರ್ ನೋಡಿದ ಅತ್ಯುತ್ತಮ ಸಿನಿಮಾ ಕನ್ನಡದ್ದು, ಯಾವುದು ಗೊತ್ತೆ?

ಸೂರ್ಯ ಇದೀಗ ಎರಡು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಹು ಬಜೆಟ್​ನ ಪ್ಯಾನ್ ಇಂಡಿಯಾ ಸಿನಿಮಾ ‘ಕಂಗುವ’ ಸಿನಿಮಾದ ಚಿತ್ರೀಕರಣದಲ್ಲಿ ಸೂರ್ಯ ತೊಡಗಿಸಿಕೊಂಡಿದ್ದಾರೆ. ಅದರ ಜೊತೆಗೆ ವೆಟ್ರಿಮಾರನ್ ನಿರ್ದೇಶನದ ‘ವಡಿವಾಸಿ’ ಸಿನಿಮಾನಲ್ಲಿಯೂ ಸೂರ್ಯ ನಟಿಸಲಿದ್ದಾರೆ. ಆದರೆ ಈ ಸಿನಿಮಾದ ಚಿತ್ರೀಕರಣ ಅರ್ಧಕ್ಕೆ ನಿಂತಿದೆ. ‘ವಡಿವಾಸಿ’ ಚಿತ್ರೀಕರಣ ಮತ್ತೆ ಯಾವಾಗ ಪ್ರಾರಂಭವಾಗುತ್ತದೆಯೋ ತಿಳಿದು ಬಂದಿಲ್ಲ.

ಕಾರ್ತಿಕ್ ಸುಬ್ಬರಾಜು ತಮಿಳು ಚಿತ್ರರಂಗದ ಜನಪ್ರಿಯ ನಿರ್ದೇಶಕರಲ್ಲಿ ಒಬ್ಬರು. ಈಗಾಗಲೇ ಹಲವು ಉತ್ತಮ ಸಿನಿಮಾಗಳನ್ನು ಅವರು ನೀಡಿದ್ದಾರೆ.‘ಪಿಜ್ಜಾ’, ‘ಜಿಗರ್ ಥಂಡಾ’, ರಜನೀಕಾಂತ್ ನಟನೆಯ ‘ಪೆಟ್ಟಾ’, ಚಿಯಾನ್ ವಿಕ್ರಂ ನಟನೆಯ ‘ಮಹಾನ್’, ಧನುಶ್ ನಟನೆಯ ‘ಜಗಮೇ ತಂದಿರಮ್’ ಇನ್ನೂ ಕೆಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ರಾಮ್ ಚರಣ್ ನಟಿಸಿ ಶಂಕರ್ ನಿರ್ದೇಶನ ಮಾಡುತ್ತಿರುವ ‘ಗೇಮ್ ಚೇಂಜರ್’ ಸಿನಿಮಾಕ್ಕೆ ಅವರೇ ಕತೆ ಬರೆದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ