AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಸಿಂಗ್​ ರಜಪೂತ್ ರೀತಿಯೇ ಕಾರ್ತಿಕ್​ ಆರ್ಯನ್​ಗೆ ಅನ್ಯಾಯ ಆಗಲು ಕತ್ರಿನಾ ಕಾರಣವೇ?

ಸುಶಾಂತ್​ ರೀತಿಯೇ ಕಾರ್ತಿಕ್​ ಆರ್ಯನ್​ ಕೂಡ ದೊಡ್ಡ ಪ್ರೊಡಕ್ಷನ್​ ಕಂಪನಿಗಳನ್ನು ಎದುರು ಹಾಕಿಕೊಳ್ಳುತ್ತಿದ್ದಾರೆ. ಅವರ ಭವಿಷ್ಯದ ಬಗ್ಗೆ ಫ್ಯಾನ್ಸ್​ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಸುಶಾಂತ್​ ಸಿಂಗ್​ ರಜಪೂತ್ ರೀತಿಯೇ ಕಾರ್ತಿಕ್​ ಆರ್ಯನ್​ಗೆ ಅನ್ಯಾಯ ಆಗಲು ಕತ್ರಿನಾ ಕಾರಣವೇ?
ಕಾರ್ತಿಕ್​ ಆರ್ಯನ್​, ಕತ್ರಿನಾ ಕೈಫ್​
ಮದನ್​ ಕುಮಾರ್​
|

Updated on: May 30, 2021 | 12:38 PM

Share

ಬಾಲಿವುಡ್​ನಲ್ಲಿ ನಟ ಕಾರ್ತಿಕ್​ ಆರ್ಯನ್​ ಅವರು ಈಗತಾನೇ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ತಾನೊಬ್ಬ ಭರವಸೆಯ ನಟ ಎಂಬುದನ್ನು ಅವರು ಈಗಾಗಲೇ ಸಾಬೀತುಪಡಿಸಿದ್ದಾರೆ. ‘ಪ್ಯಾರ್​ ಕೆ ಪಂಚನಾಮ’, ‘ಸೋನು ಕೆ ಟಿಟು ಕೆ ಸ್ವೀಟಿ’ ಮುಂತಾದ ಸಿನಿಮಾಗಳ ಮೂಲಕ ಅವರು ಗಮನ ಸೆಳೆದಿದ್ದಾರೆ. ಆದರೆ ದೊಡ್ಡ ಮಂದಿಯ ಪ್ರಭಾವದಿಂದಾಗಿ ಅವರು ಈಗ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಎರಡು ಬಹುನಿರೀಕ್ಷಿತ ಸಿನಿಮಾಗಳಿಂದ ಅವರನ್ನು ಹೊರಹಾಕಲಾಗಿದೆ. ಈ ಎಲ್ಲ ಕಿರಿಕ್​ಗಳ ಜೊತೆಯಲ್ಲಿ ನಟಿ ಕತ್ರಿನಾ ಕೈಫ್​ ಹೆಸರು ಕೂಡ ಕೇಳಿಬರುತ್ತಿದೆ.

ಕರಣ್​ ಜೋಹರ್​ ನಿರ್ಮಾಣ ಮಾಡುತ್ತಿರುವ ‘ದೋಸ್ತಾನಾ 2’ ಸಿನಿಮಾದಿಂದ ಕಾರ್ತಿಕ್​ ಆರ್ಯನ್​ ಅವರನ್ನು ಹೊರದಬ್ಬಲಾಯಿತು. ಭವಿಷ್ಯದಲ್ಲಿ ಇನ್ನೆಂದೂ ತಾವು ಕಾರ್ತಿಕ್​ ಆರ್ಯನ್​ ಜೊತೆಗೆ ಕೆಲಸ ಮಾಡುವುದಿಲ್ಲ ಎಂದು ಕರಣ್​ ಜೋಹರ್ ಶಪಥ ಮಾಡಿದ್ದಾರೆ ಎಂದು ಕೂಡ ಸುದ್ದಿ ಆಗಿದೆ. ಅದರ ಬೆನ್ನಲ್ಲೇ ಶಾರುಖ್​ ಖಾನ್​ ನಿರ್ಮಾಣದ ಒಂದು ಸಿನಿಮಾದಿಂದಲೂ ಕಾರ್ತಿಕ್​ಗೆ ಗೇಟ್​ ಪಾಸ್​ ನೀಡಲಾಗಿದೆ ಎಂಬ ಸುದ್ದಿ ಕೇಳಿಬಂದಿದೆ.

ಶಾರುಖ್​ ನಿರ್ಮಾಣದ ಆ ಸಿನಿಮಾಗೆ ಅಜಯ್​ ಬಹ್ಲ್​ ನಿರ್ದೇಶನ ಮಾಡುತ್ತಿದ್ದಾರೆ. ಕೆಲವು ವಿಚಾರಗಳಲ್ಲಿ ಚಿತ್ರತಂಡದ ಜೊತೆ ಕಾರ್ತಿಕ್​ಗೆ ಕಿರಿಕ್​ ಆಗಿದೆ. ಅಷ್ಟೇ ಅಲ್ಲದೇ ನಾಯಕಿ ಆಯ್ಕೆಯಲ್ಲಿಯೂ ಅಸಮಾಧಾನ ಭುಗಿಲೆದ್ದಿದೆ. ನಾಯಕಿಯಾಗಿ ಕತ್ರಿನಾ ಕೈಫ್​ ಆಯ್ಕೆ ಆಗಲಿ ಎಂಬುದು ಚಿತ್ರತಂಡದ ಅಭಿಪ್ರಾಯ. ಆದರೆ ಇದೊಂದು ರೊಮ್ಯಾಂಟಿಕ್​ ಲವ್​ಸ್ಟೋರಿ ಆಗಿರುವುದರಿಂದ ತಮ್ಮ ಜೊತೆ ಕತ್ರಿನಾ ನಟಿಸಿದರೆ ಅವರು ವಯಸ್ಸಿನಲ್ಲಿ ದೊಡ್ಡವರ ರೀತಿ ಕಾಣುತ್ತಾರೆ ಎಂಬುದು ಕಾರ್ತಿಕ್​ ತಕರಾರು. ಇದೇ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಿದ ಬಳಿಕ ಆ ಸಿನಿಮಾದಿಂದ ಕಾರ್ತಿಕ್​ ಅವರನ್ನು ಕೈ ಬಿಡಲಾಗಿದೆ ಎಂಬ ಗುಸಗುಸು ಹರಡಿದೆ.

ನಟ ಸುಶಾಂತ್​ ಸಿಂಗ್​ ರಜಪೂತ್​ ಕೂಡ ಇದೇ ರೀತಿ ಅನೇಕ ಸಮಸ್ಯೆಗಳನ್ನು ಎದುರಿಸಿದ್ದರು. ದೊಡ್ಡ ದೊಡ್ಡ ನಿರ್ಮಾಪಕರು ಅವರ ವಿರುದ್ಧ ಷಡ್ಯಂತ್ರ ನಡೆಸಿದರು ಎಂಬ ಮಾತು ಮೊದಲಿನಿಂದಲೂ ಕೇಳಿಬರುತ್ತಲೇ ಇದೆ. ನಟಿ ಕಂಗನಾ ರಣಾವತ್​ ಅವರಂತೂ ಈ ವಿಚಾರವಾಗಿ ಕರಣ್​ ಜೋಹರ್​, ಮಹೇಶ್​ ಭಟ್​ ಮುಂತಾದವರ ವಿರುದ್ಧ ಹಲವು ಬಾರಿ ಗುಡುಗಿದ್ದಾರೆ. ಈಗ ಕಾರ್ತಿಕ್​ ಆರ್ಯನ್​ ಕೂಡ ದೊಡ್ಡ ಪ್ರೊಡಕ್ಷನ್​ ಕಂಪನಿಗಳನ್ನು ಎದುರುಹಾಕಿಕೊಳ್ಳುತ್ತಿದ್ದಾರೆ. ಅವರ ಭವಿಷ್ಯದ ಬಗ್ಗೆ ಫ್ಯಾನ್ಸ್​ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ:

ಕಾರ್ತಿಕ್​ ಆರ್ಯನ್​ಗೆ ಗೇಟ್​ ಪಾಸ್​ ಕೊಟ್ಟ ಬೆನ್ನಲ್ಲೇ ಕರಣ್​​ ಜೋಹರ್​ಗೆ ಬಿಗ್​ ಶಾಕ್​

ಸುಶಾಂತ್ ರೀತಿ ಕಾರ್ತಿಕ್ ಆರ್ಯನ್​ಗೂ ಆತ್ಮಹತ್ಯೆ ಮಾಡಿಕೊಳ್ಳುವಂತೆ ಒತ್ತಾಯಿಸಬೇಡಿ; ಕರಣ್​​​ಗೆ ಕಂಗನಾ ಛೀಮಾರಿ

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್