AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಸಿಂಗ್​ ರಜಪೂತ್ ರೀತಿಯೇ ಕಾರ್ತಿಕ್​ ಆರ್ಯನ್​ಗೆ ಅನ್ಯಾಯ ಆಗಲು ಕತ್ರಿನಾ ಕಾರಣವೇ?

ಸುಶಾಂತ್​ ರೀತಿಯೇ ಕಾರ್ತಿಕ್​ ಆರ್ಯನ್​ ಕೂಡ ದೊಡ್ಡ ಪ್ರೊಡಕ್ಷನ್​ ಕಂಪನಿಗಳನ್ನು ಎದುರು ಹಾಕಿಕೊಳ್ಳುತ್ತಿದ್ದಾರೆ. ಅವರ ಭವಿಷ್ಯದ ಬಗ್ಗೆ ಫ್ಯಾನ್ಸ್​ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಸುಶಾಂತ್​ ಸಿಂಗ್​ ರಜಪೂತ್ ರೀತಿಯೇ ಕಾರ್ತಿಕ್​ ಆರ್ಯನ್​ಗೆ ಅನ್ಯಾಯ ಆಗಲು ಕತ್ರಿನಾ ಕಾರಣವೇ?
ಕಾರ್ತಿಕ್​ ಆರ್ಯನ್​, ಕತ್ರಿನಾ ಕೈಫ್​
ಮದನ್​ ಕುಮಾರ್​
|

Updated on: May 30, 2021 | 12:38 PM

Share

ಬಾಲಿವುಡ್​ನಲ್ಲಿ ನಟ ಕಾರ್ತಿಕ್​ ಆರ್ಯನ್​ ಅವರು ಈಗತಾನೇ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ತಾನೊಬ್ಬ ಭರವಸೆಯ ನಟ ಎಂಬುದನ್ನು ಅವರು ಈಗಾಗಲೇ ಸಾಬೀತುಪಡಿಸಿದ್ದಾರೆ. ‘ಪ್ಯಾರ್​ ಕೆ ಪಂಚನಾಮ’, ‘ಸೋನು ಕೆ ಟಿಟು ಕೆ ಸ್ವೀಟಿ’ ಮುಂತಾದ ಸಿನಿಮಾಗಳ ಮೂಲಕ ಅವರು ಗಮನ ಸೆಳೆದಿದ್ದಾರೆ. ಆದರೆ ದೊಡ್ಡ ಮಂದಿಯ ಪ್ರಭಾವದಿಂದಾಗಿ ಅವರು ಈಗ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಎರಡು ಬಹುನಿರೀಕ್ಷಿತ ಸಿನಿಮಾಗಳಿಂದ ಅವರನ್ನು ಹೊರಹಾಕಲಾಗಿದೆ. ಈ ಎಲ್ಲ ಕಿರಿಕ್​ಗಳ ಜೊತೆಯಲ್ಲಿ ನಟಿ ಕತ್ರಿನಾ ಕೈಫ್​ ಹೆಸರು ಕೂಡ ಕೇಳಿಬರುತ್ತಿದೆ.

ಕರಣ್​ ಜೋಹರ್​ ನಿರ್ಮಾಣ ಮಾಡುತ್ತಿರುವ ‘ದೋಸ್ತಾನಾ 2’ ಸಿನಿಮಾದಿಂದ ಕಾರ್ತಿಕ್​ ಆರ್ಯನ್​ ಅವರನ್ನು ಹೊರದಬ್ಬಲಾಯಿತು. ಭವಿಷ್ಯದಲ್ಲಿ ಇನ್ನೆಂದೂ ತಾವು ಕಾರ್ತಿಕ್​ ಆರ್ಯನ್​ ಜೊತೆಗೆ ಕೆಲಸ ಮಾಡುವುದಿಲ್ಲ ಎಂದು ಕರಣ್​ ಜೋಹರ್ ಶಪಥ ಮಾಡಿದ್ದಾರೆ ಎಂದು ಕೂಡ ಸುದ್ದಿ ಆಗಿದೆ. ಅದರ ಬೆನ್ನಲ್ಲೇ ಶಾರುಖ್​ ಖಾನ್​ ನಿರ್ಮಾಣದ ಒಂದು ಸಿನಿಮಾದಿಂದಲೂ ಕಾರ್ತಿಕ್​ಗೆ ಗೇಟ್​ ಪಾಸ್​ ನೀಡಲಾಗಿದೆ ಎಂಬ ಸುದ್ದಿ ಕೇಳಿಬಂದಿದೆ.

ಶಾರುಖ್​ ನಿರ್ಮಾಣದ ಆ ಸಿನಿಮಾಗೆ ಅಜಯ್​ ಬಹ್ಲ್​ ನಿರ್ದೇಶನ ಮಾಡುತ್ತಿದ್ದಾರೆ. ಕೆಲವು ವಿಚಾರಗಳಲ್ಲಿ ಚಿತ್ರತಂಡದ ಜೊತೆ ಕಾರ್ತಿಕ್​ಗೆ ಕಿರಿಕ್​ ಆಗಿದೆ. ಅಷ್ಟೇ ಅಲ್ಲದೇ ನಾಯಕಿ ಆಯ್ಕೆಯಲ್ಲಿಯೂ ಅಸಮಾಧಾನ ಭುಗಿಲೆದ್ದಿದೆ. ನಾಯಕಿಯಾಗಿ ಕತ್ರಿನಾ ಕೈಫ್​ ಆಯ್ಕೆ ಆಗಲಿ ಎಂಬುದು ಚಿತ್ರತಂಡದ ಅಭಿಪ್ರಾಯ. ಆದರೆ ಇದೊಂದು ರೊಮ್ಯಾಂಟಿಕ್​ ಲವ್​ಸ್ಟೋರಿ ಆಗಿರುವುದರಿಂದ ತಮ್ಮ ಜೊತೆ ಕತ್ರಿನಾ ನಟಿಸಿದರೆ ಅವರು ವಯಸ್ಸಿನಲ್ಲಿ ದೊಡ್ಡವರ ರೀತಿ ಕಾಣುತ್ತಾರೆ ಎಂಬುದು ಕಾರ್ತಿಕ್​ ತಕರಾರು. ಇದೇ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಿದ ಬಳಿಕ ಆ ಸಿನಿಮಾದಿಂದ ಕಾರ್ತಿಕ್​ ಅವರನ್ನು ಕೈ ಬಿಡಲಾಗಿದೆ ಎಂಬ ಗುಸಗುಸು ಹರಡಿದೆ.

ನಟ ಸುಶಾಂತ್​ ಸಿಂಗ್​ ರಜಪೂತ್​ ಕೂಡ ಇದೇ ರೀತಿ ಅನೇಕ ಸಮಸ್ಯೆಗಳನ್ನು ಎದುರಿಸಿದ್ದರು. ದೊಡ್ಡ ದೊಡ್ಡ ನಿರ್ಮಾಪಕರು ಅವರ ವಿರುದ್ಧ ಷಡ್ಯಂತ್ರ ನಡೆಸಿದರು ಎಂಬ ಮಾತು ಮೊದಲಿನಿಂದಲೂ ಕೇಳಿಬರುತ್ತಲೇ ಇದೆ. ನಟಿ ಕಂಗನಾ ರಣಾವತ್​ ಅವರಂತೂ ಈ ವಿಚಾರವಾಗಿ ಕರಣ್​ ಜೋಹರ್​, ಮಹೇಶ್​ ಭಟ್​ ಮುಂತಾದವರ ವಿರುದ್ಧ ಹಲವು ಬಾರಿ ಗುಡುಗಿದ್ದಾರೆ. ಈಗ ಕಾರ್ತಿಕ್​ ಆರ್ಯನ್​ ಕೂಡ ದೊಡ್ಡ ಪ್ರೊಡಕ್ಷನ್​ ಕಂಪನಿಗಳನ್ನು ಎದುರುಹಾಕಿಕೊಳ್ಳುತ್ತಿದ್ದಾರೆ. ಅವರ ಭವಿಷ್ಯದ ಬಗ್ಗೆ ಫ್ಯಾನ್ಸ್​ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ:

ಕಾರ್ತಿಕ್​ ಆರ್ಯನ್​ಗೆ ಗೇಟ್​ ಪಾಸ್​ ಕೊಟ್ಟ ಬೆನ್ನಲ್ಲೇ ಕರಣ್​​ ಜೋಹರ್​ಗೆ ಬಿಗ್​ ಶಾಕ್​

ಸುಶಾಂತ್ ರೀತಿ ಕಾರ್ತಿಕ್ ಆರ್ಯನ್​ಗೂ ಆತ್ಮಹತ್ಯೆ ಮಾಡಿಕೊಳ್ಳುವಂತೆ ಒತ್ತಾಯಿಸಬೇಡಿ; ಕರಣ್​​​ಗೆ ಕಂಗನಾ ಛೀಮಾರಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ