ಸುಶಾಂತ್​ ಸಿಂಗ್​ ರಜಪೂತ್ ರೀತಿಯೇ ಕಾರ್ತಿಕ್​ ಆರ್ಯನ್​ಗೆ ಅನ್ಯಾಯ ಆಗಲು ಕತ್ರಿನಾ ಕಾರಣವೇ?

ಸುಶಾಂತ್​ ರೀತಿಯೇ ಕಾರ್ತಿಕ್​ ಆರ್ಯನ್​ ಕೂಡ ದೊಡ್ಡ ಪ್ರೊಡಕ್ಷನ್​ ಕಂಪನಿಗಳನ್ನು ಎದುರು ಹಾಕಿಕೊಳ್ಳುತ್ತಿದ್ದಾರೆ. ಅವರ ಭವಿಷ್ಯದ ಬಗ್ಗೆ ಫ್ಯಾನ್ಸ್​ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಸುಶಾಂತ್​ ಸಿಂಗ್​ ರಜಪೂತ್ ರೀತಿಯೇ ಕಾರ್ತಿಕ್​ ಆರ್ಯನ್​ಗೆ ಅನ್ಯಾಯ ಆಗಲು ಕತ್ರಿನಾ ಕಾರಣವೇ?
ಕಾರ್ತಿಕ್​ ಆರ್ಯನ್​, ಕತ್ರಿನಾ ಕೈಫ್​
Follow us
|

Updated on: May 30, 2021 | 12:38 PM

ಬಾಲಿವುಡ್​ನಲ್ಲಿ ನಟ ಕಾರ್ತಿಕ್​ ಆರ್ಯನ್​ ಅವರು ಈಗತಾನೇ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ತಾನೊಬ್ಬ ಭರವಸೆಯ ನಟ ಎಂಬುದನ್ನು ಅವರು ಈಗಾಗಲೇ ಸಾಬೀತುಪಡಿಸಿದ್ದಾರೆ. ‘ಪ್ಯಾರ್​ ಕೆ ಪಂಚನಾಮ’, ‘ಸೋನು ಕೆ ಟಿಟು ಕೆ ಸ್ವೀಟಿ’ ಮುಂತಾದ ಸಿನಿಮಾಗಳ ಮೂಲಕ ಅವರು ಗಮನ ಸೆಳೆದಿದ್ದಾರೆ. ಆದರೆ ದೊಡ್ಡ ಮಂದಿಯ ಪ್ರಭಾವದಿಂದಾಗಿ ಅವರು ಈಗ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಎರಡು ಬಹುನಿರೀಕ್ಷಿತ ಸಿನಿಮಾಗಳಿಂದ ಅವರನ್ನು ಹೊರಹಾಕಲಾಗಿದೆ. ಈ ಎಲ್ಲ ಕಿರಿಕ್​ಗಳ ಜೊತೆಯಲ್ಲಿ ನಟಿ ಕತ್ರಿನಾ ಕೈಫ್​ ಹೆಸರು ಕೂಡ ಕೇಳಿಬರುತ್ತಿದೆ.

ಕರಣ್​ ಜೋಹರ್​ ನಿರ್ಮಾಣ ಮಾಡುತ್ತಿರುವ ‘ದೋಸ್ತಾನಾ 2’ ಸಿನಿಮಾದಿಂದ ಕಾರ್ತಿಕ್​ ಆರ್ಯನ್​ ಅವರನ್ನು ಹೊರದಬ್ಬಲಾಯಿತು. ಭವಿಷ್ಯದಲ್ಲಿ ಇನ್ನೆಂದೂ ತಾವು ಕಾರ್ತಿಕ್​ ಆರ್ಯನ್​ ಜೊತೆಗೆ ಕೆಲಸ ಮಾಡುವುದಿಲ್ಲ ಎಂದು ಕರಣ್​ ಜೋಹರ್ ಶಪಥ ಮಾಡಿದ್ದಾರೆ ಎಂದು ಕೂಡ ಸುದ್ದಿ ಆಗಿದೆ. ಅದರ ಬೆನ್ನಲ್ಲೇ ಶಾರುಖ್​ ಖಾನ್​ ನಿರ್ಮಾಣದ ಒಂದು ಸಿನಿಮಾದಿಂದಲೂ ಕಾರ್ತಿಕ್​ಗೆ ಗೇಟ್​ ಪಾಸ್​ ನೀಡಲಾಗಿದೆ ಎಂಬ ಸುದ್ದಿ ಕೇಳಿಬಂದಿದೆ.

ಶಾರುಖ್​ ನಿರ್ಮಾಣದ ಆ ಸಿನಿಮಾಗೆ ಅಜಯ್​ ಬಹ್ಲ್​ ನಿರ್ದೇಶನ ಮಾಡುತ್ತಿದ್ದಾರೆ. ಕೆಲವು ವಿಚಾರಗಳಲ್ಲಿ ಚಿತ್ರತಂಡದ ಜೊತೆ ಕಾರ್ತಿಕ್​ಗೆ ಕಿರಿಕ್​ ಆಗಿದೆ. ಅಷ್ಟೇ ಅಲ್ಲದೇ ನಾಯಕಿ ಆಯ್ಕೆಯಲ್ಲಿಯೂ ಅಸಮಾಧಾನ ಭುಗಿಲೆದ್ದಿದೆ. ನಾಯಕಿಯಾಗಿ ಕತ್ರಿನಾ ಕೈಫ್​ ಆಯ್ಕೆ ಆಗಲಿ ಎಂಬುದು ಚಿತ್ರತಂಡದ ಅಭಿಪ್ರಾಯ. ಆದರೆ ಇದೊಂದು ರೊಮ್ಯಾಂಟಿಕ್​ ಲವ್​ಸ್ಟೋರಿ ಆಗಿರುವುದರಿಂದ ತಮ್ಮ ಜೊತೆ ಕತ್ರಿನಾ ನಟಿಸಿದರೆ ಅವರು ವಯಸ್ಸಿನಲ್ಲಿ ದೊಡ್ಡವರ ರೀತಿ ಕಾಣುತ್ತಾರೆ ಎಂಬುದು ಕಾರ್ತಿಕ್​ ತಕರಾರು. ಇದೇ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಿದ ಬಳಿಕ ಆ ಸಿನಿಮಾದಿಂದ ಕಾರ್ತಿಕ್​ ಅವರನ್ನು ಕೈ ಬಿಡಲಾಗಿದೆ ಎಂಬ ಗುಸಗುಸು ಹರಡಿದೆ.

ನಟ ಸುಶಾಂತ್​ ಸಿಂಗ್​ ರಜಪೂತ್​ ಕೂಡ ಇದೇ ರೀತಿ ಅನೇಕ ಸಮಸ್ಯೆಗಳನ್ನು ಎದುರಿಸಿದ್ದರು. ದೊಡ್ಡ ದೊಡ್ಡ ನಿರ್ಮಾಪಕರು ಅವರ ವಿರುದ್ಧ ಷಡ್ಯಂತ್ರ ನಡೆಸಿದರು ಎಂಬ ಮಾತು ಮೊದಲಿನಿಂದಲೂ ಕೇಳಿಬರುತ್ತಲೇ ಇದೆ. ನಟಿ ಕಂಗನಾ ರಣಾವತ್​ ಅವರಂತೂ ಈ ವಿಚಾರವಾಗಿ ಕರಣ್​ ಜೋಹರ್​, ಮಹೇಶ್​ ಭಟ್​ ಮುಂತಾದವರ ವಿರುದ್ಧ ಹಲವು ಬಾರಿ ಗುಡುಗಿದ್ದಾರೆ. ಈಗ ಕಾರ್ತಿಕ್​ ಆರ್ಯನ್​ ಕೂಡ ದೊಡ್ಡ ಪ್ರೊಡಕ್ಷನ್​ ಕಂಪನಿಗಳನ್ನು ಎದುರುಹಾಕಿಕೊಳ್ಳುತ್ತಿದ್ದಾರೆ. ಅವರ ಭವಿಷ್ಯದ ಬಗ್ಗೆ ಫ್ಯಾನ್ಸ್​ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ:

ಕಾರ್ತಿಕ್​ ಆರ್ಯನ್​ಗೆ ಗೇಟ್​ ಪಾಸ್​ ಕೊಟ್ಟ ಬೆನ್ನಲ್ಲೇ ಕರಣ್​​ ಜೋಹರ್​ಗೆ ಬಿಗ್​ ಶಾಕ್​

ಸುಶಾಂತ್ ರೀತಿ ಕಾರ್ತಿಕ್ ಆರ್ಯನ್​ಗೂ ಆತ್ಮಹತ್ಯೆ ಮಾಡಿಕೊಳ್ಳುವಂತೆ ಒತ್ತಾಯಿಸಬೇಡಿ; ಕರಣ್​​​ಗೆ ಕಂಗನಾ ಛೀಮಾರಿ

ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ