AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಸಿಂಗ್​ ರಜಪೂತ್ ರೀತಿಯೇ ಕಾರ್ತಿಕ್​ ಆರ್ಯನ್​ಗೆ ಅನ್ಯಾಯ ಆಗಲು ಕತ್ರಿನಾ ಕಾರಣವೇ?

ಸುಶಾಂತ್​ ರೀತಿಯೇ ಕಾರ್ತಿಕ್​ ಆರ್ಯನ್​ ಕೂಡ ದೊಡ್ಡ ಪ್ರೊಡಕ್ಷನ್​ ಕಂಪನಿಗಳನ್ನು ಎದುರು ಹಾಕಿಕೊಳ್ಳುತ್ತಿದ್ದಾರೆ. ಅವರ ಭವಿಷ್ಯದ ಬಗ್ಗೆ ಫ್ಯಾನ್ಸ್​ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಸುಶಾಂತ್​ ಸಿಂಗ್​ ರಜಪೂತ್ ರೀತಿಯೇ ಕಾರ್ತಿಕ್​ ಆರ್ಯನ್​ಗೆ ಅನ್ಯಾಯ ಆಗಲು ಕತ್ರಿನಾ ಕಾರಣವೇ?
ಕಾರ್ತಿಕ್​ ಆರ್ಯನ್​, ಕತ್ರಿನಾ ಕೈಫ್​
ಮದನ್​ ಕುಮಾರ್​
|

Updated on: May 30, 2021 | 12:38 PM

Share

ಬಾಲಿವುಡ್​ನಲ್ಲಿ ನಟ ಕಾರ್ತಿಕ್​ ಆರ್ಯನ್​ ಅವರು ಈಗತಾನೇ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ತಾನೊಬ್ಬ ಭರವಸೆಯ ನಟ ಎಂಬುದನ್ನು ಅವರು ಈಗಾಗಲೇ ಸಾಬೀತುಪಡಿಸಿದ್ದಾರೆ. ‘ಪ್ಯಾರ್​ ಕೆ ಪಂಚನಾಮ’, ‘ಸೋನು ಕೆ ಟಿಟು ಕೆ ಸ್ವೀಟಿ’ ಮುಂತಾದ ಸಿನಿಮಾಗಳ ಮೂಲಕ ಅವರು ಗಮನ ಸೆಳೆದಿದ್ದಾರೆ. ಆದರೆ ದೊಡ್ಡ ಮಂದಿಯ ಪ್ರಭಾವದಿಂದಾಗಿ ಅವರು ಈಗ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಎರಡು ಬಹುನಿರೀಕ್ಷಿತ ಸಿನಿಮಾಗಳಿಂದ ಅವರನ್ನು ಹೊರಹಾಕಲಾಗಿದೆ. ಈ ಎಲ್ಲ ಕಿರಿಕ್​ಗಳ ಜೊತೆಯಲ್ಲಿ ನಟಿ ಕತ್ರಿನಾ ಕೈಫ್​ ಹೆಸರು ಕೂಡ ಕೇಳಿಬರುತ್ತಿದೆ.

ಕರಣ್​ ಜೋಹರ್​ ನಿರ್ಮಾಣ ಮಾಡುತ್ತಿರುವ ‘ದೋಸ್ತಾನಾ 2’ ಸಿನಿಮಾದಿಂದ ಕಾರ್ತಿಕ್​ ಆರ್ಯನ್​ ಅವರನ್ನು ಹೊರದಬ್ಬಲಾಯಿತು. ಭವಿಷ್ಯದಲ್ಲಿ ಇನ್ನೆಂದೂ ತಾವು ಕಾರ್ತಿಕ್​ ಆರ್ಯನ್​ ಜೊತೆಗೆ ಕೆಲಸ ಮಾಡುವುದಿಲ್ಲ ಎಂದು ಕರಣ್​ ಜೋಹರ್ ಶಪಥ ಮಾಡಿದ್ದಾರೆ ಎಂದು ಕೂಡ ಸುದ್ದಿ ಆಗಿದೆ. ಅದರ ಬೆನ್ನಲ್ಲೇ ಶಾರುಖ್​ ಖಾನ್​ ನಿರ್ಮಾಣದ ಒಂದು ಸಿನಿಮಾದಿಂದಲೂ ಕಾರ್ತಿಕ್​ಗೆ ಗೇಟ್​ ಪಾಸ್​ ನೀಡಲಾಗಿದೆ ಎಂಬ ಸುದ್ದಿ ಕೇಳಿಬಂದಿದೆ.

ಶಾರುಖ್​ ನಿರ್ಮಾಣದ ಆ ಸಿನಿಮಾಗೆ ಅಜಯ್​ ಬಹ್ಲ್​ ನಿರ್ದೇಶನ ಮಾಡುತ್ತಿದ್ದಾರೆ. ಕೆಲವು ವಿಚಾರಗಳಲ್ಲಿ ಚಿತ್ರತಂಡದ ಜೊತೆ ಕಾರ್ತಿಕ್​ಗೆ ಕಿರಿಕ್​ ಆಗಿದೆ. ಅಷ್ಟೇ ಅಲ್ಲದೇ ನಾಯಕಿ ಆಯ್ಕೆಯಲ್ಲಿಯೂ ಅಸಮಾಧಾನ ಭುಗಿಲೆದ್ದಿದೆ. ನಾಯಕಿಯಾಗಿ ಕತ್ರಿನಾ ಕೈಫ್​ ಆಯ್ಕೆ ಆಗಲಿ ಎಂಬುದು ಚಿತ್ರತಂಡದ ಅಭಿಪ್ರಾಯ. ಆದರೆ ಇದೊಂದು ರೊಮ್ಯಾಂಟಿಕ್​ ಲವ್​ಸ್ಟೋರಿ ಆಗಿರುವುದರಿಂದ ತಮ್ಮ ಜೊತೆ ಕತ್ರಿನಾ ನಟಿಸಿದರೆ ಅವರು ವಯಸ್ಸಿನಲ್ಲಿ ದೊಡ್ಡವರ ರೀತಿ ಕಾಣುತ್ತಾರೆ ಎಂಬುದು ಕಾರ್ತಿಕ್​ ತಕರಾರು. ಇದೇ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಿದ ಬಳಿಕ ಆ ಸಿನಿಮಾದಿಂದ ಕಾರ್ತಿಕ್​ ಅವರನ್ನು ಕೈ ಬಿಡಲಾಗಿದೆ ಎಂಬ ಗುಸಗುಸು ಹರಡಿದೆ.

ನಟ ಸುಶಾಂತ್​ ಸಿಂಗ್​ ರಜಪೂತ್​ ಕೂಡ ಇದೇ ರೀತಿ ಅನೇಕ ಸಮಸ್ಯೆಗಳನ್ನು ಎದುರಿಸಿದ್ದರು. ದೊಡ್ಡ ದೊಡ್ಡ ನಿರ್ಮಾಪಕರು ಅವರ ವಿರುದ್ಧ ಷಡ್ಯಂತ್ರ ನಡೆಸಿದರು ಎಂಬ ಮಾತು ಮೊದಲಿನಿಂದಲೂ ಕೇಳಿಬರುತ್ತಲೇ ಇದೆ. ನಟಿ ಕಂಗನಾ ರಣಾವತ್​ ಅವರಂತೂ ಈ ವಿಚಾರವಾಗಿ ಕರಣ್​ ಜೋಹರ್​, ಮಹೇಶ್​ ಭಟ್​ ಮುಂತಾದವರ ವಿರುದ್ಧ ಹಲವು ಬಾರಿ ಗುಡುಗಿದ್ದಾರೆ. ಈಗ ಕಾರ್ತಿಕ್​ ಆರ್ಯನ್​ ಕೂಡ ದೊಡ್ಡ ಪ್ರೊಡಕ್ಷನ್​ ಕಂಪನಿಗಳನ್ನು ಎದುರುಹಾಕಿಕೊಳ್ಳುತ್ತಿದ್ದಾರೆ. ಅವರ ಭವಿಷ್ಯದ ಬಗ್ಗೆ ಫ್ಯಾನ್ಸ್​ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ:

ಕಾರ್ತಿಕ್​ ಆರ್ಯನ್​ಗೆ ಗೇಟ್​ ಪಾಸ್​ ಕೊಟ್ಟ ಬೆನ್ನಲ್ಲೇ ಕರಣ್​​ ಜೋಹರ್​ಗೆ ಬಿಗ್​ ಶಾಕ್​

ಸುಶಾಂತ್ ರೀತಿ ಕಾರ್ತಿಕ್ ಆರ್ಯನ್​ಗೂ ಆತ್ಮಹತ್ಯೆ ಮಾಡಿಕೊಳ್ಳುವಂತೆ ಒತ್ತಾಯಿಸಬೇಡಿ; ಕರಣ್​​​ಗೆ ಕಂಗನಾ ಛೀಮಾರಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ