AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸ್​ ಆಫೀಸ್​​ನಲ್ಲಿ ದಾಖಲೆ ಬರೆದ ‘ಕರುಪ್ಪು’ ಸಿನಿಮಾ; 300 ಕೋಟಿ ರೂಪಾಯಿ ಕಲೆಕ್ಷನ್

ಕರುಪ್ಪು ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ 300 ಕೋಟಿ ಗಳಿಸಿ ಧೂಳೆಬ್ಬಿಸಿದೆ. ಸೂರ್ಯ-ತ್ರಿಷಾ ಜೋಡಿಯ ಈ ಚಿತ್ರ ಅವರ ವೃತ್ತಿಜೀವನದಲ್ಲಿ ದೊಡ್ಡ ಮೈಲಿಗಲ್ಲು. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದಿರುವ ಈ ಚಿತ್ರದ ಭರ್ಜರಿ ಯಶಸ್ಸಿನ ನಂತರ, ನಿರ್ದೇಶಕ ಆರ್. ಜೆ. ಬಾಲಾಜಿ 'ಕರುಪ್ಪು 2' ಸೀಕ್ವೆಲ್ ಬಗ್ಗೆ ಯೋಜನೆ ಹಂಚಿಕೊಂಡಿದ್ದು, ರಾಜಕೀಯ ಮತ್ತು ದೇವರ ನಡುವಿನ ಸಂಘರ್ಷದ ಕಥಾವಸ್ತುವನ್ನು ನಿರೀಕ್ಷಿಸಲಾಗಿದೆ.

ಬಾಕ್ಸ್​ ಆಫೀಸ್​​ನಲ್ಲಿ ದಾಖಲೆ ಬರೆದ 'ಕರುಪ್ಪು' ಸಿನಿಮಾ; 300 ಕೋಟಿ ರೂಪಾಯಿ ಕಲೆಕ್ಷನ್
ಕರುಪ್ಪು ಸಿನಿಮಾ Image Credit source: Karuppu Movie
ರಾಜೇಶ್ ದುಗ್ಗುಮನೆ
|

Updated on: May 30, 2026 | 7:32 AM

Share

ಕಾಲಿವುಡ್ ನಟ ಸೂರ್ಯ ಮತ್ತು ಬಹುಭಾಷಾ ನಟಿ ತ್ರಿಷಾ ಅಭಿನಯದ ‘ಕರುಪ್ಪು’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಮೇ 15ರಂದು ಬಿಡುಗಡೆಯಾದ ಈ ಚಿತ್ರ ಪ್ರೇಕ್ಷಕರ ಮನಗೆದ್ದಿದೆ. ಇದೀಗ ವಿಶ್ವಾದ್ಯಂತ ಬರೋಬ್ಬರಿ 300 ಕೋಟಿ ರೂಪಾಯಿ ಗಳಿಕೆ ಮಾಡುವ ಮೂಲಕ ದಾಖಲೆ ಬರೆದಿದೆ. ನಟ ಸೂರ್ಯ ಮತ್ತು ತ್ರಿಷಾ ಜೋಡಿಯ ಈ ಅದ್ಭುತ ಯಶಸ್ಸನ್ನು ಚಿತ್ರತಂಡ ಸಂಭ್ರಮಿಸಿದೆ.

ನಿರ್ಮಾಣ ಸಂಸ್ಥೆ ‘ಡ್ರೀಮ್ ವಾರಿಯರ್ ಪಿಕ್ಚರ್ಸ್’ ಈ ಕುರಿತು ಪೋಸ್ಟರ್ ಹಂಚಿಕೊಂಡಿದ್ದು, ‘ಬಾಕ್ಸ್ ಆಫೀಸ್‌ನಲ್ಲಿ ಸೂರ್ಯ ಅವರ ಬಿಗ್ಗೆಸ್ಟ್ ಬ್ಲಾಸ್ಟ್ ಕರುಪ್ಪು ವಿಶ್ವಾದ್ಯಂತ 300 ಕೋಟಿ ಗ್ರಾಸ್ ಕಲೆಕ್ಷನ್ ಮಾಡಿದ್ದು, ಮೆಗಾ ಬ್ಲಾಕ್‌ಬಸ್ಟರ್ ಆಗಿ ಹೊರಹೊಮ್ಮಿದೆ’ ಎಂದು ಬರೆದುಕೊಂಡಿದೆ. ಭಾರತದಲ್ಲೇ ಈ ಸಿನಿಮಾ ಬರೋಬ್ಬರಿ 194.55 ಕೋಟಿ ರೂ. ಗ್ರಾಸ್ ಕಲೆಕ್ಷನ್ ಮಾಡಿದೆ. ನೆಟ್ ಕಲೆಕ್ಷನ್ 168.15 ಕೋಟಿ ರೂ. ಆಗಿದೆ.

‘ಕರುಪ್ಪು’ ಸಿನಿಮಾ ಸೂರ್ಯ ಮತ್ತು ತ್ರಿಷಾ ಇಬ್ಬರ ಕೆರಿಯರ್‌ನಲ್ಲೂ ದೊಡ್ಡ ಮೈಲಿಗಲ್ಲಾಗಿದೆ. ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರವನ್ನು ಪ್ರೇಕ್ಷಕರು ಮುಗಿಬಿದ್ದು ನೋಡುತ್ತಿದ್ದು, ಇಬ್ಬರ ನಟನೆಗೆ ಮೆಚ್ಚುಗೆ ಸಿಗುತ್ತಿದೆ. ಆರ್. ಜೆ. ಬಾಲಾಜಿ ನಿರ್ದೇಶನದ ಈ ಚಿತ್ರಕ್ಕೆ ಸಾಯಿ ಅಭ್ಯಂಕರ್ ಸಂಗೀತ ನೀಡಿದ್ದು, ಜಿ. ಕೆ. ವಿಷ್ಣು ಅವರ ಛಾಯಾಗ್ರಹಣವಿದೆ. ಸೂರ್ಯ ಮತ್ತು ತ್ರಿಷಾ ಜೊತೆಗೆ ಇಂದ್ರನ್ಸ್ ಹಾಗೂ ಅನಘಾ ಮಾಯಾ ರವಿ ಪ್ರಮುಖ ಪಾತ್ರಗಳಲ್ಲಿ ಮಿಂಚಿದ್ದಾರೆ.

‘ಕರುಪ್ಪು 2’ ಸೀಕ್ವೆಲ್ ಬಗ್ಗೆ ನಿರ್ದೇಶಕರ ಪ್ಲಾನ್!

ಚಿತ್ರದ ಭರ್ಜರಿ ಗೆಲುವಿನ ಬೆನ್ನಲ್ಲೇ ನಿರ್ದೇಶಕ ಆರ್. ಜೆ. ಬಾಲಾಜಿ ಸೀಕ್ವೆಲ್ ಮಾಡುವ ಆಲೋಚನೆಯನ್ನು ಹಂಚಿಕೊಂಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ‘ಒಂದು ವೇಳೆ ಕರುಪ್ಪು ಚಿತ್ರಕ್ಕೆ ಸೀಕ್ವೆಲ್ ಸಾಧ್ಯವಾದರೆ, ಈ ಬಾರಿ ದೇವರು ಮತ್ತು ರಾಜಕೀಯ ನಡುವಿನ ಸಂಘರ್ಷವನ್ನು ತೋರಿಸಲು ಬಯಸುತ್ತೇನೆ. ನನ್ನ ಹಿಂದಿನ ಮೂಕುದಿ ಅಮ್ಮನ್ ಸಿನಿಮಾ ದೇವರು ಮತ್ತು ನಕಲಿ ಸ್ವಾಮೀಜಿ ನಡುವಿನ ಕಥೆಯಾಗಿತ್ತು. ಈಗಿನ ಕರುಪ್ಪು ಸಿನಿಮಾ ದೇವರು ಮತ್ತು ನ್ಯಾಯಾಂಗ ನಡುವಿನ ಹೋರಾಟವಾಗಿದೆ. ಮುಂದಿನ ಚಿತ್ರದಲ್ಲಿ ರಾಜಕೀಯವನ್ನು ತರಲಿದ್ದೇನೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಇಳಯರಾಜಾ ಬಗ್ಗೆ ವ್ಯಂಗ್ಯ: ಕ್ಷಮೆಯಾಚಿಸಿದ ‘ಕರುಪ್ಪು’ ಚಿತ್ರತಂಡ

ಆದರೆ ಈ ಕಥೆಯ ಮೇಲೆ ಕೆಲಸ ಮಾಡಲು ತಮಗೆ ಇನ್ನೂ ಸ್ವಲ್ಪ ಸಮಯ ಬೇಕು ಎಂದಿರುವ ಅವರು, ಪ್ರೇಕ್ಷಕರು ಮೊದಲ ಭಾಗವನ್ನು ಮರೆತ ನತರವೇ ಅತ್ಯುತ್ತಮವಾದ ಸೀಕ್ವೆಲ್ ಕೊಡುವ ಯೋಜನೆ ನನ್ನದು ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ